ಪೊನ್ನಂಪೇಟೆ: ಕೊಡಗಿನಲ್ಲಿ ಹುಲಿ ಉಪಟಳ ಮುಂದುವರಿದಿದ್ದು, ಹುಲಿ ದಾಳಿಗೆ ಎರಡು ಎಮ್ಮೆಗಳು ಬಲಿಯಾಗಿರುವ ಘಟನೆ ವಿರಾಜಪೇಟೆಯ ಹರಿಹರ ಗ್ರಾಮದಲ್ಲಿ ನಡೆದಿದೆ.
ಹರಿಹರ ಗ್ರಾಮದ ತೀತಿರ ಸದಾ ಬೋಪಯ್ಯ ಎಂಬವರಿಗೆ ಸೇರಿದ ಎಮ್ಮೆಗಳ ಮೇಲೆ ಹುಲಿ ದಾಳಿ ಮಾಡಿದ್ದು, ಎರಡು ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟಿವೆ.
ಕೆಲವು ದಿನಗಳ ಹಿಂದೆಯಷ್ಟೇ ಇದೇ ಭಾಗದಲ್ಲಿ ಹಸುವೊಂದು ಹುಲಿ ದಾಳಿಯಿಂದ ಸಾವನ್ನಪ್ಪಿತ್ತು. ಕಳೆದ ತಿಂಗಳಷ್ಟೇ ಸಿದ್ದಾಪುರ ವ್ಯಾಪ್ತಿಯಲ್ಲಿ ಜಾನುವಾರು ಭಕ್ಷಕ ಹುಲಿಯನ್ನು ಸೆರೆ ಹಿಡಿದು ಸ್ಥಳಾಂತರಿಸಲಾಗಿತ್ತು. ಆದರೆ, ಇದೀಗ ಮತ್ತೊಂದು ಹುಲಿ ಉಪಟಳ ನೀಡಲು ಆರಂಭಿಸಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ವಿರಾಜಪೇಟೆ ತಾಲ್ಲೂಕು ಬಿಜೆಪಿ ಕೃಷಿ ಮೋರ್ಚಾದ ಅಧ್ಯಕ್ಷ ಕಟ್ಟೆರ ಈಶ್ವರ ತಿಮ್ಮಯ್ಯ ಹುಲಿ ಸೆರೆಗೆ ಕ್ರಮ ಕೈಗೊಳ್ಳಬೇಕು ಮತ್ತು ಹೆಚ್ಚಿನ ಪರಿಹಾರವನ್ನು ಶೀಘ್ರ ಬಿಡುಗಡೆ ಮಾಡಬೇಕು ಎಂದು ಅರಣ್ಯ ಅಧಿಕಾರಿಗಳನ್ನು ಒತ್ತಾಯಿಸಿದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…