ಜಿಲ್ಲೆಗಳು

3ದಿನ ವೀರಶೈವ ಲಿಂಗಾಯತ ವಿಶ್ವ ಉದ್ದಿಮೆದಾರರ ಸಮ್ಮೇಳನ

 ಸುದ್ದಿಗೋಷ್ಠಿಯಲ್ಲಿ ಟಿ.ಎಸ್.ಲೋಕೇಶ್ ವಿವರಣೆ

ಚಾಮರಾಜನಗರ: ಅಂತರಾಷ್ಟ್ರೀಯ ಲಿಂಗಾಯತ ಯೂತ್ ವೇದಿಕೆಯಿಂದ ವೀರಶೈವ ಲಿಂಗಾಯತ ವಿಶ್ವ ಉದ್ದಿಮೆದಾರರ ಸಮ್ಮೇಳನವನ್ನು ಜನವರಿ ೨೦ ರಿಂದ ೨೩ ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಮೈಸೂರು-ಚಾ.ನಗರ ಜಿಲ್ಲಾ ಅಧ್ಯಕ್ಷ ಟಿ.ಎಸ್.ಲೋಕೇಶ್ ತಿಳಿಸಿದರು.
ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉದ್ಯಮಿಗಳು, ವೃತ್ತಿಪರರನ್ನು ಒಂದೇ ವೇದಿಕೆಯಡಿ ತರುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರವು ಬಿಡುಗಡೆ ಮಾಡಿ ಪ್ರಾಯೋಗಿಕ ಅಭಿವೃದ್ಧಿಪಡಿಸುವ ಆರ್ಥಿಕ, ಕೈಗಾರಿಕಾ, ವ್ಯಾಪಾರಿಕ ಚಟುವಟಿಕೆಗಳನ್ನು ಮುಂದುವರಿಸುವ ಮಾರ್ಗೋಪಾಯಗಳ ಬಗ್ಗೆ ಚರ್ಚಿಸುವುದು ಈ ಸಮಾವೇಶದ ಉದ್ದೇಶವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರ್ನಾಟಕದಲ್ಲಿನ ಹೂಡಿಕೆ ಅವಕಾಶಗಳ ಬಗ್ಗೆ ಚರ್ಚಿಸುವುದು. ಸರ್ಕಾರವು ಕಲ್ಪಿಸಿರುವ ಕ್ಲಸ್ಟರ್ ಆಧಾರಿತ ವಿಧಾನವನ್ನು ಕೈಗಾರಿಕೋದ್ಯಮಿಗಳು, ವ್ಯಾಪಾರ ಸಮುದಾಯವನ್ನು ಉತ್ತೇಜಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಮಟ್ಟದಲ್ಲಿ ಸ್ಟಾರ್ಟ್ ಅಪ್ ಘಟಕವನ್ನು ಬಲಪಡಿಸುವುದು. ನಿರೀಕ್ಷಿತ ಉದ್ಯಮಿಗಳಿಗೆ ಮಾರ್ಗದರ್ಶನ ನೀಡುವುದು. ಕರ್ನಾಟಕ ರಾಜ್ಯಾದ್ಯಂತ ರೈತ ಸಮುದಾಯವನ್ನು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳಲು ತಂತ್ರಜ್ಞಾನ ಆಧಾರಿತ ಕೃಷಿ ಪರಿಹಾರಗಳನ್ನು ಅನ್ವೇಷಿಸುವುದು ಅಲ್ಲದೆ, ೨೫೦ ಕ್ಕೂ ಅಧಿಕ ಮಳಿಗೆಗಳಲ್ಲಿ ಉತ್ಪನ್ನಗಳು, ಸೇವೆಗಳನ್ನು ಪ್ರದರ್ಶಿಸಲಾಗುವುದು ಎಂದು ತಿಳಿಸಿದರು.
ವಿಶೇಷ ಪೆವಿಲಿಯನ್ ಮೂಲಕ ಶಿಕ್ಷಣ ಕ್ಷೇತ್ರದಲ್ಲಿನ ಅವಕಾಶಗಳನ್ನು ಬಿಂಬಿಸಲಾಗುತ್ತದೆ. ವೃತ್ತಿ ಸಮಾಲೋಚನೆಯನ್ನು ನಡೆಸುವ ಮೂಲಕ ವಿದ್ಯಾರ್ಥಿಗಳೊಂದಿಗೆ ವರ್ಚುವಲ್ ಸಂಪರ್ಕ ಸಾಧಿಸಲು ಶಿಕ್ಷಣ ಸಂಸ್ಥೆಗಳಿಗೆ ಅನುಕೂಲ ಮಾಡಲಾಗುವುದು ಎಂದರು.
ಮಹಾರಾಷ್ಟ್ರದ ವೀರಶೈವ ಇಂಟರ್‌ನ್ಯಾಶನಲ್ ಅಸೋಸಿಯೇಷನ್ (ವಿಐಎ) ನೊಂದಿಗೆ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮತ್ತು ಬಸವ ಸಮಿತಿ ಸಹಯೋಗದಲ್ಲಿ ಸಮ್ಮೇಳನ ನಡೆಯಲಿದೆ. ೨೦೧೩ರಲ್ಲಿ ಪ್ರಾರಂಭವಾದ ಐಎಲ್‌ವೈಎಫ್ ೨೦೨೩ರಲ್ಲಿ ತನ್ನ ೧೦ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದು ೧೫೦೦ ಸದಸ್ಯರಿದ್ದಾರೆ. ಇದರ ಅಂಗವಾಗಿ ಸಮ್ಮೇಳನ ನಡೆಸಲಾಗುತ್ತಿದೆ ಎಂದು ವಿವರಿಸಿದರು.

andolanait

Recent Posts

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

7 hours ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

7 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

7 hours ago

ಹನೂರು| ಚಿರತೆ ದಾಳಿಗೆ ಹಸು ಬಲಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…

7 hours ago

ಹನೂರು| ಭೂತರಾಯನ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…

7 hours ago

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ್‌

ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಭರವಸೆ…

7 hours ago