ಜಿಲ್ಲೆಗಳು

ತ್ರಿವೇಣಿ ಸಂಗಮದಲ್ಲಿ ನಡೆಯುವ ಮಹಾಕುಂಭಮೇಳಕ್ಕೆ ಯೋಗಿ ಆದಿತ್ಯನಾಥ್

ಮಂಡ್ಯ: ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
ಲಖನೌನಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಖುದ್ದು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಅವರು ಕೆ.ಆರ್. ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಆಹ್ವಾನ ನೀಡಿದರು.
ಅ.13 ರಿಂದ 16 ರ ವರೆಗೂ ಕೆ.ಆರ್. ಪೇಟೆಯ ಲಕ್ಷ್ಮಣತೀರ್ಥ-ಹೇಮಾವತಿ-ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದೆ. ಈ ಮಹಾಕುಂಭ ಮೇಳದಲ್ಲಿ ಅ.೧೬ ರಂದು ಪಾಲ್ಗೊಳ್ಳುವುದಾಗಿ ಯೋಗಿ ಆದಿತ್ಯನಾಥ್ ಅವರು ತಿಳಿಸಿದರು.
ಮುಕ್ಕಾಲು ಗಂಟೆ ಮಾತುಕತೆ:
ತಮ್ಮನ್ನು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಹಾಗೂ ನಿಯೋಗದ ಜತೆ ಮುಕ್ಕಾಲು ಗಂಟೆಗೂ ಅಧಿಕ ಕಾಲ ಯೋಗಿ ಆದಿತ್ಯನಾಥ್ ಅವರು ಮಾತುಕತೆ ನಡೆಸಿ, ವಿಶೇಷ ಆತಿಥ್ಯ ನೀಡಿದರು.
ಕರ್ನಾಟಕ ಹಾಗೂ ಉತ್ತರ ಪ್ರದೇಶಕ್ಕೂ ಗೋರಖನಾಥೇಶ್ವರನ ಸಂಬAಧದ ಬಗ್ಗೆ ಯೋಗಿಜೀ ಮೆಲುಕು ಹಾಕಿದರು. ಪರಶುರಾಮ ಕಥೆ, ಕಾಲಭೈರವೇಶ್ವರನ ಕಥೆ, ಧರ್ಮಸ್ಥಳ ಮತ್ತು ಆದಿಚುಂಚನಗಿರಿಯ ಇತಿಹಾಸ ಹಾಗೂ ನಾಥ ಪರಂಪರೆಯ ಹಾಗೂ ಕರ್ನಾಟಕ ಸರ್ಕಾರ ಪ್ರಸ್ತುತ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಹಲವು ವಿಚಾರಗಳ ಕುರಿತು ಸುದೀರ್ಘವಾಗಿ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಕುವೆಂಪು ಅವರ ರಾಮಯಣ ದರ್ಶನಂ ಹಾಗೂ ಎಸ್.ಎಲ್. ಭೈರಪ್ಪನವರ ಪರ್ವ ಪುಸ್ತಕವನ್ನು ಯೋಗಿ ಆದಿತ್ಯನಾಥ್ ಅವರಿಗೆ ಸಚಿವರು ನೀಡಿದರು.
ಕೆಪಿಎಸ್‌ಸಿ ಸದಸ್ಯ ಪ್ರಭುದೇವ್, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್, ಮಾಧ್ಯಮ ಸಲಹೆಗಾರ ಪ್ರದೀಪ್ ಕುಮಾರ್ ಹಾಜರಿದ್ದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago