ಜಿಲ್ಲೆಗಳು

ತಿ.ನರಸೀಪುರ: ಗ್ರಾಮಸ್ಥರ ನಿದ್ದೆಗೆಡಿಸುತ್ತಿವೆ ಚಿರತೆಗಳು

ಮೈಸೂರು: ಮಹಾರಾಜ ಕಾಲೇಜಿನ ವಿದ್ಯಾರ್ಥಿ ಚಿರತೆಗೆ ಆಹಾರವಾದ ತಿ.ನರಸೀಪುರದ ಮಲ್ಲಪ್ಪನ ಬೆಟ್ಟದ ಸುತ್ತಮುತ್ತ ಜೋಡಿ ಚಿರತೆಗಳು ಹಾಡಹಗಲಲ್ಲೇ ಕಾಣಿಸಿಕೊಳ್ಳುತ್ತಿದ್ದು ಗ್ರಾಮಸ್ಥರು ಭಯಬೀತರಾಗಿದ್ದಾರೆ.

ತಿ.ನರಸೀಪುರದ ತಾಲ್ಲೂಕಿನ ಮದ್ಗಾರ್ ಲಿಂಗಯ್ಯನ ಹುಂಡಿ ಗ್ರಾಮದಲ್ಲಿ ಕಾರ್ತಿಕ ಜಾತ್ರೆಗೆಂದು ಹೊರಟ ಯುವಕನ ಮೇಲೆ ಸೋಮವಾರ ಚಿರತೆ ದಾಳಿ ಮಾಡಿ ಕೊಂದು ಹಾಕಿತ್ತು. ಮೈಸೂರಿನ ಮಹಾರಾಜ ಕಾಲೇಜಿನ ಬಿಕಾಂ ವಿದ್ಯಾರ್ಥಿಯಾದ, ಗ್ರಾಮದ ಚನ್ನಮಲ್ಲದೇವರು ಎಂಬವರ ಪುತ್ರ ಮಂಜುನಾಥ್( ೧೯) ಚಿರತೆಗೆ ಬಲಿಯಾದ ಬಳಿಕ ಅರಣ್ಯ ಇಲಾಖೆ ಬೋನು ಇರಿಸಿ ಚಿರತೆಗಳನ್ನು ಸೆರೆ ಹಿಡಿಯುವ ಪ್ರಯತ್ನ ನಡೆಸಿದೆ. ಈ ನಡುವೆ ಬೆಟ್ಟದ ಮೇಲೆ ಎರಡು ಚಿರತೆಗಳು ಕಾಣಸಿಕೊಂಡಿವೆ.

ತಿ.ನರಸೀಪುರ ತಾಲ್ಲೂಕಿನ ಸೋಸಲೆ ಹೋಬಳಿ ಉಕ್ಕಲಗೆರೆ ಸುತ್ತಮುತ್ತ ಚಿರತೆ ಕಾಟವಿದ್ದರೂ ಜನರ ಮೇಲೆ ಎಂದೂ ದಾಳಿ ಮಾಡಿರಲಿಲ್ಲ. ಆದರೆ ಸ್ನೇಹಿತರ ಗುಂಪಿನಲ್ಲಿದ್ದ ವಿದ್ಯಾರ್ಥಿ ಮೇಲೆ ಎರಗಿ ದಾಳಿ ಮಾಡಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.

ಹಲವು ದಿನಗಳಿಂದ ಈ ಭಾಗದಲ್ಲಿ ಚಿರತೆ ಕಾಟವಿದೆ. ಮಹದೇವಮ್ಮ ಎಂಬುವರ ಮನೆಗೆ ನುಗ್ಗಿ ಮೇಕೆಗಳನ್ನು ಚಿರತೆ ಹೊತ್ತೊಯ್ದಿತ್ತು. ನಾಯಿಗಳ ಮೇಲೂ ದಾಳಿ ಮಾಡಿತ್ತು. ಮಲ್ಲಪ್ಪನ ಬೆಟ್ಟದ ಸುತ್ತ ಮುತ್ತಲಿನ ಗ್ರಾಮದ ಜನ ರಾತ್ರಿ ವೇಳೆ ಹೊರಗೆ ಬರಲು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆ ಗಸ್ತು ತಿರುಗುತ್ತಿಲ್ಲ ಎನ್ನುವುದು ಗ್ರಾಮಸ್ಥರ ದೂರು.

ಮೈಸೂರು ಭಾಗದಲ್ಲಿ ಚಿರತೆ ಉಪಟಳ ಹೆಚ್ಚಾಗಿರುವ ನಡುವೆಯೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಿಎಫ್ ಡಾ.ಮಾಲತಿಪ್ರಿಯ, ಡಿಸಿಎಫ್ ಕಮಲಾ ಕರಿಕಾಳನ್ ಅವರ ಮಾರ್ಗದರ್ಶನದಲ್ಲಿ ಎಸಿಎಫ್ ಶಿವರಾಮ್ ಹಾಗೂ ತಂಡ ಗ್ರಾಮದಲ್ಲಿ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಿದೆ. ಆರ್‌ಎಫ್‌ಒ ಅವರ ನೇತೃತ್ವದ ತಂಡ ಮೂರು ಬೋನುಗಳನ್ನು ಇರಿಸಿದೆ.

೧೫ ಚಿರತೆ ಸೆರೆ :

ಮೈಸೂರು ಭಾಗದಲ್ಲಿ ಕಳೆದ ಆರು ತಿಂಗಳಲ್ಲಿ ೧೫ ಚಿರತೆಗಳು ಸೆರೆ ಹಿಡಿಯಾಗಿರುವುದು ಚಿರತೆಗಳ ಹಾವಳಿ ಹೆಚ್ಚಳಕ್ಕೆ ಸಾಕ್ಷಿಯಾಗಿದೆ ಕೆಆರ್‌ಎಸ್, ಮೈಸೂರಿನ ಆರ್‌ಬಿಐ ಘಟಕದ ಆವರಣದಲ್ಲಿ ಪತ್ತೆಯಾದ ಚಿರತೆ ಇನ್ನೂ ಬೋನಿಗೆ ಬಿದ್ದಿಲ್ಲ.

andolanait

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

18 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

18 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

18 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

18 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

18 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

18 hours ago