ಜಿಲ್ಲೆಗಳು

ಹುಲಿಯ ಹಲ್ಲುಗಳು, ಉಗುರುಗಳ ಸಾಗಣೆ; ಇಬ್ಬರ ಬಂಧನ

ಹನೂರು : ಅಕ್ರಮವಾಗಿ ಹುಲಿಯ ಹಲ್ಲುಗಳು ಹಾಗೂ ಹುಲಿ ಉಗರುಗಳನ್ನು ಸಾಗಣೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಲೊಕ್ಕನಹಳ್ಳಿ ಹೋಬಳಿಯ ಅಂಡೆ ಕುರುಬರ ದೊಡ್ಡಿ ಗ್ರಾಮದ ಗೋಪಾಲ ಬಿನ್ ದೇವ ನಾಯಕ (37) ಹಾಗೂ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಗೊರೆ ಬಾಳ ಗ್ರಾಮದ ಹನುಮೇಶ್ ಬಿನ್ ಲೇಟ್ ಹೊನ್ನಪ್ಪ (29) ಬಂಧಿತ ಆರೋಪಿಗಳಾಗಿದ್ದಾರೆ.

ಘಟನೆಯ ವಿವರ : ಸೋಮವಾರ ರಾತ್ರಿ 8:00 ಸಮಯದಲ್ಲಿ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಿ ಜಿ ಪಾಳ್ಯ ಗ್ರಾಮದ ಅಡ್ಡ ರಸ್ತೆ ಮಾರ್ಗವಾಗಿ ದ್ವಿಚಕ್ರವಾಹನ ಸಂಖ್ಯೆ ka-10 ಎಲ್ 3616 ಸಂಖ್ಯೆಯ ಮೋಟಾರ್ ಬೈಕ್ ನಲ್ಲಿ ಇಬ್ಬರು ವ್ಯಕ್ತಿಗಳು ಹುಲಿಯ ಉಗುರುಗಳನ್ನು ಅಕ್ರಮವಾಗಿ ಕಳ್ಳ ಮಾರುಕಟ್ಟೆಗೆ ಕೊಳ್ಳೇಗಾಲ ಕಡೆಗೆ ಮಾರಾಟ ಮಾಡಲು ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ( ಎಫ್ಎಂಎಸ್ ) ದಳದ ಸಬ್ ಇನ್ಸ್ಪೆಕ್ಟರ್ ವಿಜಯ ರಾಜ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಹುಲಿಯ 40 ಉಗುರುಗಳು ಹಾಗೂ ಹುಲಿಯ ಎರಡು ಹಲ್ಲುಗಳನ್ನು ವಶಪಡಿಸಿಕೊಂಡಿದ್ದು ಇವರ ವಿರುದ್ಧ ವನ್ಯಜೀವಿ ಕಾಯ್ದೆ,2972 ಶೆಡ್ಯೂಲ್ ಒಂದರ ಅಡಿಯಲ್ಲಿ 39(ಡಿ ) 50,51, ರ ಅಡಿ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ದಾಳಿಯಲ್ಲಿ ಅರಣ್ಯ ಸಂಚಾರಿ ( ಎಫ್ಎಂಎಸ್ ) ದಳದ ಮುಖ್ಯಪೇದೆಗಳಾದ ಸ್ವಾಮಿ ತಕೀಉಲ್ಲಾ, ರಾಮಚಂದ್ರ, ಬಸವರಾಜು, ಶಂಕರ್ ಚಾಲಕ ಪ್ರಭಾಕರ್ ಪಾಲ್ಗೊಂಡಿದ್ದರು.

