ಜಿಲ್ಲೆಗಳು

ಬಂಡೀಪುರ ಮದ್ದೂರು ವಲಯದಲ್ಲಿ ಹುಲಿ ಕಳೇಬರ ಪತ್ತೆ !

ಗುಂಡ್ಲುಪೇಟೆ: ಬಂಡೀಪುರ ಹುಲಿಯೋಜನೆ, ಗುಂಡ್ಲುಪೇಟೆ ಉಪ ವಿಭಾಗ, ಮದ್ದೂರು ವಲಯ ವ್ಯಾಪ್ತಿಯ ಮದ್ದೂರು ಗಸ್ತು, ಸೀಗನಬೆಟ್ಟ ಸರ್ಕಲ್ ರಸ್ತೆ ಬಳಿ ಸಿಬ್ಬಂದಿಗಳು ಗಸ್ತು ನಡೆಸುತಿದ್ದ ಸಮಯ ಹುಲಿ ಕಳೆಬರ ಪತ್ತೆಯಾಗಿದೆ.

ಸಿಬ್ಬಂಧಿಗಳು ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಹುಲಿ ಮೃತಪಟ್ಟಿರುವುದನ್ನು ಗಮನಿಸಿ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕರಾದ ಡಾ. ಪಿ ರಮೇಶ್‌ಕುಮಾರ್,ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಜಿ. ರವೀಂದ್ರ, ಮದ್ದೂರು ವಲಯದ ವಲಯ ಅರಣ್ಯಾಧಿಕಾರಿ ಶ್ರೀ ಬಿ.ಎಂ ಮಲ್ಲೇಶ್, ಇಲಾಖಾ ಪಶುವೈಧ್ಯಾಧಿಕಾರಿ ಡಾ. ಮಿರ್ಜಾ ವಾಸೀಂ ಹಾಗೂ ಇಲಾಖಾ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.

ಮೃತ ಹುಲಿಯು 3 ರಿಂದ 4 ವರ್ಷ ವರ್ಷ ಪ್ರಾಯದ ಗಂಡು ಹುಲಿಯಾಗಿದ್ದು, ಕಾಡಿನೊಳಗೆ ಮತ್ತೊಂದು ಹುಲಿಯ ಜೊತೆ ಕಾದಾಟ ನಡೆಸುವಾಗ ದೇಹಕ್ಕೆ ಬಲವಾದ ಪೆಟ್ಟುಬಿದ್ದಿರುವುದು ಕಂಡುಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ಸಮಯದಲ್ಲಿ ಹುಲಿಯ ಹೊಟ್ಟೆಯಒಳಭಾಗದಲ್ಲಿ ಮುಳ್ಳು ಹಂದಿಯ ಮುಳ್ಳುಗಳು ಕಂಡುಬಂದಿದ್ದು ಹೊಟ್ಟೆಯ ಒಳ ಭಾಗದಲ್ಲಿ ಮುಳ್ಳುಗಳು ಚುಚ್ಚಿ ರಕ್ತ ಸ್ರಾವವಾಗಿ ಹುಲಿಯು ಮೃತಪಟ್ಟಿರುತ್ತದೆ ಎಂದು ಇಲಾಖಾ ಪಶುವೈಧ್ಯಾಧಿಕಾರಿ ತಿಳಿಸಿದ್ದಾರೆ.

ಬಂಡೀಪುರ ಹುಲಿಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ಡಾ. ಪಿ ರಮೇಶ್‌ಕುಮಾರ್,ಮಾರ್ಗದರ್ಶನದಂತೆ ಮೃತ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ ರಾಷ್ಟ್ರೀಯಾ ಹುಲಿ ಸಂರಕ್ಷಣಾ ಪ್ರಾಧಿಕಾರ ನಿಯಮಾನುಸಾರ ಸುಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ, ಡಾ.ರಮೇಶ್‌ಕುಮಾರ್ ಪಿ, , ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕರು, ಬಂಡೀಪುರ ಹುಲಿಯೋಜನೆ, ರವೀಂದ್ರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಗುಂಡ್ಲುಪೇಟೆ ಉಪ ವಿಭಾಗ, ಶ್ರೀ ಬಿ.ಎಂ ಮಲ್ಲೇಶ್, ವಲಯ ಅರಣ್ಯಾಧಿಕಾರಿ, ಮದ್ದೂರು ವಲಯ, ಡಾ. ಮಿರ್ಜಾ ವಾಸೀಂ, ಇಲಾಖಾ ಪಶುವೈಧ್ಯಾಧಿಕಾರಿಗಳು, ಕೃತಿಕಾ ಆಲನಹಳ್ಳಿ, ಎನ್.ಟಿ.ಸಿ.ಎ ಪ್ರತಿನಿಧಿ, ಶ್ರೀ ರಘುರಾಂ, ಎನ್.ಜಿ.ಓ, ಹಿಮಗಿರಿ ವನ್ಯಜೀವಿ ಸಂರಕ್ಷಣಾ ಸಂಸ್ಥೆ, ಗುಂಡ್ಲುಪೇಟೆ, ಶ್ರೀ ರವಿ ಸಂಗೂರ್, ಉಪ ವಲಯ ಅರಣ್ಯಾಧಿಕಾರಿ, ಶ್ರೀ ಸಂಜಯ್ ಹಾಗೂ ಶ್ರೀ ನವೀನ್, ಗಸ್ತು ವನಪಾಲಕರು ಹಾಗೂ ಇಲಾಖಾ ಸಿಬ್ಬಂದಿಗಳು ಹಾಜರಿದ್ದರು.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

2 hours ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

2 hours ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

2 hours ago

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

15 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

16 hours ago