ಜಿಲ್ಲೆಗಳು

ಬಂಡೀಪುರ ಮದ್ದೂರು ವಲಯದಲ್ಲಿ ಹುಲಿ ಕಳೇಬರ ಪತ್ತೆ !

ಗುಂಡ್ಲುಪೇಟೆ: ಬಂಡೀಪುರ ಹುಲಿಯೋಜನೆ, ಗುಂಡ್ಲುಪೇಟೆ ಉಪ ವಿಭಾಗ, ಮದ್ದೂರು ವಲಯ ವ್ಯಾಪ್ತಿಯ ಮದ್ದೂರು ಗಸ್ತು, ಸೀಗನಬೆಟ್ಟ ಸರ್ಕಲ್ ರಸ್ತೆ ಬಳಿ ಸಿಬ್ಬಂದಿಗಳು ಗಸ್ತು ನಡೆಸುತಿದ್ದ ಸಮಯ ಹುಲಿ ಕಳೆಬರ ಪತ್ತೆಯಾಗಿದೆ.

ಸಿಬ್ಬಂಧಿಗಳು ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಹುಲಿ ಮೃತಪಟ್ಟಿರುವುದನ್ನು ಗಮನಿಸಿ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕರಾದ ಡಾ. ಪಿ ರಮೇಶ್‌ಕುಮಾರ್,ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಜಿ. ರವೀಂದ್ರ, ಮದ್ದೂರು ವಲಯದ ವಲಯ ಅರಣ್ಯಾಧಿಕಾರಿ ಶ್ರೀ ಬಿ.ಎಂ ಮಲ್ಲೇಶ್, ಇಲಾಖಾ ಪಶುವೈಧ್ಯಾಧಿಕಾರಿ ಡಾ. ಮಿರ್ಜಾ ವಾಸೀಂ ಹಾಗೂ ಇಲಾಖಾ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಮೃತ ಹುಲಿಯು 3 ರಿಂದ 4 ವರ್ಷ ವರ್ಷ ಪ್ರಾಯದ ಗಂಡು ಹುಲಿಯಾಗಿದ್ದು, ಕಾಡಿನೊಳಗೆ ಮತ್ತೊಂದು ಹುಲಿಯ ಜೊತೆ ಕಾದಾಟ ನಡೆಸುವಾಗ ದೇಹಕ್ಕೆ ಬಲವಾದ ಪೆಟ್ಟುಬಿದ್ದಿರುವುದು ಕಂಡುಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ಸಮಯದಲ್ಲಿ ಹುಲಿಯ ಹೊಟ್ಟೆಯಒಳಭಾಗದಲ್ಲಿ ಮುಳ್ಳು ಹಂದಿಯ ಮುಳ್ಳುಗಳು ಕಂಡುಬಂದಿದ್ದು ಹೊಟ್ಟೆಯ ಒಳ ಭಾಗದಲ್ಲಿ ಮುಳ್ಳುಗಳು ಚುಚ್ಚಿ ರಕ್ತ ಸ್ರಾವವಾಗಿ ಹುಲಿಯು ಮೃತಪಟ್ಟಿರುತ್ತದೆ ಎಂದು ಇಲಾಖಾ ಪಶುವೈಧ್ಯಾಧಿಕಾರಿ ತಿಳಿಸಿದ್ದಾರೆ.

ಬಂಡೀಪುರ ಹುಲಿಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ಡಾ. ಪಿ ರಮೇಶ್‌ಕುಮಾರ್,ಮಾರ್ಗದರ್ಶನದಂತೆ ಮೃತ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ ರಾಷ್ಟ್ರೀಯಾ ಹುಲಿ ಸಂರಕ್ಷಣಾ ಪ್ರಾಧಿಕಾರ ನಿಯಮಾನುಸಾರ ಸುಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ, ಡಾ.ರಮೇಶ್‌ಕುಮಾರ್ ಪಿ, , ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕರು, ಬಂಡೀಪುರ ಹುಲಿಯೋಜನೆ, ರವೀಂದ್ರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಗುಂಡ್ಲುಪೇಟೆ ಉಪ ವಿಭಾಗ, ಶ್ರೀ ಬಿ.ಎಂ ಮಲ್ಲೇಶ್, ವಲಯ ಅರಣ್ಯಾಧಿಕಾರಿ, ಮದ್ದೂರು ವಲಯ, ಡಾ. ಮಿರ್ಜಾ ವಾಸೀಂ, ಇಲಾಖಾ ಪಶುವೈಧ್ಯಾಧಿಕಾರಿಗಳು, ಕೃತಿಕಾ ಆಲನಹಳ್ಳಿ, ಎನ್.ಟಿ.ಸಿ.ಎ ಪ್ರತಿನಿಧಿ, ಶ್ರೀ ರಘುರಾಂ, ಎನ್.ಜಿ.ಓ, ಹಿಮಗಿರಿ ವನ್ಯಜೀವಿ ಸಂರಕ್ಷಣಾ ಸಂಸ್ಥೆ, ಗುಂಡ್ಲುಪೇಟೆ, ಶ್ರೀ ರವಿ ಸಂಗೂರ್, ಉಪ ವಲಯ ಅರಣ್ಯಾಧಿಕಾರಿ, ಶ್ರೀ ಸಂಜಯ್ ಹಾಗೂ ಶ್ರೀ ನವೀನ್, ಗಸ್ತು ವನಪಾಲಕರು ಹಾಗೂ ಇಲಾಖಾ ಸಿಬ್ಬಂದಿಗಳು ಹಾಜರಿದ್ದರು.

andolanait

Recent Posts

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

1 hour ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

1 hour ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

1 hour ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

2 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

2 hours ago

ʼಮಣ್ಣಿನ ಗಣಪನಿಗೆ ಮನ್ನಣೆಗೆ ಸಿಗಲಿʼ

ಭಾರತಿ ಸಜ್ಜನ್‌ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…

2 hours ago