ಜಿಲ್ಲೆಗಳು

ಕಬ್ಬಿನ ಗದ್ದೆಯಲ್ಲಿ ಚಿರತೆ ಸಂಸಾರ

ತಿ. ನರಸೀಪುರ: ಚಿರತೆ ಹಾವಳಿಯಿಂದ ತತ್ತರಿಸಿರುವ ತಿ. ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಬಿ.ಸೀಹಳ್ಳಿ ಗ್ರಾಮದಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.
ಶುಕ್ರವಾರ ಮಧ್ಯಾಹ್ನ ರೈತರು ಜಮೀನಿನಲ್ಲಿ ಕಬ್ಬು ಕಟಾವು ಮಾಡುತ್ತಿದ್ದಾಗ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ತಕ್ಷಣ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಅಧಿಕಾರಿಗಳು ಈಗ ಮರಿ ಚಿರತೆಗಳನ್ನು ಬೋನಿನಲ್ಲಿಟ್ಟು ತಾಯಿ ಚಿರತೆಯನ್ನು ಹಿಡಿಯುವ ಪ್ರಯತ್ನ ನಡೆಸಿದ್ದಾರೆ. ಮೂರೂ ಮರಿಗಳನ್ನು ಒಂದೇ ಬೋನಿನಲ್ಲಿ ಇರಿಸಲಾಗಿದ್ದು ತಾಯಿ ಚಿರತೆ ಇವುಗಳನ್ನು ಹುಡುಕಿಕೊಂಡು ಬರುವ ನಿರೀಕ್ಷೆ ಇದೆ.


ತಾಲೂಕಿನಲ್ಲಿ ಒಂದು ತಿಂಗಳ ಅವಧಿಯಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡ ಚಿರತೆಗಳನ್ನು ಸೆರೆ ಹಿಡಿಯಲು ಶೋಧ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಈ ಮರಿಗಳು ಪತ್ತೆಯಾಗಿವೆ. ತಾಯಿ ಚಿರತೆ ಮರಿಗಳ ಜತೆ ಇರುತ್ತಿದ್ದರೆ ರೈತರ ಮೇಲೆ ದಾಳಿ ಮಾಡುವ ಸಂಭವ ಇತ್ತು. ಆದರೆ ಅದು ಗ್ರಾಮಸ್ಥರ ಸದ್ದು ಕೇಳಿ ಚಿರತೆ ಸುರಕ್ಷಿತ ಸ್ಥಳಕ್ಕೆ ಪಲಾಯನ ಮಾಡಿದೆ.
ಚಿರತೆಗಳು ಊರೊಳಗೆ ಬಂದು ಕಬ್ಬಿನ ಗದ್ದೆಯಲ್ಲಿ ಮರಿ ಹಾಕುತ್ತಿವೆ ಎಂಬ ಗ್ರಾಮಸ್ಥರ ಹೇಳಿಕೆ ನಿಜವಾಗಿದ್ದು ಕಬ್ಬಿನ ಗದ್ದೆ ಕಟಾವಿಗೆ ಸಿದ್ದವಾಗಿರುವ ರೈತರಲ್ಲಿ ಆತಂಕ ಮೂಡಿಸಿದೆ.
ಎರಡು ವಾರಗಳ ಹಿಂದಷ್ಟೇ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ರಮೇಶ್ ನಾಯಕ ಎಂಬುವರ ಪುತ್ರಿ ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಮೇಘನಾ (22) ಚಿರತೆ ದಾಳಿಗೆ ಬಲಿಯಾಗಿದ್ದಳು. ಇದಕ್ಕೂ ಮುನ್ನ ಮಹಾರಾಜ ಕಾಲೇಜು ವಿದ್ಯಾರ್ಥಿಯೊಬ್ಬ ಚಿರತೆ ದಾಳಿಯಲ್ಲಿ ಮೃತಪಟ್ಟಿದ್ದ.

andolanait

Recent Posts

ಸೋಮವಾರಪೇಟೆಯಲ್ಲಿ ಗ್ಯಾಸ್ ಸೋರಿಕೆಗೆ ಯುವತಿ ಸಾವು

ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್‌ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…

1 hour ago

ರಾಜ್ಯದಲ್ಲಿ ಎಂಟು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…

2 hours ago

ಚಿರತೆ ದಾಳಿಗೆ ನಾಯಿ ಸಾವು: ಗ್ರಾಮಸ್ಥರಲ್ಲಿ ಭೀತಿ

ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…

2 hours ago

ಎಲ್‌ಪಿಜಿ ದರ ಭಾರತದಲ್ಲೇ ಅಗ್ಗ: ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಸಮರ್ಥನೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್…

3 hours ago

ಬಾವಿಗೆ ಬಿದ್ದಿದ್ದ ಹಸು ರಕ್ಷಣೆ

ಮಹಾದೇಶ್‌ ಎಂ ಗೌಡ:  ಹನೂರು ತಾಲ್ಲೂಕು ವರದಿಗಾರರು  ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…

3 hours ago

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

4 hours ago