ಹನೂರು: ತಾಲೂಕಿನ ಒಡೆಯರಪಾಳ್ಯ ಟಿಬಿಟಿಯನ್ ಕ್ಯಾಂಪ್ ಟಿಬೆಟಿಯನ್ ಪ್ರಜೆಗಳು
ಈ ನಾಡು ಕಂಡ ಅಪರೂಪದ ಚಲನಚಿತ್ರ ನಟ ಪುನೀತ್ ರಾಜಕುಮಾರ್ ಅವರ ಗೀತೆಗಳನ್ನು ಹಾಡುವ ಮೂಲಕ ಗಮನ ಸೆಳೆದಿದ್ದಾರೆ.
ಈ ಮೂಲಕ ಶ್ರೇಷ್ಠ ನಟನಿಗೆ ಯಾವುದೇ ಜಾತಿ ಧರ್ಮ ಭಾಷೆಯ ಹಂಗಿಲ್ಲ ಎಂಬುದನ್ನು ಇಲ್ಲಿನ ಟಿಬೆಟಿಯನ್ ಪ್ರಜೆಗಳು ತೋರಿಸಿಕೊಟ್ಟಿದ್ದಾರೆ.
ಪುನೀತ್ ರಾಜಕುಮಾರ್ ಅವರ ಪ್ರಸಿದ್ಧ ಗೀತೆಗಳಲ್ಲೊಂದಾದ ‘ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ನೀನೇ ರಾಜಕುಮಾರ’ ಎಂಬ ಹಾಡನ್ನು ತಮ್ಮ ಸುಮಧುರ ಕಂಠದ ಮೂಲಕ ಮನಮೋಹಕವಾಗಿ ಹಾಡಿದ್ದಾರೆ.
ಟಿಬೆಟಿಯನ್ನರ ಸಾಂಪ್ರದಾಯಿಕ ಉಡುಗೆ ತೊಡೆಗೆ ಜೊತೆಗೆ ಕನ್ನಡದ ಶಾಲನ್ನು ಹಾಕಿಕೊಂಡು ಈ ನಾಡು ನುಡಿ ಜಲ ಹಾಗೂ ನಟನಿಗೆ ಗೌರವ ಸಲ್ಲಿಸಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಅಪ್ಪು ನೆನೆದು ಕಣ್ಣೀರಿಟ್ಟ ಮಕ್ಕಳು : ಪುನೀತ್ ರಾಜಕುಮಾರ್ ಅವರ ಹಾಡುಗಳನ್ನು ಹೇಳುತ್ತಿದ್ದಂತೆ ಅಲ್ಲಿನ ಮಕ್ಕಳು ಪುನೀತ್ ರಾಜ್ ಅವರನ್ನು ನೆನೆದು ಬಾವುಕರಾಗಿ ಕಣ್ಣೀರಿಟ್ಟದ್ದು ಕಂಡು ಬಂದಿತು. ಪುನೀತ್ ರಾಜಕುಮಾರ್ ಸೇರಿದಂತೆ ಕನ್ನಡ ಚಲನಚಿತ್ರ ಗೀತೆಗಳನ್ನು ಸುಮಧುರ ಗೀತೆಗಳನ್ನು ಹಾಡಿದ್ದು ವಿಶೇಷವಾಗಿತ್ತು.
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…
ಮುಂಬೈ: ದೇಶದಲ್ಲಿ ಮುಂಗಾರು ಪ್ರವೇಶಿದರೂ ಮುಂಬೈನಲ್ಲಿ ಮಳೆಯ ಕೊರತೆ ಎದುರಾಗಿದೆ. ಮಳೆ ಕೊರತೆ ಎದುರಾದ ಪರಿಣಾಮ ಜಲಾಶಯಗಳಲ್ಲಿ ನೀರಿನ ಮಟ್ಟ…
ಎಚ್.ಎಸ್.ದಿನೇಶ್ಕುಮಾರ್ ಲಿಕ್ಕರ್ ಗ್ಯಾರೇಜ್, ಫಾಕ್ಸ್ ಡೆನ್ಗೆ ಮಾತ್ರ ಅನುಮತಿ; ನೋಟಿಸ್ ಜಾರಿ ಮಾಡಿ ಸುಮ್ಮನಾಗಿದ್ದ ಅಧಿಕಾರಿಗಳು?; ಅಬಕಾರಿ ಡಿಸಿ ಅಮಾನತ್ತಿಗೆ…
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…
‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…
ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…