Mysore
20
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಟಿಬೆಟ್ ಕ್ಯಾಂಪ್ ನಲ್ಲಿ ಅಪ್ಪು ಸ್ಮರಣೆ ಕಾರ್ಯಕ್ರಮ

ಹನೂರು: ತಾಲೂಕಿನ ಒಡೆಯರಪಾಳ್ಯ ಟಿಬಿಟಿಯನ್ ಕ್ಯಾಂಪ್ ಟಿಬೆಟಿಯನ್ ಪ್ರಜೆಗಳು
ಈ ನಾಡು ಕಂಡ ಅಪರೂಪದ ಚಲನಚಿತ್ರ ನಟ ಪುನೀತ್ ರಾಜಕುಮಾರ್ ಅವರ ಗೀತೆಗಳನ್ನು ಹಾಡುವ ಮೂಲಕ ಗಮನ ಸೆಳೆದಿದ್ದಾರೆ.

ಈ ಮೂಲಕ ಶ್ರೇಷ್ಠ ನಟನಿಗೆ ಯಾವುದೇ ಜಾತಿ ಧರ್ಮ ಭಾಷೆಯ ಹಂಗಿಲ್ಲ ಎಂಬುದನ್ನು ಇಲ್ಲಿನ ಟಿಬೆಟಿಯನ್ ಪ್ರಜೆಗಳು ತೋರಿಸಿಕೊಟ್ಟಿದ್ದಾರೆ.

ಪುನೀತ್ ರಾಜಕುಮಾರ್ ಅವರ ಪ್ರಸಿದ್ಧ ಗೀತೆಗಳಲ್ಲೊಂದಾದ ‘ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ನೀನೇ ರಾಜಕುಮಾರ’ ಎಂಬ ಹಾಡನ್ನು ತಮ್ಮ ಸುಮಧುರ ಕಂಠದ ಮೂಲಕ ಮನಮೋಹಕವಾಗಿ ಹಾಡಿದ್ದಾರೆ.

ಟಿಬೆಟಿಯನ್ನರ ಸಾಂಪ್ರದಾಯಿಕ ಉಡುಗೆ ತೊಡೆಗೆ ಜೊತೆಗೆ ಕನ್ನಡದ ಶಾಲನ್ನು ಹಾಕಿಕೊಂಡು ಈ ನಾಡು ನುಡಿ ಜಲ ಹಾಗೂ ನಟನಿಗೆ ಗೌರವ ಸಲ್ಲಿಸಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಅಪ್ಪು ನೆನೆದು ಕಣ್ಣೀರಿಟ್ಟ ಮಕ್ಕಳು : ಪುನೀತ್ ರಾಜಕುಮಾರ್ ಅವರ ಹಾಡುಗಳನ್ನು ಹೇಳುತ್ತಿದ್ದಂತೆ ಅಲ್ಲಿನ ಮಕ್ಕಳು ಪುನೀತ್ ರಾಜ್ ಅವರನ್ನು ನೆನೆದು ಬಾವುಕರಾಗಿ ಕಣ್ಣೀರಿಟ್ಟದ್ದು ಕಂಡು ಬಂದಿತು. ಪುನೀತ್ ರಾಜಕುಮಾರ್ ಸೇರಿದಂತೆ ಕನ್ನಡ ಚಲನಚಿತ್ರ ಗೀತೆಗಳನ್ನು ಸುಮಧುರ ಗೀತೆಗಳನ್ನು ಹಾಡಿದ್ದು ವಿಶೇಷವಾಗಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!