ಜಿಲ್ಲೆಗಳು

ತಿ.ನರಸೀಪುರ: ಗ್ರಾಮಸ್ಥರ ನಿದ್ದೆಗೆಡಿಸುತ್ತಿವೆ ಚಿರತೆಗಳು

ಮೈಸೂರು: ಮಹಾರಾಜ ಕಾಲೇಜಿನ ವಿದ್ಯಾರ್ಥಿ ಚಿರತೆಗೆ ಆಹಾರವಾದ ತಿ.ನರಸೀಪುರದ ಮಲ್ಲಪ್ಪನ ಬೆಟ್ಟದ ಸುತ್ತಮುತ್ತ ಜೋಡಿ ಚಿರತೆಗಳು ಹಾಡಹಗಲಲ್ಲೇ ಕಾಣಿಸಿಕೊಳ್ಳುತ್ತಿದ್ದು ಗ್ರಾಮಸ್ಥರು ಭಯಬೀತರಾಗಿದ್ದಾರೆ.

ತಿ.ನರಸೀಪುರದ ತಾಲ್ಲೂಕಿನ ಮದ್ಗಾರ್ ಲಿಂಗಯ್ಯನ ಹುಂಡಿ ಗ್ರಾಮದಲ್ಲಿ ಕಾರ್ತಿಕ ಜಾತ್ರೆಗೆಂದು ಹೊರಟ ಯುವಕನ ಮೇಲೆ ಸೋಮವಾರ ಚಿರತೆ ದಾಳಿ ಮಾಡಿ ಕೊಂದು ಹಾಕಿತ್ತು. ಮೈಸೂರಿನ ಮಹಾರಾಜ ಕಾಲೇಜಿನ ಬಿಕಾಂ ವಿದ್ಯಾರ್ಥಿಯಾದ, ಗ್ರಾಮದ ಚನ್ನಮಲ್ಲದೇವರು ಎಂಬವರ ಪುತ್ರ ಮಂಜುನಾಥ್( ೧೯) ಚಿರತೆಗೆ ಬಲಿಯಾದ ಬಳಿಕ ಅರಣ್ಯ ಇಲಾಖೆ ಬೋನು ಇರಿಸಿ ಚಿರತೆಗಳನ್ನು ಸೆರೆ ಹಿಡಿಯುವ ಪ್ರಯತ್ನ ನಡೆಸಿದೆ. ಈ ನಡುವೆ ಬೆಟ್ಟದ ಮೇಲೆ ಎರಡು ಚಿರತೆಗಳು ಕಾಣಸಿಕೊಂಡಿವೆ.

ತಿ.ನರಸೀಪುರ ತಾಲ್ಲೂಕಿನ ಸೋಸಲೆ ಹೋಬಳಿ ಉಕ್ಕಲಗೆರೆ ಸುತ್ತಮುತ್ತ ಚಿರತೆ ಕಾಟವಿದ್ದರೂ ಜನರ ಮೇಲೆ ಎಂದೂ ದಾಳಿ ಮಾಡಿರಲಿಲ್ಲ. ಆದರೆ ಸ್ನೇಹಿತರ ಗುಂಪಿನಲ್ಲಿದ್ದ ವಿದ್ಯಾರ್ಥಿ ಮೇಲೆ ಎರಗಿ ದಾಳಿ ಮಾಡಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ಹಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಕಾಟವಿದೆ. ಮಹದೇವಮ್ಮ ಎಂಬುವರ ಮನೆಗೆ ನುಗ್ಗಿ ಮೇಕೆಗಳನ್ನು ಚಿರತೆ ಹೊತ್ತೊಯ್ದಿತ್ತು. ನಾಯಿಗಳ ಮೇಲೂ ದಾಳಿ ಮಾಡಿತ್ತು. ಮಲ್ಲಪ್ಪನ ಬೆಟ್ಟದ ಸುತ್ತ ಮುತ್ತಲಿನ ಗ್ರಾಮದ ಜನ ರಾತ್ರಿ ವೇಳೆ ಹೊರಗೆ ಬರಲು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆ ಗಸ್ತು ತಿರುಗುತ್ತಿಲ್ಲ ಎನ್ನುವುದು ಗ್ರಾಮಸ್ಥರ ದೂರು.

ಮೈಸೂರು ಭಾಗದಲ್ಲಿ ಚಿರತೆ ಉಪಟಳ ಹೆಚ್ಚಾಗಿರುವ ನಡುವೆಯೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಿಎಫ್ ಡಾ.ಮಾಲತಿಪ್ರಿಯ, ಡಿಸಿಎಫ್ ಕಮಲಾ ಕರಿಕಾಳನ್ ಅವರ ಮಾರ್ಗದರ್ಶನದಲ್ಲಿ ಎಸಿಎಫ್ ಶಿವರಾಮ್ ಹಾಗೂ ತಂಡ ಗ್ರಾಮದಲ್ಲಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಿದೆ. ಆರ್‌ಎಫ್‌ಒ ಅವರ ನೇತೃತ್ವದ ತಂಡ ಮೂರು ಬೋನುಗಳನ್ನು ಇರಿಸಿದೆ.

೧೫ ಚಿರತೆ ಸೆರೆ :

ಮೈಸೂರು ಭಾಗದಲ್ಲಿ ಕಳೆದ ಆರು ತಿಂಗಳಲ್ಲಿ ೧೫ ಚಿರತೆಗಳು ಸೆರೆ ಹಿಡಿಯಾಗಿರುವುದು ಚಿರತೆಗಳ ಹಾವಳಿ ಹೆಚ್ಚಳಕ್ಕೆ ಸಾಕ್ಷಿಯಾಗಿದೆ ಕೆಆರ್‌ಎಸ್, ಮೈಸೂರಿನ ಆರ್‌ಬಿಐ ಘಟಕದ ಆವರಣದಲ್ಲಿ ಪತ್ತೆಯಾದ ಚಿರತೆ ಇನ್ನೂ ಬೋನಿಗೆ ಬಿದ್ದಿಲ್ಲ.

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

48 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago