ಸಿದ್ದಾಪುರ (ಕೊಡಗು): ಅನಾರೋಗ್ಯದಿಂದ ಬಳಲುತ್ತಿದ್ದ 12 ವರ್ಷ ಪ್ರಾಯದ ಗಂಡು ಹುಲಿಯೊಂದನ್ನು ಇಲ್ಲಿನ ಮಾಲ್ದಾರೆ ಗ್ರಾಮದ ಆಸ್ತಾನ ಭಾಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಸೆರೆ ಹಿಡಿದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಹುಲಿಯನ್ನು ಕಳುಹಿಸಿಕೊಡಲಾಗಿದೆ.
ಸಾಕಾನೆಗಳಾದ ಪ್ರಶಾಂತ, ಸುಗ್ರೀವ, ಶ್ರೀರಾಮ, ಹರ್ಷ, ವಿಕ್ರಂ, ಈಶ್ವರ ಆನೆಗಳ ಸಹಕಾರದೊಂದಿಗೆ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡರು. ವನ್ಯಜೀವಿ ವೈದ್ಯಾಧಿಕಾರಿ ಡಾ.ರಮೇಶ್ ಹಾಗೂ ಕುಶಾಲನಗರ ಉಪವಲಯ ಅರಣ್ಯಾಧಿಕಾರಿ ಕನ್ನಂಡ ರಂಜನ್ ಹುಲಿಗೆ ಅರಿವಳಿಕೆ ಚುಚ್ಚುಮದ್ದು ಪ್ರಯೋಗಿಸಿದರು. ಕೆಲಕಾಲ ಓಡಿದ ಹುಲಿ, ಬಳಿಕ ಅಸ್ತಾನ ಗ್ರಾಮದ ಬಳಿ ನಿತ್ರಾಣಗೊಂಡು ಬಿದ್ದಿತು. ನಂತರ, ಹುಲಿಯನ್ನು ಬಲೆ ಹಾಕಿ ಹಿಡಿಯಲಾಯಿತು. ಹುಲಿಯ ಹಲ್ಲು ಹಾಗೂ ಕಾಲಿನ ಭಾಗದಲ್ಲಿ ಗಾಯವಾಗಿದ್ದು, ಆಹಾರ ಸೇವನೆ ಮಾಡದಿರುವುದರಿಂದ ಹುಲಿ ಸಾಕಷ್ಟು ಬಳಲಿದೆ. ವನ್ಯಜೀವಿ ವೈದ್ಯಾದಿಕಾರಿ ಡಾ.ಚಿಟ್ಟಿಯಪ್ಪ ಹಾಗೂ ಡಾ.ರಮೇಶ್ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಆರೈಕೆಗಾಗಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಕಳುಹಿಸಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…