ಮಂಡ್ಯ: ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
ಲಖನೌನಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಖುದ್ದು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಅವರು ಕೆ.ಆರ್. ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಆಹ್ವಾನ ನೀಡಿದರು.
ಅ.13 ರಿಂದ 16 ರ ವರೆಗೂ ಕೆ.ಆರ್. ಪೇಟೆಯ ಲಕ್ಷ್ಮಣತೀರ್ಥ-ಹೇಮಾವತಿ-ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದೆ. ಈ ಮಹಾಕುಂಭ ಮೇಳದಲ್ಲಿ ಅ.೧೬ ರಂದು ಪಾಲ್ಗೊಳ್ಳುವುದಾಗಿ ಯೋಗಿ ಆದಿತ್ಯನಾಥ್ ಅವರು ತಿಳಿಸಿದರು.
ಮುಕ್ಕಾಲು ಗಂಟೆ ಮಾತುಕತೆ:
ತಮ್ಮನ್ನು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಹಾಗೂ ನಿಯೋಗದ ಜತೆ ಮುಕ್ಕಾಲು ಗಂಟೆಗೂ ಅಧಿಕ ಕಾಲ ಯೋಗಿ ಆದಿತ್ಯನಾಥ್ ಅವರು ಮಾತುಕತೆ ನಡೆಸಿ, ವಿಶೇಷ ಆತಿಥ್ಯ ನೀಡಿದರು.
ಕರ್ನಾಟಕ ಹಾಗೂ ಉತ್ತರ ಪ್ರದೇಶಕ್ಕೂ ಗೋರಖನಾಥೇಶ್ವರನ ಸಂಬAಧದ ಬಗ್ಗೆ ಯೋಗಿಜೀ ಮೆಲುಕು ಹಾಕಿದರು. ಪರಶುರಾಮ ಕಥೆ, ಕಾಲಭೈರವೇಶ್ವರನ ಕಥೆ, ಧರ್ಮಸ್ಥಳ ಮತ್ತು ಆದಿಚುಂಚನಗಿರಿಯ ಇತಿಹಾಸ ಹಾಗೂ ನಾಥ ಪರಂಪರೆಯ ಹಾಗೂ ಕರ್ನಾಟಕ ಸರ್ಕಾರ ಪ್ರಸ್ತುತ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಹಲವು ವಿಚಾರಗಳ ಕುರಿತು ಸುದೀರ್ಘವಾಗಿ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಕುವೆಂಪು ಅವರ ರಾಮಯಣ ದರ್ಶನಂ ಹಾಗೂ ಎಸ್.ಎಲ್. ಭೈರಪ್ಪನವರ ಪರ್ವ ಪುಸ್ತಕವನ್ನು ಯೋಗಿ ಆದಿತ್ಯನಾಥ್ ಅವರಿಗೆ ಸಚಿವರು ನೀಡಿದರು.
ಕೆಪಿಎಸ್ಸಿ ಸದಸ್ಯ ಪ್ರಭುದೇವ್, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್, ಮಾಧ್ಯಮ ಸಲಹೆಗಾರ ಪ್ರದೀಪ್ ಕುಮಾರ್ ಹಾಜರಿದ್ದರು.
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…