ಹನೂರು : ಅಕ್ರಮವಾಗಿ ಹುಲಿಯ ಹಲ್ಲುಗಳು ಹಾಗೂ ಹುಲಿ ಉಗರುಗಳನ್ನು ಸಾಗಣೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಲೊಕ್ಕನಹಳ್ಳಿ ಹೋಬಳಿಯ ಅಂಡೆ ಕುರುಬರ ದೊಡ್ಡಿ ಗ್ರಾಮದ ಗೋಪಾಲ ಬಿನ್ ದೇವ ನಾಯಕ (37) ಹಾಗೂ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಗೊರೆ ಬಾಳ ಗ್ರಾಮದ ಹನುಮೇಶ್ ಬಿನ್ ಲೇಟ್ ಹೊನ್ನಪ್ಪ (29) ಬಂಧಿತ ಆರೋಪಿಗಳಾಗಿದ್ದಾರೆ.
ಘಟನೆಯ ವಿವರ : ಸೋಮವಾರ ರಾತ್ರಿ 8:00 ಸಮಯದಲ್ಲಿ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಿ ಜಿ ಪಾಳ್ಯ ಗ್ರಾಮದ ಅಡ್ಡ ರಸ್ತೆ ಮಾರ್ಗವಾಗಿ ದ್ವಿಚಕ್ರವಾಹನ ಸಂಖ್ಯೆ ka-10 ಎಲ್ 3616 ಸಂಖ್ಯೆಯ ಮೋಟಾರ್ ಬೈಕ್ ನಲ್ಲಿ ಇಬ್ಬರು ವ್ಯಕ್ತಿಗಳು ಹುಲಿಯ ಉಗುರುಗಳನ್ನು ಅಕ್ರಮವಾಗಿ ಕಳ್ಳ ಮಾರುಕಟ್ಟೆಗೆ ಕೊಳ್ಳೇಗಾಲ ಕಡೆಗೆ ಮಾರಾಟ ಮಾಡಲು ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ( ಎಫ್ಎಂಎಸ್ ) ದಳದ ಸಬ್ ಇನ್ಸ್ಪೆಕ್ಟರ್ ವಿಜಯ ರಾಜ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಹುಲಿಯ 40 ಉಗುರುಗಳು ಹಾಗೂ ಹುಲಿಯ ಎರಡು ಹಲ್ಲುಗಳನ್ನು ವಶಪಡಿಸಿಕೊಂಡಿದ್ದು ಇವರ ವಿರುದ್ಧ ವನ್ಯಜೀವಿ ಕಾಯ್ದೆ,2972 ಶೆಡ್ಯೂಲ್ ಒಂದರ ಅಡಿಯಲ್ಲಿ 39(ಡಿ ) 50,51, ರ ಅಡಿ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ದಾಳಿಯಲ್ಲಿ ಅರಣ್ಯ ಸಂಚಾರಿ ( ಎಫ್ಎಂಎಸ್ ) ದಳದ ಮುಖ್ಯಪೇದೆಗಳಾದ ಸ್ವಾಮಿ ತಕೀಉಲ್ಲಾ, ರಾಮಚಂದ್ರ, ಬಸವರಾಜು, ಶಂಕರ್ ಚಾಲಕ ಪ್ರಭಾಕರ್ ಪಾಲ್ಗೊಂಡಿದ್ದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…