ಜಿಲ್ಲೆಗಳು

ಕಬ್ಬಿನ ಗದ್ದೆಯಲ್ಲಿ ಚಿರತೆ ಸಂಸಾರ

ತಿ. ನರಸೀಪುರ: ಚಿರತೆ ಹಾವಳಿಯಿಂದ ತತ್ತರಿಸಿರುವ ತಿ. ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಬಿ.ಸೀಹಳ್ಳಿ ಗ್ರಾಮದಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.
ಶುಕ್ರವಾರ ಮಧ್ಯಾಹ್ನ ರೈತರು ಜಮೀನಿನಲ್ಲಿ ಕಬ್ಬು ಕಟಾವು ಮಾಡುತ್ತಿದ್ದಾಗ ಮೂರು ಚಿರತೆ ಮರಿಗಳು ಪತ್ತೆಯಾಗಿವೆ. ತಕ್ಷಣ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಅಧಿಕಾರಿಗಳು ಈಗ ಮರಿ ಚಿರತೆಗಳನ್ನು ಬೋನಿನಲ್ಲಿಟ್ಟು ತಾಯಿ ಚಿರತೆಯನ್ನು ಹಿಡಿಯುವ ಪ್ರಯತ್ನ ನಡೆಸಿದ್ದಾರೆ. ಮೂರೂ ಮರಿಗಳನ್ನು ಒಂದೇ ಬೋನಿನಲ್ಲಿ ಇರಿಸಲಾಗಿದ್ದು ತಾಯಿ ಚಿರತೆ ಇವುಗಳನ್ನು ಹುಡುಕಿಕೊಂಡು ಬರುವ ನಿರೀಕ್ಷೆ ಇದೆ.


ತಾಲೂಕಿನಲ್ಲಿ ಒಂದು ತಿಂಗಳ ಅವಧಿಯಲ್ಲಿ ಇಬ್ಬರನ್ನು ಬಲಿ ತೆಗೆದುಕೊಂಡ ಚಿರತೆಗಳನ್ನು ಸೆರೆ ಹಿಡಿಯಲು ಶೋಧ ಕಾರ್ಯಾಚರಣೆ ನಡೆಯುತ್ತಿರುವಾಗಲೇ ಈ ಮರಿಗಳು ಪತ್ತೆಯಾಗಿವೆ. ತಾಯಿ ಚಿರತೆ ಮರಿಗಳ ಜತೆ ಇರುತ್ತಿದ್ದರೆ ರೈತರ ಮೇಲೆ ದಾಳಿ ಮಾಡುವ ಸಂಭವ ಇತ್ತು. ಆದರೆ ಅದು ಗ್ರಾಮಸ್ಥರ ಸದ್ದು ಕೇಳಿ ಚಿರತೆ ಸುರಕ್ಷಿತ ಸ್ಥಳಕ್ಕೆ ಪಲಾಯನ ಮಾಡಿದೆ.
ಚಿರತೆಗಳು ಊರೊಳಗೆ ಬಂದು ಕಬ್ಬಿನ ಗದ್ದೆಯಲ್ಲಿ ಮರಿ ಹಾಕುತ್ತಿವೆ ಎಂಬ ಗ್ರಾಮಸ್ಥರ ಹೇಳಿಕೆ ನಿಜವಾಗಿದ್ದು ಕಬ್ಬಿನ ಗದ್ದೆ ಕಟಾವಿಗೆ ಸಿದ್ದವಾಗಿರುವ ರೈತರಲ್ಲಿ ಆತಂಕ ಮೂಡಿಸಿದೆ.
ಎರಡು ವಾರಗಳ ಹಿಂದಷ್ಟೇ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದ ರಮೇಶ್ ನಾಯಕ ಎಂಬುವರ ಪುತ್ರಿ ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಮೇಘನಾ (22) ಚಿರತೆ ದಾಳಿಗೆ ಬಲಿಯಾಗಿದ್ದಳು. ಇದಕ್ಕೂ ಮುನ್ನ ಮಹಾರಾಜ ಕಾಲೇಜು ವಿದ್ಯಾರ್ಥಿಯೊಬ್ಬ ಚಿರತೆ ದಾಳಿಯಲ್ಲಿ ಮೃತಪಟ್ಟಿದ್ದ.

andolanait

Recent Posts

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

2 hours ago

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

3 hours ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

3 hours ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

4 hours ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

4 hours ago

ಟ್ರಂಪ್‌ ಹೇಳಿದ್ದನ್ನು ಪಾಲಿಸಲು ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು: ರಾಹುಲ್‌ ಗಾಂಧಿ

ಚೆನ್ನೈ: ಇರಾನ್-ಇಸ್ರೇಲ್‌ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…

4 hours ago