ಅಂತರಸಂತೆ: ಉರುಳಿಗೆ ಸಿಲುಕಿ ಹೆಣ್ಣು ಹುಲಿಯೊಂದು ಸಾವನ್ನಪ್ಪಿದ್ದು, ಕೊಳೆತ ಸ್ಥಿತಿಯಲ್ಲಿ ಹುಲಿಯ ಕಳೇಬರ ಪತ್ತೆಯಾಗಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಸಮೀಪದ ಜಮೀನು ಒಂದರಲ್ಲಿ ನಡೆದಿದೆ.
ನಾಗರಹೊಳೆ ಅರಣ್ಯ ವ್ಯಾಪ್ತಿಯ ತಾಲ್ಲೂಕಿನ ಅಂತರಸಂತೆ ವನ್ಯಜೀವಿ ವಲಯಕ್ಕೆ ಹೊಂದಿಕೊಂಡಂತಿರುವ ತಾರಕ ಸಮೀಪ ಜಮೀನಿನಲ್ಲಿ ಕೊಳೆತ ಸ್ಥಿತಿಯಲ್ಲಿ ಸುಮಾರು 12-13 ವರ್ಷದ ಹೆಣ್ಣುಹುಲಿಯ ಕಳೇಬರ ಪತ್ತೆಯಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಜಮೀನಿನಲ್ಲಿ ಕಾಡುಹಂದಿಗಾಗಿ ಹಾಕಿದ್ದ ಉರುಳಿಗೆ ಸಿಲುಕಿದ್ದ ಹುಲಿ ಸಾವನ್ನಪ್ಪಿರುವುದ ಬೆಳಕಿಗೆ ಬಂದಿದೆ. ಅಲ್ಲದೇ ಹುಲಿಗೆ ಮೂರು ಮರಿಗಳು ಸಹ ಇದ್ದು, ಸದ್ಯ ಮರಿಗಳ ರಕ್ಷಣೆಯ ದೃಷ್ಟಿಯಿಂದ ಮರಿಗಳ ಹುಡುಕಾಟದಲ್ಲಿ ಅರಣ್ಯ ಇಲಾಖೆ ತೊಡಗಿದೆ. ಸಧ್ಯ ಈಗಾಗಲೇ ಕೊಂಬಿಂಗ್ ಕಾರ್ಯಚರಣೆ ಆರಂಭಿಸಿರುವ ಅರಣ್ಯ ಇಲಾಖೆ ಸುತ್ತಲು ಕ್ಯಾಮೆರಾ ಟ್ರಾಪ್ ಗಳನ್ನು ಅಳವಡಿಸಿದ್ದಾರೆ ಹುಡುಕಾಟ ಆರಂಭಿಸಿದ್ದಾರೆ.
ಬಳಿಕ ಪಶುವೈದ್ಯರಾರ ರಮೇಶ್ ಮತ್ತು ಪ್ರಸನ್ನ ರವರ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಅರಣ್ಯ ವ್ಯಾಪ್ತಿಯಲ್ಲಿ ಹುಲಿಯ ಮೃತದೇಹವನ್ನು ಸುಡುವ ಮೂಲಕ ಅಂತ್ಯಕ್ರಿಯೆ ನಡೆಸಲಾಯಿತು.
ಸ್ಥಳಕ್ಕೆ ನಾಗರಹೊಳೆ ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ, ಎಸಿಎಫ್ ರಂಗಸ್ವಾಮಿ, ಗೌರವ ವನ್ಯಜೀವಿ ಪರಿಪಾಲಕಿ ಕೃತಿಕ ಆಲನಹಳ್ಳಿ, ವಲಯ ಅರಣ್ಯಾಧಿಕಾರಿಗಳಾದ ಸಿದ್ದರಾಜು, ಮಧು, ಹರ್ಷಿತ್ ಸೇರಿದಂತೆ ಎಸ್ ಟಿಪಿಎಫ್ ಸಿಬ್ಬಂದಿಗಳು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಮುಂತಾದವರು ಹಾಜರಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…