ಪೊನ್ನಂಪೇಟೆ: ಕೊಡಗಿನಲ್ಲಿ ಹುಲಿ ಉಪಟಳ ಮುಂದುವರಿದಿದ್ದು, ಹುಲಿ ದಾಳಿಗೆ ಎರಡು ಎಮ್ಮೆಗಳು ಬಲಿಯಾಗಿರುವ ಘಟನೆ ವಿರಾಜಪೇಟೆಯ ಹರಿಹರ ಗ್ರಾಮದಲ್ಲಿ ನಡೆದಿದೆ.
ಹರಿಹರ ಗ್ರಾಮದ ತೀತಿರ ಸದಾ ಬೋಪಯ್ಯ ಎಂಬವರಿಗೆ ಸೇರಿದ ಎಮ್ಮೆಗಳ ಮೇಲೆ ಹುಲಿ ದಾಳಿ ಮಾಡಿದ್ದು, ಎರಡು ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟಿವೆ.
ಕೆಲವು ದಿನಗಳ ಹಿಂದೆಯಷ್ಟೇ ಇದೇ ಭಾಗದಲ್ಲಿ ಹಸುವೊಂದು ಹುಲಿ ದಾಳಿಯಿಂದ ಸಾವನ್ನಪ್ಪಿತ್ತು. ಕಳೆದ ತಿಂಗಳಷ್ಟೇ ಸಿದ್ದಾಪುರ ವ್ಯಾಪ್ತಿಯಲ್ಲಿ ಜಾನುವಾರು ಭಕ್ಷಕ ಹುಲಿಯನ್ನು ಸೆರೆ ಹಿಡಿದು ಸ್ಥಳಾಂತರಿಸಲಾಗಿತ್ತು. ಆದರೆ, ಇದೀಗ ಮತ್ತೊಂದು ಹುಲಿ ಉಪಟಳ ನೀಡಲು ಆರಂಭಿಸಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ವಿರಾಜಪೇಟೆ ತಾಲ್ಲೂಕು ಬಿಜೆಪಿ ಕೃಷಿ ಮೋರ್ಚಾದ ಅಧ್ಯಕ್ಷ ಕಟ್ಟೆರ ಈಶ್ವರ ತಿಮ್ಮಯ್ಯ ಹುಲಿ ಸೆರೆಗೆ ಕ್ರಮ ಕೈಗೊಳ್ಳಬೇಕು ಮತ್ತು ಹೆಚ್ಚಿನ ಪರಿಹಾರವನ್ನು ಶೀಘ್ರ ಬಿಡುಗಡೆ ಮಾಡಬೇಕು ಎಂದು ಅರಣ್ಯ ಅಧಿಕಾರಿಗಳನ್ನು ಒತ್ತಾಯಿಸಿದರು.
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ರೆಸಾರ್ಟ್ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…