ಸಿದ್ದಾಪುರ (ಕೊಡಗು): ಅನಾರೋಗ್ಯದಿಂದ ಬಳಲುತ್ತಿದ್ದ 12 ವರ್ಷ ಪ್ರಾಯದ ಗಂಡು ಹುಲಿಯೊಂದನ್ನು ಇಲ್ಲಿನ ಮಾಲ್ದಾರೆ ಗ್ರಾಮದ ಆಸ್ತಾನ ಭಾಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಸೆರೆ ಹಿಡಿದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಹುಲಿಯನ್ನು ಕಳುಹಿಸಿಕೊಡಲಾಗಿದೆ.
ಸಾಕಾನೆಗಳಾದ ಪ್ರಶಾಂತ, ಸುಗ್ರೀವ, ಶ್ರೀರಾಮ, ಹರ್ಷ, ವಿಕ್ರಂ, ಈಶ್ವರ ಆನೆಗಳ ಸಹಕಾರದೊಂದಿಗೆ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡರು. ವನ್ಯಜೀವಿ ವೈದ್ಯಾಧಿಕಾರಿ ಡಾ.ರಮೇಶ್ ಹಾಗೂ ಕುಶಾಲನಗರ ಉಪವಲಯ ಅರಣ್ಯಾಧಿಕಾರಿ ಕನ್ನಂಡ ರಂಜನ್ ಹುಲಿಗೆ ಅರಿವಳಿಕೆ ಚುಚ್ಚುಮದ್ದು ಪ್ರಯೋಗಿಸಿದರು. ಕೆಲಕಾಲ ಓಡಿದ ಹುಲಿ, ಬಳಿಕ ಅಸ್ತಾನ ಗ್ರಾಮದ ಬಳಿ ನಿತ್ರಾಣಗೊಂಡು ಬಿದ್ದಿತು. ನಂತರ, ಹುಲಿಯನ್ನು ಬಲೆ ಹಾಕಿ ಹಿಡಿಯಲಾಯಿತು. ಹುಲಿಯ ಹಲ್ಲು ಹಾಗೂ ಕಾಲಿನ ಭಾಗದಲ್ಲಿ ಗಾಯವಾಗಿದ್ದು, ಆಹಾರ ಸೇವನೆ ಮಾಡದಿರುವುದರಿಂದ ಹುಲಿ ಸಾಕಷ್ಟು ಬಳಲಿದೆ. ವನ್ಯಜೀವಿ ವೈದ್ಯಾದಿಕಾರಿ ಡಾ.ಚಿಟ್ಟಿಯಪ್ಪ ಹಾಗೂ ಡಾ.ರಮೇಶ್ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಆರೈಕೆಗಾಗಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಕಳುಹಿಸಿದರು.
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…