ಮೈಸೂರು : ನೆಕ್ಸಸ್ ಸೆಂಟರ್ ಸಿಟಿ ಮಾಲ್ನಲ್ಲಿ ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ವತಿಯಿಂದ ಹಮ್ಮಿಕೊಂಡಿರುವ ಮೂರು ದಿನಗಳ ಗೆಡ್ಡೆ-ಗೆಣಸು ಮೇಳಕ್ಕೆ ಶುಕ್ರವಾರ ಚಾಲನೆ ದೊರೆಯಿತು.
ನೆಕ್ಸಸ್ ಸೆಂಟರ್ ಸಿಟಿ ಮಾಲ್ನ ಮುಖ್ಯದ್ವಾರದಲ್ಲಿ ಅಲಂಕಾರಿಕವಾಗಿ ಜೋಡಿಸಿದ್ದ ವಿವಿಧ ಬಗೆಯ ಗೆಡ್ಡೆ-ಗೆಣಸುಗಳನ್ನು ಪ್ರದರ್ಶಿಸುವ ಮೂಲಕ ಡೆಲ್ಲಿ ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲರಾದ ಮಂಜು ಶರ್ಮಾ ಮೇಳಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಗೆಡ್ಡೆ-ಗೆಣಸು ಪೌಷ್ಠಿಕ ಆಹಾರ ಪದಾರ್ಥವಾಗಿದ್ದು, ನಗರವಾಸಿಗಳು ಗೆಡ್ಡೆ-ಗೆಣಸುಗಳ ಮಾಹಿತಿ ಪಡೆದುಕೊಳ್ಳುವುದರ ಜೊತೆಗೆ ಖರೀದಿ ಮಾಡಲು ಉತ್ತಮ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ಕೃಷ್ಣ ಪ್ರಸಾದ್ ಮಾತನಾಡಿ, ನೈಸರ್ಗಿಕವಾಗಿ ಬೆಳೆಯುವ ಗೆಡ್ಡೆ ಗೆಣಸು ಪೋಷಕಾಂಶದ ಕಣಜವಾಗಿದ್ದು, ಯಾವುದೇ ಆತಂಕವಿಲ್ಲದೆ ಸವಿಯಬಹುದು.
ನಮ್ಮ ದಿನನಿತ್ಯದ ಊಟದಲ್ಲಿ ಗೆಡ್ಡೆ ಗೆಣಸನ್ನು ಬಳಸಲು ಮತ್ತು ಯುವ ಜನತೆಗೆ ಇಷ್ಟವಾಗುವ ಅಡುಗೆಗಳನ್ನು ಪರಿಚಯಿಸುವ ದೃಷ್ಟಿಯಿಂದ ಮೇಳ ಏರ್ಪಡಿಸಲಾಗಿದೆ.
ಪರ್ಪಲ್ ಯಾಮ್, ಸಿಹಿ ಗೆಣಸು, ಕೆಸು, ಸುವರ್ಣ ಗೆಡ್ಡೆ, ಬಳ್ಳಿ ಆಲೂಗೆಡ್ಡೆ, ಕೂವೆ ಗೆಡ್ಡೆ, ಬಣ್ಣದ ಸಿಹಿ ಗೆಣಸು, ಹಸಿರು ಮತ್ತು ಕಪ್ಪು ಹರಿಷಿಣ, ಮಾವಿನ ಶುಂಠಿ ಮೊದಲಾದ ಗೆಡ್ಡೆ ಗೆಣಸುಗಳು ಲಭ್ಯವಿವೆ ಎಂದರು.
ಮೇಳದಲ್ಲಿ ೧೦ಕ್ಕೂ ಹೆಚ್ಚಿನ ಮಳಿಗೆಗಳು ಗೆಡ್ಡೆ-ಗೆಣಸಿನ ಮೌಲ್ಯವರ್ಧಿತ ಪದಾರ್ಥ, ದೇಸಿ ಅಕ್ಕಿ, ಸಿರಿಧಾನ್ಯಗಳು, ಜವಾರಿ ಬೀಜಗಳು, ಗಾಣದ ಎಣ್ಣೆ , ಮತ್ತು ಸಾವಯವ ಪದಾರ್ಥಗಳನ್ನು ಇಡಲಾಗಿದೆ. ಹಾಗೆಯೇ ಆಹಾರ ಪ್ರಿಯರಿಗೆ ಜೋಳದ ರೊಟ್ಟಿ ಮತ್ತು ಗೆಣಸಿನ ಪಲ್ಯ, ರಾಗಿರೊಟ್ಟಿ-ಹುಚ್ಚೆಳ್ಳು ಚಟ್ನಿ, ದೇಸಿ ಕ್ಯಾರೆಟ್ ಹಲ್ವ, ಬೆಲ್ಲದ ಐಸ್ಕ್ರೀಂ ಸೇರಿದಂತೆ ಬಗೆಬಗೆಯ ಪಾನೀಯಗಳು ದೊರೆಯಲಿವೆ ಎಂದು ಮಾಹಿತಿ ನೀಡಿದರು.
ಅಡುಗೆ ಪ್ರದರ್ಶನ: ಬರಹಗಾರ್ತಿ ಮತ್ತು ಆಹಾರ ತಜ್ಞೆ ಶ್ರೀಮತಿ ರತ್ನಾ ರಾಜಯ್ಯ, ನಾಳೆ(ಮಾ.೨) ಗೆಡ್ಡೆ-ಗೆಣಸುಗಳಿಂದ ತಯಾರಿಸಬಹುದಾದ ಅಡುಗೆಗಳ ಪ್ರದರ್ಶನ ಮತ್ತು ಪರಿಚಯ ಮಾಡಿಕೊಡಲಿದ್ದಾರೆ.
ಡೆಲ್ಲಿ ಪಬ್ಲಿಕ್ ಸ್ಕೂಲ್ನ ಹಿರಿಯ ಶಿಕ್ಷಕಿಯರಾದ ಅಮೀರಾ ಸುಬೋಹಿ, ನಂದಿತಾ ಫಿಲಿಪ್, ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ಸೀಮಾ, ನೆಕ್ಸಸ್ ಸೆಂಟರ್ ಸಿಟಿ ಮಾಲ್ನ ಮೋಹನ್ಕುಮಾರ್, ಮನು, ಜುನೈದ್, ಮಧು, ಮಿಥುನ್, ಅಮೃತ್ ಮತ್ತಿತರರು ಉಪಸ್ಥಿತರಿದ್ದರು.
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ…