ಜಿಲ್ಲೆಗಳು

ಉರುಳಿಗೆ ಸಿಲುಕಿ ಹೆಣ್ಣು ಹುಲಿ ಸಾವು: ಕೊಳೆತ ಸ್ಥಿತಿಯಲ್ಲಿ ಕಳೇಬರ ಪತ್ತೆ

ಅಂತರಸಂತೆ: ಉರುಳಿಗೆ ಸಿಲುಕಿ ಹೆಣ್ಣು ಹುಲಿಯೊಂದು ಸಾವನ್ನಪ್ಪಿದ್ದು, ಕೊಳೆತ ಸ್ಥಿತಿಯಲ್ಲಿ ಹುಲಿಯ ಕಳೇಬರ ಪತ್ತೆಯಾಗಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ತಾರಕ ಸಮೀಪದ ಜಮೀನು ಒಂದರಲ್ಲಿ ನಡೆದಿದೆ.

ನಾಗರಹೊಳೆ ಅರಣ್ಯ ವ್ಯಾಪ್ತಿಯ ತಾಲ್ಲೂಕಿನ ಅಂತರಸಂತೆ ವನ್ಯಜೀವಿ ವಲಯಕ್ಕೆ ಹೊಂದಿಕೊಂಡಂತಿರುವ ತಾರಕ ಸಮೀಪ ಜಮೀನಿನಲ್ಲಿ ಕೊಳೆತ ಸ್ಥಿತಿಯಲ್ಲಿ ಸುಮಾರು 12-13 ವರ್ಷದ ಹೆಣ್ಣುಹುಲಿಯ ಕಳೇಬರ ಪತ್ತೆಯಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಜಮೀನಿನಲ್ಲಿ ಕಾಡುಹಂದಿಗಾಗಿ ಹಾಕಿದ್ದ ಉರುಳಿಗೆ ಸಿಲುಕಿದ್ದ ಹುಲಿ ಸಾವನ್ನಪ್ಪಿರುವುದ ಬೆಳಕಿಗೆ ಬಂದಿದೆ. ಅಲ್ಲದೇ ಹುಲಿಗೆ ಮೂರು ಮರಿಗಳು ಸಹ ಇದ್ದು, ಸದ್ಯ ಮರಿಗಳ ರಕ್ಷಣೆಯ ದೃಷ್ಟಿಯಿಂದ ಮರಿಗಳ ಹುಡುಕಾಟದಲ್ಲಿ ಅರಣ್ಯ ಇಲಾಖೆ ತೊಡಗಿದೆ. ಸಧ್ಯ ಈಗಾಗಲೇ ಕೊಂಬಿಂಗ್ ಕಾರ್ಯಚರಣೆ ಆರಂಭಿಸಿರುವ ಅರಣ್ಯ ಇಲಾಖೆ ಸುತ್ತಲು ಕ್ಯಾಮೆರಾ ಟ್ರಾಪ್ ಗಳನ್ನು ಅಳವಡಿಸಿದ್ದಾರೆ ಹುಡುಕಾಟ ಆರಂಭಿಸಿದ್ದಾರೆ.

ಬಳಿಕ ಪಶುವೈದ್ಯರಾರ ರಮೇಶ್ ಮತ್ತು ಪ್ರಸನ್ನ ರವರ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಅರಣ್ಯ ವ್ಯಾಪ್ತಿಯಲ್ಲಿ ಹುಲಿಯ ಮೃತದೇಹವನ್ನು ಸುಡುವ ಮೂಲಕ ಅಂತ್ಯಕ್ರಿಯೆ ನಡೆಸಲಾಯಿತು.

ಸ್ಥಳಕ್ಕೆ ನಾಗರಹೊಳೆ ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ, ಎಸಿಎಫ್ ರಂಗಸ್ವಾಮಿ, ಗೌರವ ವನ್ಯಜೀವಿ ಪರಿಪಾಲಕಿ ಕೃತಿಕ ಆಲನಹಳ್ಳಿ, ವಲಯ ಅರಣ್ಯಾಧಿಕಾರಿಗಳಾದ ಸಿದ್ದರಾಜು, ಮಧು, ಹರ್ಷಿತ್ ಸೇರಿದಂತೆ ಎಸ್ ಟಿಪಿಎಫ್ ಸಿಬ್ಬಂದಿಗಳು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಮುಂತಾದವರು ಹಾಜರಿದ್ದರು.

andolanait

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

1 hour ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

15 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

15 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

15 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

15 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

15 hours ago