ಹನೂರು : ಅಕ್ರಮವಾಗಿ ಹುಲಿಯ ಹಲ್ಲುಗಳು ಹಾಗೂ ಹುಲಿ ಉಗರುಗಳನ್ನು ಸಾಗಣೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಲೊಕ್ಕನಹಳ್ಳಿ ಹೋಬಳಿಯ ಅಂಡೆ ಕುರುಬರ ದೊಡ್ಡಿ ಗ್ರಾಮದ ಗೋಪಾಲ ಬಿನ್ ದೇವ ನಾಯಕ (37) ಹಾಗೂ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಗೊರೆ ಬಾಳ ಗ್ರಾಮದ ಹನುಮೇಶ್ ಬಿನ್ ಲೇಟ್ ಹೊನ್ನಪ್ಪ (29) ಬಂಧಿತ ಆರೋಪಿಗಳಾಗಿದ್ದಾರೆ.
ಘಟನೆಯ ವಿವರ : ಸೋಮವಾರ ರಾತ್ರಿ 8:00 ಸಮಯದಲ್ಲಿ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಿ ಜಿ ಪಾಳ್ಯ ಗ್ರಾಮದ ಅಡ್ಡ ರಸ್ತೆ ಮಾರ್ಗವಾಗಿ ದ್ವಿಚಕ್ರವಾಹನ ಸಂಖ್ಯೆ ka-10 ಎಲ್ 3616 ಸಂಖ್ಯೆಯ ಮೋಟಾರ್ ಬೈಕ್ ನಲ್ಲಿ ಇಬ್ಬರು ವ್ಯಕ್ತಿಗಳು ಹುಲಿಯ ಉಗುರುಗಳನ್ನು ಅಕ್ರಮವಾಗಿ ಕಳ್ಳ ಮಾರುಕಟ್ಟೆಗೆ ಕೊಳ್ಳೇಗಾಲ ಕಡೆಗೆ ಮಾರಾಟ ಮಾಡಲು ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ( ಎಫ್ಎಂಎಸ್ ) ದಳದ ಸಬ್ ಇನ್ಸ್ಪೆಕ್ಟರ್ ವಿಜಯ ರಾಜ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಹುಲಿಯ 40 ಉಗುರುಗಳು ಹಾಗೂ ಹುಲಿಯ ಎರಡು ಹಲ್ಲುಗಳನ್ನು ವಶಪಡಿಸಿಕೊಂಡಿದ್ದು ಇವರ ವಿರುದ್ಧ ವನ್ಯಜೀವಿ ಕಾಯ್ದೆ,2972 ಶೆಡ್ಯೂಲ್ ಒಂದರ ಅಡಿಯಲ್ಲಿ 39(ಡಿ ) 50,51, ರ ಅಡಿ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ದಾಳಿಯಲ್ಲಿ ಅರಣ್ಯ ಸಂಚಾರಿ ( ಎಫ್ಎಂಎಸ್ ) ದಳದ ಮುಖ್ಯಪೇದೆಗಳಾದ ಸ್ವಾಮಿ ತಕೀಉಲ್ಲಾ, ರಾಮಚಂದ್ರ, ಬಸವರಾಜು, ಶಂಕರ್ ಚಾಲಕ ಪ್ರಭಾಕರ್ ಪಾಲ್ಗೊಂಡಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…