ಜಿಲ್ಲೆಗಳು

3ದಿನ ವೀರಶೈವ ಲಿಂಗಾಯತ ವಿಶ್ವ ಉದ್ದಿಮೆದಾರರ ಸಮ್ಮೇಳನ

 ಸುದ್ದಿಗೋಷ್ಠಿಯಲ್ಲಿ ಟಿ.ಎಸ್.ಲೋಕೇಶ್ ವಿವರಣೆ

ಚಾಮರಾಜನಗರ: ಅಂತರಾಷ್ಟ್ರೀಯ ಲಿಂಗಾಯತ ಯೂತ್ ವೇದಿಕೆಯಿಂದ ವೀರಶೈವ ಲಿಂಗಾಯತ ವಿಶ್ವ ಉದ್ದಿಮೆದಾರರ ಸಮ್ಮೇಳನವನ್ನು ಜನವರಿ ೨೦ ರಿಂದ ೨೩ ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಮೈಸೂರು-ಚಾ.ನಗರ ಜಿಲ್ಲಾ ಅಧ್ಯಕ್ಷ ಟಿ.ಎಸ್.ಲೋಕೇಶ್ ತಿಳಿಸಿದರು.
ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉದ್ಯಮಿಗಳು, ವೃತ್ತಿಪರರನ್ನು ಒಂದೇ ವೇದಿಕೆಯಡಿ ತರುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರವು ಬಿಡುಗಡೆ ಮಾಡಿ ಪ್ರಾಯೋಗಿಕ ಅಭಿವೃದ್ಧಿಪಡಿಸುವ ಆರ್ಥಿಕ, ಕೈಗಾರಿಕಾ, ವ್ಯಾಪಾರಿಕ ಚಟುವಟಿಕೆಗಳನ್ನು ಮುಂದುವರಿಸುವ ಮಾರ್ಗೋಪಾಯಗಳ ಬಗ್ಗೆ ಚರ್ಚಿಸುವುದು ಈ ಸಮಾವೇಶದ ಉದ್ದೇಶವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕರ್ನಾಟಕದಲ್ಲಿನ ಹೂಡಿಕೆ ಅವಕಾಶಗಳ ಬಗ್ಗೆ ಚರ್ಚಿಸುವುದು. ಸರ್ಕಾರವು ಕಲ್ಪಿಸಿರುವ ಕ್ಲಸ್ಟರ್ ಆಧಾರಿತ ವಿಧಾನವನ್ನು ಕೈಗಾರಿಕೋದ್ಯಮಿಗಳು, ವ್ಯಾಪಾರ ಸಮುದಾಯವನ್ನು ಉತ್ತೇಜಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಮಟ್ಟದಲ್ಲಿ ಸ್ಟಾರ್ಟ್ ಅಪ್ ಘಟಕವನ್ನು ಬಲಪಡಿಸುವುದು. ನಿರೀಕ್ಷಿತ ಉದ್ಯಮಿಗಳಿಗೆ ಮಾರ್ಗದರ್ಶನ ನೀಡುವುದು. ಕರ್ನಾಟಕ ರಾಜ್ಯಾದ್ಯಂತ ರೈತ ಸಮುದಾಯವನ್ನು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಬಳಸಿಕೊಳ್ಳಲು ತಂತ್ರಜ್ಞಾನ ಆಧಾರಿತ ಕೃಷಿ ಪರಿಹಾರಗಳನ್ನು ಅನ್ವೇಷಿಸುವುದು ಅಲ್ಲದೆ, ೨೫೦ ಕ್ಕೂ ಅಧಿಕ ಮಳಿಗೆಗಳಲ್ಲಿ ಉತ್ಪನ್ನಗಳು, ಸೇವೆಗಳನ್ನು ಪ್ರದರ್ಶಿಸಲಾಗುವುದು ಎಂದು ತಿಳಿಸಿದರು.
ವಿಶೇಷ ಪೆವಿಲಿಯನ್ ಮೂಲಕ ಶಿಕ್ಷಣ ಕ್ಷೇತ್ರದಲ್ಲಿನ ಅವಕಾಶಗಳನ್ನು ಬಿಂಬಿಸಲಾಗುತ್ತದೆ. ವೃತ್ತಿ ಸಮಾಲೋಚನೆಯನ್ನು ನಡೆಸುವ ಮೂಲಕ ವಿದ್ಯಾರ್ಥಿಗಳೊಂದಿಗೆ ವರ್ಚುವಲ್ ಸಂಪರ್ಕ ಸಾಧಿಸಲು ಶಿಕ್ಷಣ ಸಂಸ್ಥೆಗಳಿಗೆ ಅನುಕೂಲ ಮಾಡಲಾಗುವುದು ಎಂದರು.
ಮಹಾರಾಷ್ಟ್ರದ ವೀರಶೈವ ಇಂಟರ್‌ನ್ಯಾಶನಲ್ ಅಸೋಸಿಯೇಷನ್ (ವಿಐಎ) ನೊಂದಿಗೆ ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮತ್ತು ಬಸವ ಸಮಿತಿ ಸಹಯೋಗದಲ್ಲಿ ಸಮ್ಮೇಳನ ನಡೆಯಲಿದೆ. ೨೦೧೩ರಲ್ಲಿ ಪ್ರಾರಂಭವಾದ ಐಎಲ್‌ವೈಎಫ್ ೨೦೨೩ರಲ್ಲಿ ತನ್ನ ೧೦ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದ್ದು ೧೫೦೦ ಸದಸ್ಯರಿದ್ದಾರೆ. ಇದರ ಅಂಗವಾಗಿ ಸಮ್ಮೇಳನ ನಡೆಸಲಾಗುತ್ತಿದೆ ಎಂದು ವಿವರಿಸಿದರು.

