ತಿ.ನರಸೀಪುರ: ಮಹಿಳೆಯೊಬ್ಬರು ಜಮೀನಿನಲ್ಲಿ ಮೇಯಿಸುತ್ತಿದ್ದ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಕಬ್ಬಿನ ಗದ್ದೆಗೆ ಎಳೆದುಕೊಂಡು ಹೋಗಿರುವ ಘಟನೆ ತಾಲ್ಲೂಕಿನ ಯಾಚೇನಹಳ್ಳಿಯಲ್ಲಿ ನಡೆದಿದೆ.
ತಾಲ್ಲೂಕಿನ ಯಾಚೇನಹಳ್ಳಿ ಗ್ರಾಮದ ಶಿವಮಲ್ಲೇಗೌಡರ ಪತ್ನಿ ಸೌಭಾಗ್ಯ ಎಂಬವರು ಬುಧವಾರ ಮಧ್ಯಾಹ್ನ ಜಮೀನಿನ ಬಳಿ ಆಡುಗಳನ್ನು ಮೇಯಿಸುತ್ತಿದ್ದಾಗ ಚಿರತೆ ದಾಳಿ ಮಾಡಿದೆ. ಒಂದು ಆಡುಮರಿಯನ್ನು ಕಬ್ಬಿನ ಗದ್ದೆ ಒಳಗೆ ಎಳೆದುಕೊಂಡು ಹೋಗಿದೆ.
ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಚಿರತೆ ಎಲ್ಲೂ ಕಂಡುಬಾರದ ಹಿನ್ನೆಲೆಯಲ್ಲಿ ಬೋನನ್ನು ಇಟ್ಟಿದ್ದಾರೆ.ಚಿರತೆ ಸೆರೆ ಹಿಡಿಯಲು, ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅರಣ್ಯ ಅಧಿಕಾರಿ ಮಂಜುನಾಥ್ ತಿಳಿಸಿದ್ದಾರೆ
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…