andolanait

Recent Posts

ಖಾದಿ ಕೇಂದ್ರಗಳಿಗೆ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರದ ಹೆಜ್ಜೆ

ಮಹಾತ್ಮ ಗಾಂಧೀಜಿ ಅವರು ಹುತಾತ್ಮರಾದ ನೆನಪಿನಾರ್ಥವಾಗಿ ಆಚರಿಸುವ ಸರ್ವೋದಯ ದಿನದಂತೆ ರಾಜ್ಯ ಸರ್ಕಾರ ಖಾದಿ ಗ್ರಾಮೋದ್ಯೋಗ ಕೇಂದ್ರಗಳಿಗೆ ಚೈತನ್ಯ ತುಂಬುವ…

2 hours ago

ಮೌನ ಸಾಧಕ ಎಂ.ಶ್ರೀನಿವಾಸ್ @ 75

ಮಂಡ್ಯದಲ್ಲಿ ಮೂರು ಬಾರಿ ಶಾಸಕರಾಗಿ ಗೆದ್ದು ದಾಖಲೆ ಡಾ.ಎಸ್.ಶಿವರಾಮು ಇತಿಹಾಸದಲ್ಲಿ ವ್ಯಕ್ತಿಚರಿತ್ರೆಗೆ ಮಹತ್ವವಾದ ಸ್ಥಾನವಿದೆ.ಇದನ್ನು ಮನಗಂಡೇ ಬ್ರಿಟಿಷ್ ಚರಿತ್ರೆಕಾರರಲ್ಲಿ ಪ್ರಮುಖರಾಗಿದ್ದ…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಜುಂಜುಂ ಫ್ಯಾಕ್ಟರಿ ಮಾಲೀಕನ ಸಾವಿನ ವೃತ್ತಾಂತ

ಎಡಗೈಯಲ್ಲಿದ್ದ ಸಿಗರೇಟ್ ಅನ್ನು ಬಾಯಲ್ಲಿಟ್ಟು ಹೊಗೆ ಎಳೆದುಕೊಂಡವನು ಅದನ್ನು ಹೊರಬಿಟ್ಟಾಗ ಸುರುಳಿ ಸುರುಳಿಯಾಗಿ ಹೊಗೆ ಮೇಲೇರತೊಡಗಿತು. ಹೀಗೆ ಬಾಯೊಳಗೆ ಎಳೆದುಕೊಂಡ…

3 hours ago

ಉದ್ಯಮಿಯ ಪರಿಶ್ರಮದಿಂದ ಕಾಯಕಲ್ಪ ಪಡೆದ ಉದ್ಯಾನ

ತಿ.ನರಸೀಪುರ: ಪಟ್ಟಣದ ಕಪಿಲಾ ನದಿ ದಂಡೆಯ ಶ್ರೀ ಬಳ್ಳೇಶ್ವರ ಸ್ವಾಮಿ ದೇವಸ್ಥಾನದ ಬಳಿಯ ಪಾರ್ಕ್ ಹೋಟೆಲ್ ಉದ್ಯಮಿಯೊಬ್ಬರ ಪರಿಶ್ರಮದಿಂದ ಕಾಯಕಲ್ಪ…

3 hours ago

ಶತಮಾನದ ದೇವರಾಜ ಶಾಲೆಯ ಶೋಕಗೀತೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶತಮಾನ ತುಂಬಿರುವ ದೇವರಾಜ ಸರ್ಕಾರಿ ಹಿರಿಯ…

3 hours ago

ಅಭದ್ರತೆ ಹಾದಿಯಲಿ ವಿಕಸಿತ ಭಾರತದತ್ತ ‘ಆನಿ (ಆಮೆ) ನಡಿಗೆ’

ರಾಜಾರಾಂ ತಲ್ಲೂರು ಆರ್ಥಿಕ ಶಿಸ್ತಿನ ಚೌಕಟ್ಟಿನ ಒಂದೊಂದೇ ಅಂಶಗಳನ್ನು ಮುಂದಿಟ್ಟುಕೊಂಡು - ‘ನೋಡಿ, ನಾವು ಆರ್ಥಿಕವಾಗಿ ಸ್ಥಿರವಾಗಿದ್ದು, ವಿಕಸಿತ ಭಾರತದತ್ತ…

3 hours ago