andolanait

Recent Posts

ಬಳ್ಳಾರಿ ಬ್ಯಾನರ್‌ ಗಲಾಟೆ | ಕೈ ಕಾರ್ಯಕರ್ತನಿಗೆ ಗುಂಡೇಟು ; ಸಾವು, ಉದ್ವಿಗ್ನ ವಾತಾವರಣ

ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…

6 hours ago

ವಾಲ್ಮೀಕಿ ಬ್ಯಾನರ್‌ ಅಳವಡಿಕೆ ವಿಚಾರದಲ್ಲಿ ಗುಂಪುಗಳ ನಡುವೆ ಮಾರಾಮಾರಿ ; ಗಾಳಿಯಲ್ಲಿ ಗುಂಡು , ಓರ್ವನಿಗೆ ಗಾಯ

ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…

7 hours ago

ನಂಜೇದೇವನಪುರ : ಹುಲಿಗಳ ಕೂಂಬಿಂಗ್ ಗೆ ಬಂದಿದ್ದ ಆನೆಗಳು ವಾಪಸ್

ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…

7 hours ago

ಮೈಸೂರಿನ ನೂತನ ಎಸ್‌ಪಿಯಾಗಿ ಅಧಿಕಾರಿ ಸ್ವೀಕರಿಸಿದ ಮಲ್ಲಿಕಾರ್ಜುನ್‌ ಬಾಲದಂಡಿ

ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…

8 hours ago

ಗುಂಡ್ಲುಪೇಟೆ ಪಟ್ಟಣದ ರಸ್ತೆಗೆ ನಾಗರತ್ನಮ್ಮ ಹೆಸರಿಡಿ ಪುತ್ಥಳಿ ನಿರ್ಮಿಸಿ : ವಾಟಾಲ್ ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ…

8 hours ago

ಅಧಿಕ ಭಾರಹೊತ್ತು ಸಾಗುವ ಟಿಪ್ಪರ್‌ಗಳು ; ಅಧಿಕಾರಿಗಳು ಮೌನ

ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…

8 hours ago