ಜಿಲ್ಲೆಗಳು

ನೆಕ್ಸಸ್ ಸೆಂಟರ್ ಸಿಟಿ ಮಾಲ್‌ನಲ್ಲಿ ಮೂರು ದಿನಗಳ ಗೆಡ್ಡೆ-ಗೆಣಸು ಮೇಳ !

ಮೈಸೂರು :  ನೆಕ್ಸಸ್ ಸೆಂಟರ್ ಸಿಟಿ ಮಾಲ್‌ನಲ್ಲಿ ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ವತಿಯಿಂದ ಹಮ್ಮಿಕೊಂಡಿರುವ ಮೂರು ದಿನಗಳ ಗೆಡ್ಡೆ-ಗೆಣಸು ಮೇಳಕ್ಕೆ ಶುಕ್ರವಾರ ಚಾಲನೆ ದೊರೆಯಿತು.

ನೆಕ್ಸಸ್ ಸೆಂಟರ್ ಸಿಟಿ ಮಾಲ್‌ನ ಮುಖ್ಯದ್ವಾರದಲ್ಲಿ ಅಲಂಕಾರಿಕವಾಗಿ ಜೋಡಿಸಿದ್ದ ವಿವಿಧ ಬಗೆಯ ಗೆಡ್ಡೆ-ಗೆಣಸುಗಳನ್ನು ಪ್ರದರ್ಶಿಸುವ ಮೂಲಕ ಡೆಲ್ಲಿ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲರಾದ ಮಂಜು ಶರ್ಮಾ ಮೇಳಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಗೆಡ್ಡೆ-ಗೆಣಸು ಪೌಷ್ಠಿಕ ಆಹಾರ ಪದಾರ್ಥವಾಗಿದ್ದು, ನಗರವಾಸಿಗಳು ಗೆಡ್ಡೆ-ಗೆಣಸುಗಳ ಮಾಹಿತಿ ಪಡೆದುಕೊಳ್ಳುವುದರ ಜೊತೆಗೆ ಖರೀದಿ ಮಾಡಲು ಉತ್ತಮ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ಕೃಷ್ಣ ಪ್ರಸಾದ್ ಮಾತನಾಡಿ, ನೈಸರ್ಗಿಕವಾಗಿ ಬೆಳೆಯುವ ಗೆಡ್ಡೆ ಗೆಣಸು ಪೋಷಕಾಂಶದ ಕಣಜವಾಗಿದ್ದು, ಯಾವುದೇ ಆತಂಕವಿಲ್ಲದೆ ಸವಿಯಬಹುದು.

ನಮ್ಮ ದಿನನಿತ್ಯದ ಊಟದಲ್ಲಿ ಗೆಡ್ಡೆ ಗೆಣಸನ್ನು ಬಳಸಲು ಮತ್ತು ಯುವ ಜನತೆಗೆ ಇಷ್ಟವಾಗುವ ಅಡುಗೆಗಳನ್ನು ಪರಿಚಯಿಸುವ ದೃಷ್ಟಿಯಿಂದ ಮೇಳ ಏರ್ಪಡಿಸಲಾಗಿದೆ.

ಪರ್ಪಲ್ ಯಾಮ್, ಸಿಹಿ ಗೆಣಸು, ಕೆಸು, ಸುವರ್ಣ ಗೆಡ್ಡೆ, ಬಳ್ಳಿ ಆಲೂಗೆಡ್ಡೆ, ಕೂವೆ ಗೆಡ್ಡೆ, ಬಣ್ಣದ ಸಿಹಿ ಗೆಣಸು, ಹಸಿರು ಮತ್ತು ಕಪ್ಪು ಹರಿಷಿಣ, ಮಾವಿನ ಶುಂಠಿ ಮೊದಲಾದ ಗೆಡ್ಡೆ ಗೆಣಸುಗಳು ಲಭ್ಯವಿವೆ ಎಂದರು.

ಮೇಳದಲ್ಲಿ ೧೦ಕ್ಕೂ ಹೆಚ್ಚಿನ ಮಳಿಗೆಗಳು ಗೆಡ್ಡೆ-ಗೆಣಸಿನ ಮೌಲ್ಯವರ್ಧಿತ ಪದಾರ್ಥ, ದೇಸಿ ಅಕ್ಕಿ, ಸಿರಿಧಾನ್ಯಗಳು, ಜವಾರಿ ಬೀಜಗಳು, ಗಾಣದ ಎಣ್ಣೆ , ಮತ್ತು ಸಾವಯವ ಪದಾರ್ಥಗಳನ್ನು ಇಡಲಾಗಿದೆ. ಹಾಗೆಯೇ ಆಹಾರ ಪ್ರಿಯರಿಗೆ ಜೋಳದ ರೊಟ್ಟಿ ಮತ್ತು ಗೆಣಸಿನ ಪಲ್ಯ, ರಾಗಿರೊಟ್ಟಿ-ಹುಚ್ಚೆಳ್ಳು ಚಟ್ನಿ, ದೇಸಿ ಕ್ಯಾರೆಟ್ ಹಲ್ವ, ಬೆಲ್ಲದ ಐಸ್ಕ್ರೀಂ ಸೇರಿದಂತೆ ಬಗೆಬಗೆಯ ಪಾನೀಯಗಳು ದೊರೆಯಲಿವೆ ಎಂದು ಮಾಹಿತಿ ನೀಡಿದರು.

ಅಡುಗೆ ಪ್ರದರ್ಶನ: ಬರಹಗಾರ್ತಿ ಮತ್ತು ಆಹಾರ ತಜ್ಞೆ ಶ್ರೀಮತಿ ರತ್ನಾ ರಾಜಯ್ಯ, ನಾಳೆ(ಮಾ.೨) ಗೆಡ್ಡೆ-ಗೆಣಸುಗಳಿಂದ ತಯಾರಿಸಬಹುದಾದ ಅಡುಗೆಗಳ ಪ್ರದರ್ಶನ ಮತ್ತು ಪರಿಚಯ ಮಾಡಿಕೊಡಲಿದ್ದಾರೆ.

ಡೆಲ್ಲಿ ಪಬ್ಲಿಕ್ ಸ್ಕೂಲ್‌ನ ಹಿರಿಯ ಶಿಕ್ಷಕಿಯರಾದ ಅಮೀರಾ ಸುಬೋಹಿ, ನಂದಿತಾ ಫಿಲಿಪ್, ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ಸೀಮಾ, ನೆಕ್ಸಸ್ ಸೆಂಟರ್ ಸಿಟಿ ಮಾಲ್‌ನ ಮೋಹನ್‌ಕುಮಾರ್, ಮನು, ಜುನೈದ್, ಮಧು, ಮಿಥುನ್, ಅಮೃತ್ ಮತ್ತಿತರರು ಉಪಸ್ಥಿತರಿದ್ದರು.

andolana

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

3 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

3 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

4 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

5 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

5 hours ago