ಜಿಲ್ಲೆಗಳು

ಉರುಳಿಗೆ ಸಿಲುಕಿ ಹೆಣ್ಣು ಹುಲಿ ಸಾವು: ಕೊಳೆತ ಸ್ಥಿತಿಯಲ್ಲಿ ಕಳೇಬರ ಪತ್ತೆ

ಅಂತರಸಂತೆ: ಉರುಳಿಗೆ ಸಿಲುಕಿ ಹೆಣ್ಣು ಹುಲಿಯೊಂದು ಸಾವನ್ನಪ್ಪಿದ್ದು, ಕೊಳೆತ ಸ್ಥಿತಿಯಲ್ಲಿ ಹುಲಿಯ ಕಳೇಬರ ಪತ್ತೆಯಾಗಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಸಮೀಪದ ಜಮೀನು ಒಂದರಲ್ಲಿ ನಡೆದಿದೆ.

ನಾಗರಹೊಳೆ ಅರಣ್ಯ ವ್ಯಾಪ್ತಿಯ ತಾಲ್ಲೂಕಿನ ಅಂತರಸಂತೆ ವನ್ಯಜೀವಿ ವಲಯಕ್ಕೆ ಹೊಂದಿಕೊಂಡಂತಿರುವ ತಾರಕ ಸಮೀಪ ಜಮೀನಿನಲ್ಲಿ ಕೊಳೆತ ಸ್ಥಿತಿಯಲ್ಲಿ ಸುಮಾರು 12-13 ವರ್ಷದ ಹೆಣ್ಣುಹುಲಿಯ ಕಳೇಬರ ಪತ್ತೆಯಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಜಮೀನಿನಲ್ಲಿ ಕಾಡುಹಂದಿಗಾಗಿ ಹಾಕಿದ್ದ ಉರುಳಿಗೆ ಸಿಲುಕಿದ್ದ ಹುಲಿ ಸಾವನ್ನಪ್ಪಿರುವುದ ಬೆಳಕಿಗೆ ಬಂದಿದೆ. ಅಲ್ಲದೇ ಹುಲಿಗೆ ಮೂರು ಮರಿಗಳು ಸಹ ಇದ್ದು, ಸದ್ಯ ಮರಿಗಳ ರಕ್ಷಣೆಯ ದೃಷ್ಟಿಯಿಂದ ಮರಿಗಳ ಹುಡುಕಾಟದಲ್ಲಿ ಅರಣ್ಯ ಇಲಾಖೆ ತೊಡಗಿದೆ. ಸಧ್ಯ ಈಗಾಗಲೇ ಕೊಂಬಿಂಗ್ ಕಾರ್ಯಚರಣೆ ಆರಂಭಿಸಿರುವ ಅರಣ್ಯ ಇಲಾಖೆ ಸುತ್ತಲು ಕ್ಯಾಮೆರಾ ಟ್ರಾಪ್ ಗಳನ್ನು ಅಳವಡಿಸಿದ್ದಾರೆ ಹುಡುಕಾಟ ಆರಂಭಿಸಿದ್ದಾರೆ.

ಬಳಿಕ ಪಶುವೈದ್ಯರಾರ ರಮೇಶ್ ಮತ್ತು ಪ್ರಸನ್ನ ರವರ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಅರಣ್ಯ ವ್ಯಾಪ್ತಿಯಲ್ಲಿ ಹುಲಿಯ ಮೃತದೇಹವನ್ನು ಸುಡುವ ಮೂಲಕ ಅಂತ್ಯಕ್ರಿಯೆ ನಡೆಸಲಾಯಿತು.

ಸ್ಥಳಕ್ಕೆ ನಾಗರಹೊಳೆ ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ, ಎಸಿಎಫ್ ರಂಗಸ್ವಾಮಿ, ಗೌರವ ವನ್ಯಜೀವಿ ಪರಿಪಾಲಕಿ ಕೃತಿಕ ಆಲನಹಳ್ಳಿ, ವಲಯ ಅರಣ್ಯಾಧಿಕಾರಿಗಳಾದ ಸಿದ್ದರಾಜು, ಮಧು, ಹರ್ಷಿತ್ ಸೇರಿದಂತೆ ಎಸ್ ಟಿಪಿಎಫ್ ಸಿಬ್ಬಂದಿಗಳು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಮುಂತಾದವರು ಹಾಜರಿದ್ದರು.

andolanait

Recent Posts

ಹೆಚ್ಚಾಯ್ತು ಸಫಾರಿ ವಿರೋಧ : 25ಕ್ಕೂ ಹೆಚ್ಚು ಗ್ರಾ.ಪಂ ಪಿಡಿಒಗಳಿಗೆ ಮನವಿ ಸಲ್ಲಿಸಿ ರೈತರು

ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…

9 hours ago

ಟ್ರಂಪ್‌ ಸುಂಕ ರದ್ದುಪಡಿಸಿದ ಅಮೆರಿಕಾ ಸುಪ್ರೀಂಕೋರ್ಟ್‌ : ಭಾರತ ಹೇಳಿದ್ದೇನು?

ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…

9 hours ago

ಗಡಿ ಭದ್ರತೆಗೆ ಒತ್ತು : ತಮಿಳುನಾಡು ಚುನಾವಣೆಗೆ ಕರ್ನಾಟಕ ಪೊಲೀಸ್ ಸಹಕಾರ ಭರವಸೆ

ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…

10 hours ago

ಶಾರ್ಟ್ ಸರ್ಕ್ಯೂಟ್ : ಎಲೆಕ್ಟ್ರಾನಿಕ್ಸ್ ಅಂಗಡಿ ಸುಟ್ಟು ಭಸ್ಮ, ಲಕ್ಷಾಂತರ ರೂ. ನಷ್ಟ

ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…

10 hours ago

ಇವಿ ಹಬ್ ಆಗಿ ಕರ್ನಾಟಕ ರೂಪಾಂತರ ; ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ವಿಶ್ವಾಸ

ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…

10 hours ago

ಶೇ.10 ರಷ್ಟು ಜಾಗತಿಕ ಸುಂಕ ಘೋಷಿಸಿದ ಡೊನಾಲ್ಡ್ ಟ್ರಂಪ್

ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…

10 hours ago