ಜಿಲ್ಲೆಗಳು

ನೆಕ್ಸಸ್ ಸೆಂಟರ್ ಸಿಟಿ ಮಾಲ್‌ನಲ್ಲಿ ಮೂರು ದಿನಗಳ ಗೆಡ್ಡೆ-ಗೆಣಸು ಮೇಳ !

ಮೈಸೂರು :  ನೆಕ್ಸಸ್ ಸೆಂಟರ್ ಸಿಟಿ ಮಾಲ್‌ನಲ್ಲಿ ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ವತಿಯಿಂದ ಹಮ್ಮಿಕೊಂಡಿರುವ ಮೂರು ದಿನಗಳ ಗೆಡ್ಡೆ-ಗೆಣಸು ಮೇಳಕ್ಕೆ ಶುಕ್ರವಾರ ಚಾಲನೆ ದೊರೆಯಿತು.

ನೆಕ್ಸಸ್ ಸೆಂಟರ್ ಸಿಟಿ ಮಾಲ್‌ನ ಮುಖ್ಯದ್ವಾರದಲ್ಲಿ ಅಲಂಕಾರಿಕವಾಗಿ ಜೋಡಿಸಿದ್ದ ವಿವಿಧ ಬಗೆಯ ಗೆಡ್ಡೆ-ಗೆಣಸುಗಳನ್ನು ಪ್ರದರ್ಶಿಸುವ ಮೂಲಕ ಡೆಲ್ಲಿ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲರಾದ ಮಂಜು ಶರ್ಮಾ ಮೇಳಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಗೆಡ್ಡೆ-ಗೆಣಸು ಪೌಷ್ಠಿಕ ಆಹಾರ ಪದಾರ್ಥವಾಗಿದ್ದು, ನಗರವಾಸಿಗಳು ಗೆಡ್ಡೆ-ಗೆಣಸುಗಳ ಮಾಹಿತಿ ಪಡೆದುಕೊಳ್ಳುವುದರ ಜೊತೆಗೆ ಖರೀದಿ ಮಾಡಲು ಉತ್ತಮ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ಕೃಷ್ಣ ಪ್ರಸಾದ್ ಮಾತನಾಡಿ, ನೈಸರ್ಗಿಕವಾಗಿ ಬೆಳೆಯುವ ಗೆಡ್ಡೆ ಗೆಣಸು ಪೋಷಕಾಂಶದ ಕಣಜವಾಗಿದ್ದು, ಯಾವುದೇ ಆತಂಕವಿಲ್ಲದೆ ಸವಿಯಬಹುದು.

ನಮ್ಮ ದಿನನಿತ್ಯದ ಊಟದಲ್ಲಿ ಗೆಡ್ಡೆ ಗೆಣಸನ್ನು ಬಳಸಲು ಮತ್ತು ಯುವ ಜನತೆಗೆ ಇಷ್ಟವಾಗುವ ಅಡುಗೆಗಳನ್ನು ಪರಿಚಯಿಸುವ ದೃಷ್ಟಿಯಿಂದ ಮೇಳ ಏರ್ಪಡಿಸಲಾಗಿದೆ.

ಪರ್ಪಲ್ ಯಾಮ್, ಸಿಹಿ ಗೆಣಸು, ಕೆಸು, ಸುವರ್ಣ ಗೆಡ್ಡೆ, ಬಳ್ಳಿ ಆಲೂಗೆಡ್ಡೆ, ಕೂವೆ ಗೆಡ್ಡೆ, ಬಣ್ಣದ ಸಿಹಿ ಗೆಣಸು, ಹಸಿರು ಮತ್ತು ಕಪ್ಪು ಹರಿಷಿಣ, ಮಾವಿನ ಶುಂಠಿ ಮೊದಲಾದ ಗೆಡ್ಡೆ ಗೆಣಸುಗಳು ಲಭ್ಯವಿವೆ ಎಂದರು.

ಮೇಳದಲ್ಲಿ ೧೦ಕ್ಕೂ ಹೆಚ್ಚಿನ ಮಳಿಗೆಗಳು ಗೆಡ್ಡೆ-ಗೆಣಸಿನ ಮೌಲ್ಯವರ್ಧಿತ ಪದಾರ್ಥ, ದೇಸಿ ಅಕ್ಕಿ, ಸಿರಿಧಾನ್ಯಗಳು, ಜವಾರಿ ಬೀಜಗಳು, ಗಾಣದ ಎಣ್ಣೆ , ಮತ್ತು ಸಾವಯವ ಪದಾರ್ಥಗಳನ್ನು ಇಡಲಾಗಿದೆ. ಹಾಗೆಯೇ ಆಹಾರ ಪ್ರಿಯರಿಗೆ ಜೋಳದ ರೊಟ್ಟಿ ಮತ್ತು ಗೆಣಸಿನ ಪಲ್ಯ, ರಾಗಿರೊಟ್ಟಿ-ಹುಚ್ಚೆಳ್ಳು ಚಟ್ನಿ, ದೇಸಿ ಕ್ಯಾರೆಟ್ ಹಲ್ವ, ಬೆಲ್ಲದ ಐಸ್ಕ್ರೀಂ ಸೇರಿದಂತೆ ಬಗೆಬಗೆಯ ಪಾನೀಯಗಳು ದೊರೆಯಲಿವೆ ಎಂದು ಮಾಹಿತಿ ನೀಡಿದರು.

ಅಡುಗೆ ಪ್ರದರ್ಶನ: ಬರಹಗಾರ್ತಿ ಮತ್ತು ಆಹಾರ ತಜ್ಞೆ ಶ್ರೀಮತಿ ರತ್ನಾ ರಾಜಯ್ಯ, ನಾಳೆ(ಮಾ.೨) ಗೆಡ್ಡೆ-ಗೆಣಸುಗಳಿಂದ ತಯಾರಿಸಬಹುದಾದ ಅಡುಗೆಗಳ ಪ್ರದರ್ಶನ ಮತ್ತು ಪರಿಚಯ ಮಾಡಿಕೊಡಲಿದ್ದಾರೆ.

ಡೆಲ್ಲಿ ಪಬ್ಲಿಕ್ ಸ್ಕೂಲ್‌ನ ಹಿರಿಯ ಶಿಕ್ಷಕಿಯರಾದ ಅಮೀರಾ ಸುಬೋಹಿ, ನಂದಿತಾ ಫಿಲಿಪ್, ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ಸೀಮಾ, ನೆಕ್ಸಸ್ ಸೆಂಟರ್ ಸಿಟಿ ಮಾಲ್‌ನ ಮೋಹನ್‌ಕುಮಾರ್, ಮನು, ಜುನೈದ್, ಮಧು, ಮಿಥುನ್, ಅಮೃತ್ ಮತ್ತಿತರರು ಉಪಸ್ಥಿತರಿದ್ದರು.

andolana

Recent Posts

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

1 hour ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

2 hours ago

ಕಳ್ಳಬೇಟೆ ತಡೆ ಶಿಬಿರ ಸ್ಫೋಟದ ಬೆನ್ನಲ್ಲೇ ಅರಣ್ಯಕ್ಕೆ ಬೆಂಕಿ: 10 ಎಕರೆ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…

2 hours ago

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

9 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

9 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

9 hours ago