ಮಂಡ್ಯ: ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
ಲಖನೌನಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಖುದ್ದು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಅವರು ಕೆ.ಆರ್. ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಆಹ್ವಾನ ನೀಡಿದರು.
ಅ.13 ರಿಂದ 16 ರ ವರೆಗೂ ಕೆ.ಆರ್. ಪೇಟೆಯ ಲಕ್ಷ್ಮಣತೀರ್ಥ-ಹೇಮಾವತಿ-ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದೆ. ಈ ಮಹಾಕುಂಭ ಮೇಳದಲ್ಲಿ ಅ.೧೬ ರಂದು ಪಾಲ್ಗೊಳ್ಳುವುದಾಗಿ ಯೋಗಿ ಆದಿತ್ಯನಾಥ್ ಅವರು ತಿಳಿಸಿದರು.
ಮುಕ್ಕಾಲು ಗಂಟೆ ಮಾತುಕತೆ:
ತಮ್ಮನ್ನು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಹಾಗೂ ನಿಯೋಗದ ಜತೆ ಮುಕ್ಕಾಲು ಗಂಟೆಗೂ ಅಧಿಕ ಕಾಲ ಯೋಗಿ ಆದಿತ್ಯನಾಥ್ ಅವರು ಮಾತುಕತೆ ನಡೆಸಿ, ವಿಶೇಷ ಆತಿಥ್ಯ ನೀಡಿದರು.
ಕರ್ನಾಟಕ ಹಾಗೂ ಉತ್ತರ ಪ್ರದೇಶಕ್ಕೂ ಗೋರಖನಾಥೇಶ್ವರನ ಸಂಬAಧದ ಬಗ್ಗೆ ಯೋಗಿಜೀ ಮೆಲುಕು ಹಾಕಿದರು. ಪರಶುರಾಮ ಕಥೆ, ಕಾಲಭೈರವೇಶ್ವರನ ಕಥೆ, ಧರ್ಮಸ್ಥಳ ಮತ್ತು ಆದಿಚುಂಚನಗಿರಿಯ ಇತಿಹಾಸ ಹಾಗೂ ನಾಥ ಪರಂಪರೆಯ ಹಾಗೂ ಕರ್ನಾಟಕ ಸರ್ಕಾರ ಪ್ರಸ್ತುತ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಹಲವು ವಿಚಾರಗಳ ಕುರಿತು ಸುದೀರ್ಘವಾಗಿ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಕುವೆಂಪು ಅವರ ರಾಮಯಣ ದರ್ಶನಂ ಹಾಗೂ ಎಸ್.ಎಲ್. ಭೈರಪ್ಪನವರ ಪರ್ವ ಪುಸ್ತಕವನ್ನು ಯೋಗಿ ಆದಿತ್ಯನಾಥ್ ಅವರಿಗೆ ಸಚಿವರು ನೀಡಿದರು.
ಕೆಪಿಎಸ್ಸಿ ಸದಸ್ಯ ಪ್ರಭುದೇವ್, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್, ಮಾಧ್ಯಮ ಸಲಹೆಗಾರ ಪ್ರದೀಪ್ ಕುಮಾರ್ ಹಾಜರಿದ್ದರು.
ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ…
ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ…
ಮುಂಬೈ : ಮಹಾರಾಷ್ಟ್ರದ ರಾಜಕೀಯದಲ್ಲಿ ಒಂದು ಐತಿಹಾಸಿಕ ಕ್ಷಣ. ಎನ್ಸಿಪಿ ನಾಯಕಿ ದಿ.ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್…
ಹನೂರು : ದಂಟಳ್ಳಿ ಏತ ನೀರಾವರಿ ಯೋಜನೆಗೆ ಡಿ.ಪಿ.ಆರ್ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಯುವ…
ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ…
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಉದ್ಯಮಿ ಡಾ.ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ. ಮರಣೋತ್ತರ…