ಜಿಲ್ಲೆಗಳು

3ದಿನ ವೀರಶೈವ ಲಿಂಗಾಯತ ವಿಶ್ವ ಉದ್ದಿಮೆದಾರರ ಸಮ್ಮೇಳನ

 ಸುದ್ದಿಗೋಷ್ಠಿಯಲ್ಲಿ ಟಿ.ಎಸ್.ಲೋಕೇಶ್ ವಿವರಣೆ

ಚಾಮರಾಜನಗರ: ಅಂತರಾಷ್ಟ್ರೀಯ ಲಿಂಗಾಯತ ಯೂತ್ ವೇದಿಕೆಯಿಂದ ವೀರಶೈವ ಲಿಂಗಾಯತ ವಿಶ್ವ ಉದ್ದಿಮೆದಾರರ ಸಮ್ಮೇಳನವನ್ನು ಜನವರಿ ೨೦ ರಿಂದ ೨೩ ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಮೈಸೂರು-ಚಾ.ನಗರ ಜಿಲ್ಲಾ ಅಧ್ಯಕ್ಷ ಟಿ.ಎಸ್.ಲೋಕೇಶ್ ತಿಳಿಸಿದರು.
ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉದ್ಯಮಿಗಳು, ವೃತ್ತಿಪರರನ್ನು ಒಂದೇ ವೇದಿಕೆಯಡಿ ತರುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರವು ಬಿಡುಗಡೆ ಮಾಡಿ ಪ್ರಾಯೋಗಿಕ ಅಭಿವೃದ್ಧಿಪಡಿಸುವ ಆರ್ಥಿಕ, ಕೈಗಾರಿಕಾ, ವ್ಯಾಪಾರಿಕ ಚಟುವಟಿಕೆಗಳನ್ನು ಮುಂದುವರಿಸುವ ಮಾರ್ಗೋಪಾಯಗಳ ಬಗ್ಗೆ ಚರ್ಚಿಸುವುದು ಈ ಸಮಾವೇಶದ ಉದ್ದೇಶವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರ್ನಾಟಕದಲ್ಲಿನ ಹೂಡಿಕೆ ಅವಕಾಶಗಳ ಬಗ್ಗೆ ಚರ್ಚಿಸುವುದು. ಸರ್ಕಾರವು ಕಲ್ಪಿಸಿರುವ ಕ್ಲಸ್ಟರ್ ಆಧಾರಿತ ವಿಧಾನವನ್ನು ಕೈಗಾರಿಕೋದ್ಯಮಿಗಳು, ವ್ಯಾಪಾರ ಸಮುದಾಯವನ್ನು ಉತ್ತೇಜಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಮಟ್ಟದಲ್ಲಿ ಸ್ಟಾರ್ಟ್ ಅಪ್ ಘಟಕವನ್ನು ಬಲಪಡಿಸುವುದು. ನಿರೀಕ್ಷಿತ ಉದ್ಯಮಿಗಳಿಗೆ ಮಾರ್ಗದರ್ಶನ ನೀಡುವುದು. ಕರ್ನಾಟಕ ರಾಜ್ಯಾದ್ಯಂತ ರೈತ ಸಮುದಾಯವನ್ನು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳಲು ತಂತ್ರಜ್ಞಾನ ಆಧಾರಿತ ಕೃಷಿ ಪರಿಹಾರಗಳನ್ನು ಅನ್ವೇಷಿಸುವುದು ಅಲ್ಲದೆ, ೨೫೦ ಕ್ಕೂ ಅಧಿಕ ಮಳಿಗೆಗಳಲ್ಲಿ ಉತ್ಪನ್ನಗಳು, ಸೇವೆಗಳನ್ನು ಪ್ರದರ್ಶಿಸಲಾಗುವುದು ಎಂದು ತಿಳಿಸಿದರು.
ವಿಶೇಷ ಪೆವಿಲಿಯನ್ ಮೂಲಕ ಶಿಕ್ಷಣ ಕ್ಷೇತ್ರದಲ್ಲಿನ ಅವಕಾಶಗಳನ್ನು ಬಿಂಬಿಸಲಾಗುತ್ತದೆ. ವೃತ್ತಿ ಸಮಾಲೋಚನೆಯನ್ನು ನಡೆಸುವ ಮೂಲಕ ವಿದ್ಯಾರ್ಥಿಗಳೊಂದಿಗೆ ವರ್ಚುವಲ್ ಸಂಪರ್ಕ ಸಾಧಿಸಲು ಶಿಕ್ಷಣ ಸಂಸ್ಥೆಗಳಿಗೆ ಅನುಕೂಲ ಮಾಡಲಾಗುವುದು ಎಂದರು.
ಮಹಾರಾಷ್ಟ್ರದ ವೀರಶೈವ ಇಂಟರ್‌ನ್ಯಾಶನಲ್ ಅಸೋಸಿಯೇಷನ್ (ವಿಐಎ) ನೊಂದಿಗೆ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮತ್ತು ಬಸವ ಸಮಿತಿ ಸಹಯೋಗದಲ್ಲಿ ಸಮ್ಮೇಳನ ನಡೆಯಲಿದೆ. ೨೦೧೩ರಲ್ಲಿ ಪ್ರಾರಂಭವಾದ ಐಎಲ್‌ವೈಎಫ್ ೨೦೨೩ರಲ್ಲಿ ತನ್ನ ೧೦ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದು ೧೫೦೦ ಸದಸ್ಯರಿದ್ದಾರೆ. ಇದರ ಅಂಗವಾಗಿ ಸಮ್ಮೇಳನ ನಡೆಸಲಾಗುತ್ತಿದೆ ಎಂದು ವಿವರಿಸಿದರು.

andolanait

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

8 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

8 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

9 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

10 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

10 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

10 hours ago