ಪೊನ್ನಂಪೇಟೆ: ಕೊಡಗಿನಲ್ಲಿ ಹುಲಿ ಉಪಟಳ ಮುಂದುವರಿದಿದ್ದು, ಹುಲಿ ದಾಳಿಗೆ ಎರಡು ಎಮ್ಮೆಗಳು ಬಲಿಯಾಗಿರುವ ಘಟನೆ ವಿರಾಜಪೇಟೆಯ ಹರಿಹರ ಗ್ರಾಮದಲ್ಲಿ ನಡೆದಿದೆ.
ಹರಿಹರ ಗ್ರಾಮದ ತೀತಿರ ಸದಾ ಬೋಪಯ್ಯ ಎಂಬವರಿಗೆ ಸೇರಿದ ಎಮ್ಮೆಗಳ ಮೇಲೆ ಹುಲಿ ದಾಳಿ ಮಾಡಿದ್ದು, ಎರಡು ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟಿವೆ.
ಕೆಲವು ದಿನಗಳ ಹಿಂದೆಯಷ್ಟೇ ಇದೇ ಭಾಗದಲ್ಲಿ ಹಸುವೊಂದು ಹುಲಿ ದಾಳಿಯಿಂದ ಸಾವನ್ನಪ್ಪಿತ್ತು. ಕಳೆದ ತಿಂಗಳಷ್ಟೇ ಸಿದ್ದಾಪುರ ವ್ಯಾಪ್ತಿಯಲ್ಲಿ ಜಾನುವಾರು ಭಕ್ಷಕ ಹುಲಿಯನ್ನು ಸೆರೆ ಹಿಡಿದು ಸ್ಥಳಾಂತರಿಸಲಾಗಿತ್ತು. ಆದರೆ, ಇದೀಗ ಮತ್ತೊಂದು ಹುಲಿ ಉಪಟಳ ನೀಡಲು ಆರಂಭಿಸಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ವಿರಾಜಪೇಟೆ ತಾಲ್ಲೂಕು ಬಿಜೆಪಿ ಕೃಷಿ ಮೋರ್ಚಾದ ಅಧ್ಯಕ್ಷ ಕಟ್ಟೆರ ಈಶ್ವರ ತಿಮ್ಮಯ್ಯ ಹುಲಿ ಸೆರೆಗೆ ಕ್ರಮ ಕೈಗೊಳ್ಳಬೇಕು ಮತ್ತು ಹೆಚ್ಚಿನ ಪರಿಹಾರವನ್ನು ಶೀಘ್ರ ಬಿಡುಗಡೆ ಮಾಡಬೇಕು ಎಂದು ಅರಣ್ಯ ಅಧಿಕಾರಿಗಳನ್ನು ಒತ್ತಾಯಿಸಿದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…