ಜಿಲ್ಲೆಗಳು

ಹುಲಿಯ ಹಲ್ಲುಗಳು, ಉಗುರುಗಳ ಸಾಗಣೆ; ಇಬ್ಬರ ಬಂಧನ

ಹನೂರು : ಅಕ್ರಮವಾಗಿ ಹುಲಿಯ ಹಲ್ಲುಗಳು ಹಾಗೂ ಹುಲಿ ಉಗರುಗಳನ್ನು ಸಾಗಣೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಲೊಕ್ಕನಹಳ್ಳಿ ಹೋಬಳಿಯ ಅಂಡೆ ಕುರುಬರ ದೊಡ್ಡಿ ಗ್ರಾಮದ ಗೋಪಾಲ ಬಿನ್ ದೇವ ನಾಯಕ (37) ಹಾಗೂ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಗೊರೆ ಬಾಳ ಗ್ರಾಮದ ಹನುಮೇಶ್ ಬಿನ್ ಲೇಟ್ ಹೊನ್ನಪ್ಪ (29) ಬಂಧಿತ ಆರೋಪಿಗಳಾಗಿದ್ದಾರೆ.

ಘಟನೆಯ ವಿವರ : ಸೋಮವಾರ ರಾತ್ರಿ 8:00 ಸಮಯದಲ್ಲಿ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಿ ಜಿ ಪಾಳ್ಯ ಗ್ರಾಮದ ಅಡ್ಡ ರಸ್ತೆ ಮಾರ್ಗವಾಗಿ ದ್ವಿಚಕ್ರವಾಹನ ಸಂಖ್ಯೆ ka-10 ಎಲ್ 3616 ಸಂಖ್ಯೆಯ ಮೋಟಾರ್ ಬೈಕ್ ನಲ್ಲಿ ಇಬ್ಬರು ವ್ಯಕ್ತಿಗಳು ಹುಲಿಯ ಉಗುರುಗಳನ್ನು ಅಕ್ರಮವಾಗಿ ಕಳ್ಳ ಮಾರುಕಟ್ಟೆಗೆ ಕೊಳ್ಳೇಗಾಲ ಕಡೆಗೆ ಮಾರಾಟ ಮಾಡಲು ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ( ಎಫ್ಎಂಎಸ್ ) ದಳದ ಸಬ್ ಇನ್ಸ್ಪೆಕ್ಟರ್ ವಿಜಯ ರಾಜ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಹುಲಿಯ 40 ಉಗುರುಗಳು ಹಾಗೂ ಹುಲಿಯ ಎರಡು ಹಲ್ಲುಗಳನ್ನು ವಶಪಡಿಸಿಕೊಂಡಿದ್ದು ಇವರ ವಿರುದ್ಧ ವನ್ಯಜೀವಿ ಕಾಯ್ದೆ,2972 ಶೆಡ್ಯೂಲ್ ಒಂದರ ಅಡಿಯಲ್ಲಿ 39(ಡಿ ) 50,51, ರ ಅಡಿ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ದಾಳಿಯಲ್ಲಿ ಅರಣ್ಯ ಸಂಚಾರಿ ( ಎಫ್ಎಂಎಸ್ ) ದಳದ ಮುಖ್ಯಪೇದೆಗಳಾದ ಸ್ವಾಮಿ ತಕೀಉಲ್ಲಾ, ರಾಮಚಂದ್ರ, ಬಸವರಾಜು, ಶಂಕರ್ ಚಾಲಕ ಪ್ರಭಾಕರ್ ಪಾಲ್ಗೊಂಡಿದ್ದರು.

andolanait

Recent Posts

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

5 mins ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

24 mins ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

1 hour ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

1 hour ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

2 hours ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

2 hours ago