ಮಂಡ್ಯ: ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
ಲಖನೌನಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಖುದ್ದು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಅವರು ಕೆ.ಆರ್. ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಆಹ್ವಾನ ನೀಡಿದರು.
ಅ.13 ರಿಂದ 16 ರ ವರೆಗೂ ಕೆ.ಆರ್. ಪೇಟೆಯ ಲಕ್ಷ್ಮಣತೀರ್ಥ-ಹೇಮಾವತಿ-ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದೆ. ಈ ಮಹಾಕುಂಭ ಮೇಳದಲ್ಲಿ ಅ.೧೬ ರಂದು ಪಾಲ್ಗೊಳ್ಳುವುದಾಗಿ ಯೋಗಿ ಆದಿತ್ಯನಾಥ್ ಅವರು ತಿಳಿಸಿದರು.
ಮುಕ್ಕಾಲು ಗಂಟೆ ಮಾತುಕತೆ:
ತಮ್ಮನ್ನು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಹಾಗೂ ನಿಯೋಗದ ಜತೆ ಮುಕ್ಕಾಲು ಗಂಟೆಗೂ ಅಧಿಕ ಕಾಲ ಯೋಗಿ ಆದಿತ್ಯನಾಥ್ ಅವರು ಮಾತುಕತೆ ನಡೆಸಿ, ವಿಶೇಷ ಆತಿಥ್ಯ ನೀಡಿದರು.
ಕರ್ನಾಟಕ ಹಾಗೂ ಉತ್ತರ ಪ್ರದೇಶಕ್ಕೂ ಗೋರಖನಾಥೇಶ್ವರನ ಸಂಬAಧದ ಬಗ್ಗೆ ಯೋಗಿಜೀ ಮೆಲುಕು ಹಾಕಿದರು. ಪರಶುರಾಮ ಕಥೆ, ಕಾಲಭೈರವೇಶ್ವರನ ಕಥೆ, ಧರ್ಮಸ್ಥಳ ಮತ್ತು ಆದಿಚುಂಚನಗಿರಿಯ ಇತಿಹಾಸ ಹಾಗೂ ನಾಥ ಪರಂಪರೆಯ ಹಾಗೂ ಕರ್ನಾಟಕ ಸರ್ಕಾರ ಪ್ರಸ್ತುತ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಹಲವು ವಿಚಾರಗಳ ಕುರಿತು ಸುದೀರ್ಘವಾಗಿ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಕುವೆಂಪು ಅವರ ರಾಮಯಣ ದರ್ಶನಂ ಹಾಗೂ ಎಸ್.ಎಲ್. ಭೈರಪ್ಪನವರ ಪರ್ವ ಪುಸ್ತಕವನ್ನು ಯೋಗಿ ಆದಿತ್ಯನಾಥ್ ಅವರಿಗೆ ಸಚಿವರು ನೀಡಿದರು.
ಕೆಪಿಎಸ್ಸಿ ಸದಸ್ಯ ಪ್ರಭುದೇವ್, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್, ಮಾಧ್ಯಮ ಸಲಹೆಗಾರ ಪ್ರದೀಪ್ ಕುಮಾರ್ ಹಾಜರಿದ್ದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…