ಜಿಲ್ಲೆಗಳು

ತಿ.ನರಸೀಪುರ: ಮೇಯಿಸುತ್ತಿದ್ದ ಮೇಕೆಯನ್ನೇ ಹೊತ್ತೊಯ್ದ ಚಿರತೆ

ತಿ.ನರಸೀಪುರ: ಮಹಿಳೆಯೊಬ್ಬರು ಜಮೀನಿನಲ್ಲಿ ಮೇಯಿಸುತ್ತಿದ್ದ ಮೇಕೆಯ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಕಬ್ಬಿನ ಗದ್ದೆಗೆ ಎಳೆದುಕೊಂಡು ಹೋಗಿರುವ ಘಟನೆ ತಾಲ್ಲೂಕಿನ ಯಾಚೇನಹಳ್ಳಿಯಲ್ಲಿ ನಡೆದಿದೆ.
ತಾಲ್ಲೂಕಿನ ಯಾಚೇನಹಳ್ಳಿ ಗ್ರಾಮದ ಶಿವಮಲ್ಲೇಗೌಡರ ಪತ್ನಿ ಸೌಭಾಗ್ಯ ಎಂಬವರು ಬುಧವಾರ ಮಧ್ಯಾಹ್ನ ಜಮೀನಿನ ಬಳಿ ಆಡುಗಳನ್ನು ಮೇಯಿಸುತ್ತಿದ್ದಾಗ ಚಿರತೆ ದಾಳಿ ಮಾಡಿದೆ. ಒಂದು ಆಡುಮರಿಯನ್ನು ಕಬ್ಬಿನ ಗದ್ದೆ ಒಳಗೆ ಎಳೆದುಕೊಂಡು ಹೋಗಿದೆ.
ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಚಿರತೆ ಎಲ್ಲೂ ಕಂಡುಬಾರದ ಹಿನ್ನೆಲೆಯಲ್ಲಿ ಬೋನನ್ನು ಇಟ್ಟಿದ್ದಾರೆ.ಚಿರತೆ ಸೆರೆ ಹಿಡಿಯಲು, ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅರಣ್ಯ ಅಧಿಕಾರಿ ಮಂಜುನಾಥ್ ತಿಳಿಸಿದ್ದಾರೆ

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

49 mins ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

3 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

4 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

4 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

7 hours ago