ಜಿಲ್ಲೆಗಳು

ತಾರಕದಲ್ಲಿ ಅನಾಥವಾದ ಹುಲಿ ಮರಿಗಳು ಪತ್ತೆ

ತಾರಕದಲ್ಲಿ ಅನಾಥವಾದ ಹುಲಿ ಮರಿಗಳು ಪತ್ತೆ
ಅಂತರಸಂತೆ: ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಸಮೀಪದ ಜಮೀನು ಒಂದರಲ್ಲಿ ಉರುಳಿಗೆ ಸಿಲುಕಿ ಮೃತಪಟ್ಟ ಹೆಣ್ಣು ಹುಲಿಯ ಮೂರು ಮರಿಗಳು ಪತ್ತೆಯಾಗಿದ್ದು, ಎಲ್ಲವೂ ಆರೋಗ್ಯದಿಂದಿರುವುದು ಕಂಡು ಬಂದಿದೆ.
ತಾಯಿ ಹುಲಿ ಉರುಳಿಗೆ ಸಿಲುಕಿ ಮೃತಪಟ್ಟ ಬಳಿಕ ಈ ಮೂರು ಹುಲಿ ಮರಿಗಳನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಕಾರ್ಯಾಚರಣೆ ವೇಳೆ ಪತ್ತೆಯಾಗದ ಹುಲಿ ಮರಿಗಳು ಅರಣ್ಯದಲ್ಲಿ ಅಳವಡಿಸಲಾದ ಕ್ಯಾಮೆರಾ ಟ್ಯ್ರಾಪಿಂಗ್ನಲ್ಲಿ ಸೆರೆಯಾಗಿವೆ.

ನಾಗರಹೊಳೆ ಅರಣ್ಯ ವ್ಯಾಪ್ತಿಯ ತಾಲ್ಲೂಕಿನ ಅಂತರಸಂತೆ ವನ್ಯಜೀವಿ ವಲಯಕ್ಕೆ ಹೊಂದಿಕೊಂಡಂತಿರುವ ತಾರಕ ಸಮೀಪದ ಜಮೀನಿನಲ್ಲಿ ನವೆಂಬರ್‌ 12ರಂದು ಕೊಳೆತ ಸ್ಥಿತಿಯಲ್ಲಿ ಸುಮಾರು 12-13 ವರ್ಷದ ಹೆಣ್ಣುಹುಲಿಯ ಕಳೇಬರ ಪತ್ತೆಯಾಗಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಜಮೀನಿನಲ್ಲಿ ಕಾಡುಹಂದಿಗಾಗಿ ಹಾಕಿದ್ದ ಉರುಳಿಗೆ ಸಿಲುಕಿ ಹುಲಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿತ್ತು. ಆಗ ಅನಾಥವಾದ ಮೂರು ಹುಲಿ ಮರಿಗಳ ರಕ್ಷಣೆಯ ದೃಷ್ಟಿಯಿಂದ ಅರಣ್ಯ ಇಲಾಖೆ ಶೋಧ ಕಾರ್ಯಾಚರಣೆ ಕೈಗೊಂಡಿತ್ತು. ಇದೀಗ ಹುಲಿ ಮರಿಗಳು ಪತ್ತೆಯಾಗುವುದರೊಂದಿಗೆ ಅರಣ್ಯಾಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಹುಲಿಗಳ ಚಲನವಲನವನ್ನು ಇನ್ನೊಂದಷ್ಟು ಕಾಲ ಗಮನಿಸಿ ಇವುಗಳನ್ನು ಹಿಡಿದು ಸಂರಕ್ಷಿಸಬೇಕೇ ಅಥವಾ ಕಾಡಿನಲ್ಲಿಯೇ ಬಿಟ್ಟು ಸುರಕ್ಷತೆಯ ಬಗ್ಗೆ ಗಮನ ಹರಿಸಬೇಕೇ ಎಂದು ನಿರ್ಧಾರ ಕೈಗೊಳ್ಳಲಿದ್ದಾರೆ.

andolanait

Recent Posts

ರೈತರ ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ: ಜೆಸಿಬಿ ಕಾರ್ಯ ಸ್ಥಗಿತ

ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ…

21 mins ago

ಏಪ್ರಿಲ್‌ನಿಂದ ವೇತನ ಪರಿಷ್ಕರಣೆಗೆ ಒಪ್ಪಿದರೂ ತಿರಸ್ಕಾರ: ಮತ್ತೆ ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು

ಬೆಂಗಳೂರು: ರಾಜ್ಯ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮತ್ತೆ ಪ್ರತಿಭಟನೆ, ಹೋರಾಟಕ್ಕೆ ಮುಂದಾಗಿದ್ದಾರೆ. 38 ತಿಂಗಳ ವೇತನ…

33 mins ago

ಮೈಸೂರು: ಲೋಕೋಪಯೋಗಿ ಇಲಾಖೆ ಎಇಇ ರೇವನ್‌ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಮೈಸೂರು: ಪಿಡಬ್ಲ್ಯೂಡಿ ಅಧಿಕಾರಿ ಜಿ.ಕೆ.ರೇವನ್‌ ಕುಮಾರ್‌ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಂದರು ಮತ್ತು ಒಳನಾಡಿನ…

37 mins ago

ರಾಜ್ಯದಲ್ಲಿ ಇಂದು ಸಹ ಗುಡುಗು ಸಹಿತ ಧಾರಾಕಾರ ಮಳೆ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…

1 hour ago

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್‌ ಶವವಾಗಿ ಪತ್ತೆ

ಮಂಡ್ಯ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ…

1 hour ago

ಬಾಂಗ್ಲಾ ಮಾಜಿ ಸ್ಪೀಕರ್‌ ಶಿರಿನ್‌ ಶರ್ಮಿನ್‌ ಚೌಧರಿ ಬಂಧನ

ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಫೀಕರ್‌ ಆಗಿದ್ದ ಶಿರಿನ್‌ ಶರ್ಮಿನ್‌ ಚೌಧರಿ ಅವರನ್ನು ಢಾಕಾ ಮೆಟ್ರೋಪಾಲಿಟನ್‌ ಪೊಲೀಸರ ಪತ್ತೇದಾರಿ ವಿಭಾಗವು…

2 hours ago