ತಾರಕದಲ್ಲಿ ಅನಾಥವಾದ ಹುಲಿ ಮರಿಗಳು ಪತ್ತೆ
ಅಂತರಸಂತೆ: ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಸಮೀಪದ ಜಮೀನು ಒಂದರಲ್ಲಿ ಉರುಳಿಗೆ ಸಿಲುಕಿ ಮೃತಪಟ್ಟ ಹೆಣ್ಣು ಹುಲಿಯ ಮೂರು ಮರಿಗಳು ಪತ್ತೆಯಾಗಿದ್ದು, ಎಲ್ಲವೂ ಆರೋಗ್ಯದಿಂದಿರುವುದು ಕಂಡು ಬಂದಿದೆ.
ತಾಯಿ ಹುಲಿ ಉರುಳಿಗೆ ಸಿಲುಕಿ ಮೃತಪಟ್ಟ ಬಳಿಕ ಈ ಮೂರು ಹುಲಿ ಮರಿಗಳನ್ನು ರಕ್ಷಿಸಲು ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಕಾರ್ಯಾಚರಣೆ ವೇಳೆ ಪತ್ತೆಯಾಗದ ಹುಲಿ ಮರಿಗಳು ಅರಣ್ಯದಲ್ಲಿ ಅಳವಡಿಸಲಾದ ಕ್ಯಾಮೆರಾ ಟ್ಯ್ರಾಪಿಂಗ್ನಲ್ಲಿ ಸೆರೆಯಾಗಿವೆ.
ನಾಗರಹೊಳೆ ಅರಣ್ಯ ವ್ಯಾಪ್ತಿಯ ತಾಲ್ಲೂಕಿನ ಅಂತರಸಂತೆ ವನ್ಯಜೀವಿ ವಲಯಕ್ಕೆ ಹೊಂದಿಕೊಂಡಂತಿರುವ ತಾರಕ ಸಮೀಪದ ಜಮೀನಿನಲ್ಲಿ ನವೆಂಬರ್ 12ರಂದು ಕೊಳೆತ ಸ್ಥಿತಿಯಲ್ಲಿ ಸುಮಾರು 12-13 ವರ್ಷದ ಹೆಣ್ಣುಹುಲಿಯ ಕಳೇಬರ ಪತ್ತೆಯಾಗಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಜಮೀನಿನಲ್ಲಿ ಕಾಡುಹಂದಿಗಾಗಿ ಹಾಕಿದ್ದ ಉರುಳಿಗೆ ಸಿಲುಕಿ ಹುಲಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿತ್ತು. ಆಗ ಅನಾಥವಾದ ಮೂರು ಹುಲಿ ಮರಿಗಳ ರಕ್ಷಣೆಯ ದೃಷ್ಟಿಯಿಂದ ಅರಣ್ಯ ಇಲಾಖೆ ಶೋಧ ಕಾರ್ಯಾಚರಣೆ ಕೈಗೊಂಡಿತ್ತು. ಇದೀಗ ಹುಲಿ ಮರಿಗಳು ಪತ್ತೆಯಾಗುವುದರೊಂದಿಗೆ ಅರಣ್ಯಾಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಹುಲಿಗಳ ಚಲನವಲನವನ್ನು ಇನ್ನೊಂದಷ್ಟು ಕಾಲ ಗಮನಿಸಿ ಇವುಗಳನ್ನು ಹಿಡಿದು ಸಂರಕ್ಷಿಸಬೇಕೇ ಅಥವಾ ಕಾಡಿನಲ್ಲಿಯೇ ಬಿಟ್ಟು ಸುರಕ್ಷತೆಯ ಬಗ್ಗೆ ಗಮನ ಹರಿಸಬೇಕೇ ಎಂದು ನಿರ್ಧಾರ ಕೈಗೊಳ್ಳಲಿದ್ದಾರೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…