ಜಿಲ್ಲೆಗಳು

ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವಂತಿದೆ ಈ ಸರ್ಕಾರಿ ಶಾಲೆ

By – ಪ್ರಶಾಂತ್‌ ಎಸ್‌ 

ಸರ್ಕಾರಿ ಶಾಲೆ ಎಂದರೆ ಅಲ್ಲಿ ಸೌಲಭ್ಯಗಳಿಲ್ಲ. ಮಕ್ಕಳ ಶೈಕ್ಷಣಿಕ ಪ್ರಗತಿ ಸಾಧ್ಯವಿಲ್ಲ ಎಂದು ಎಷ್ಟೋ ಪೋಷಕರು ಸಾಲ ಮಾಡಿಯಾದರೂ ತಮ್ಮ ಮಕ್ಕಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಓದಿಸಬೇಕು ಅಂದುಕೊಳ್ಳುತ್ತಾರೆ.
ಪೋಷಕರ ಇಂತಹ ಮನಸ್ಥಿತಿಯನ್ನು ಬದಲಾಯಿಸುವ ಒಂದಿಷ್ಟು ಸರ್ಕಾರಿ ಶಾಲೆಗಳು ನಮ್ಮಲ್ಲಿದ್ದು, ಇರುವ ಸೌಲಭ್ಯಗಳ ಸಮರ್ಪಕ ಬಳಕೆ ಮತ್ತು ಗುಣಮಟ್ಟದ ಶಿಕ್ಷಣದಿಂದಾಗಿ ಖಾಸಗಿ ಶಾಲೆಗಳಿಗೆ ಸಡ್ಡು ಹೊಡೆದು ನಿಂತಿವೆ. ಅದರಲ್ಲಿ ಒಂದು ಮುಖ್ಯಮಂತ್ರಿ ತವರು ಕ್ಷೇತ್ರದ ಕೀಳನಪುರ ಗ್ರಾಮದ ಸರ್ಕಾರಿ ಮಾದರಿ ಕಿರಿಯ ಪ್ರಾಥಮಿಕ ಶಾಲೆ.

ಈ ಶಾಲೆಯ ಮುಖ್ಯ ಆಕರ್ಷಣೆಯೇ ಇಲ್ಲಿನ ಕಟ್ಟಡಕ್ಕೆ ಹಚ್ಚಿರುವ ಬಣ್ಣ. ರೈಲಿನ ಬೋಗಿಗಳಂತೆ ಶಾಲಾ ಕೊಠಡಿಗಳಿಗೆ ಬಣ್ಣ ಹಚ್ಚಲಾಗಿದ್ದು, ಇದು ವಿದ್ಯಾರ್ಥಿಗಳನ್ನು ಆಕರ್ಷಿಸಿದೆ. ಶಾಲೆಯ ಈ ವಿನೂತನ ಪ್ರಯತ್ನ ಜತೆಗೆ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಸೌಕರ್ಯಗಳ ಸಮಪರ್ಕ ಬಳಕೆಗೆ ಒತ್ತು ನೀಡಿರುವ ಪರಿಣಾಮ ಶಾಲೆ ಅಭಿವೃದ್ಧಿಯತ್ತ ಸಾಗುತ್ತಿದೆ.

ಇನ್ನು ಶಾಲೆ ಕಾಂಪೌಂಡ್‌ನಲ್ಲಿ ಮೂಡಿರುವ ಬಣ್ಣದ ಚಿತ್ತಾರ, ಬರಹಗಳು ಮತ್ತಷ್ಟು ಆಕರ್ಷಣೀಯ. ಈ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಎನ್.ಮಾಲಂಗಿ ಸುರೇಶ್ ಸರ್ಕಾರ ನೀಡುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಜತೆಗೆ ದಾನಿಗಳ ನೆರವಿನಿಂದ ಶಾಲೆಗೆ ಈ ವಿನ್ಯಾಸ ನೀಡಿದ್ದಾರೆ. ಈ ಪ್ರಯತ್ನಕ್ಕೆ ಎಸ್ ಡಿಎಂಸಿ ಸಹಕಾರ, ಗ್ರಾಮ, ಶಿಕ್ಷಣ ಇಲಾಖೆಯ ಪ್ರೋತ್ಸಾಹವೂ ಇದೆ.

ಸದ್ಯ ಈ ಶಾಲೆಯಲ್ಲಿ 2022-23ನೇ ಸಾಲಿನಲ್ಲಿ ಒಂದರಿಂದ ಏಳನೇ ತರಗತಿವರೆಗೆ 71 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಮುಂದಿನ ಬಾರಿ ಮತ್ತಷ್ಟು ಹೆಚ್ಚುವ ನಿರೀಕ್ಷೆ ಇದೆ. ಸ್ಥಳೀಯ ಕಲಾವಿದ ಲೋಕೇಶ್ ಕೈಚಳಕದಿಂದ ರೈಲು ಬೋಗಿಯ ಶಾಲೆ ಅಂದವಾಗಿ ಮೂಡಿಬಂದಿದೆ. ರೈಲು ಇಂಜಿನ್, ಬೋಗಿ, ರೈಲಿನ ಕಿಟಕಿಯ ಬಣ್ಣ ಬಳಿಯಲಾಗಿದ್ದು, ಮಕ್ಕಳು ಪ್ರಯಾಣಿಸುತ್ತಲೇ ವಿದ್ಯಾಭ್ಯಾಸ ಮಾಡುವಂತಿದೆ.

ಇನ್ನು ಶಾಲೆಯಲ್ಲಿ ಉತ್ತಮ ಕಲಿಕಾ ಕೊಠಡಿ, ಹೈಟೆಕ್ ಶೌಚಾಲಯ, ಅಕ್ಷರ ದಾಸೋಹ ಕಟ್ಟಡ ಹೊಂದಿದೆ. ಶಾಲಾ ಅಂಗಳಕ್ಕೆ ಇಂಟರ್ಲಾಕ್ ಅಳವಡಿಸಿದ್ದು, ಉದ್ಯಾನವನ ನಿರ್ವಹಣೆ ಮಾಡಲಾಗಿದೆ. ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಣವನ್ನೂ ನೀಡಲಾಗುತ್ತಿದೆ.

andolana

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

6 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

6 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

6 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

6 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

6 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

6 hours ago