ಜಿಲ್ಲೆಗಳು

ಹುಲಿಯ ಹಲ್ಲುಗಳು, ಉಗುರುಗಳ ಸಾಗಣೆ; ಇಬ್ಬರ ಬಂಧನ

ಹನೂರು : ಅಕ್ರಮವಾಗಿ ಹುಲಿಯ ಹಲ್ಲುಗಳು ಹಾಗೂ ಹುಲಿ ಉಗರುಗಳನ್ನು ಸಾಗಣೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಲೊಕ್ಕನಹಳ್ಳಿ ಹೋಬಳಿಯ ಅಂಡೆ ಕುರುಬರ ದೊಡ್ಡಿ ಗ್ರಾಮದ ಗೋಪಾಲ ಬಿನ್ ದೇವ ನಾಯಕ (37) ಹಾಗೂ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಗೊರೆ ಬಾಳ ಗ್ರಾಮದ ಹನುಮೇಶ್ ಬಿನ್ ಲೇಟ್ ಹೊನ್ನಪ್ಪ (29) ಬಂಧಿತ ಆರೋಪಿಗಳಾಗಿದ್ದಾರೆ.

ಘಟನೆಯ ವಿವರ : ಸೋಮವಾರ ರಾತ್ರಿ 8:00 ಸಮಯದಲ್ಲಿ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಿ ಜಿ ಪಾಳ್ಯ ಗ್ರಾಮದ ಅಡ್ಡ ರಸ್ತೆ ಮಾರ್ಗವಾಗಿ ದ್ವಿಚಕ್ರವಾಹನ ಸಂಖ್ಯೆ ka-10 ಎಲ್ 3616 ಸಂಖ್ಯೆಯ ಮೋಟಾರ್ ಬೈಕ್ ನಲ್ಲಿ ಇಬ್ಬರು ವ್ಯಕ್ತಿಗಳು ಹುಲಿಯ ಉಗುರುಗಳನ್ನು ಅಕ್ರಮವಾಗಿ ಕಳ್ಳ ಮಾರುಕಟ್ಟೆಗೆ ಕೊಳ್ಳೇಗಾಲ ಕಡೆಗೆ ಮಾರಾಟ ಮಾಡಲು ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ( ಎಫ್ಎಂಎಸ್ ) ದಳದ ಸಬ್ ಇನ್ಸ್ಪೆಕ್ಟರ್ ವಿಜಯ ರಾಜ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಹುಲಿಯ 40 ಉಗುರುಗಳು ಹಾಗೂ ಹುಲಿಯ ಎರಡು ಹಲ್ಲುಗಳನ್ನು ವಶಪಡಿಸಿಕೊಂಡಿದ್ದು ಇವರ ವಿರುದ್ಧ ವನ್ಯಜೀವಿ ಕಾಯ್ದೆ,2972 ಶೆಡ್ಯೂಲ್ ಒಂದರ ಅಡಿಯಲ್ಲಿ 39(ಡಿ ) 50,51, ರ ಅಡಿ ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ದಾಳಿಯಲ್ಲಿ ಅರಣ್ಯ ಸಂಚಾರಿ ( ಎಫ್ಎಂಎಸ್ ) ದಳದ ಮುಖ್ಯಪೇದೆಗಳಾದ ಸ್ವಾಮಿ ತಕೀಉಲ್ಲಾ, ರಾಮಚಂದ್ರ, ಬಸವರಾಜು, ಶಂಕರ್ ಚಾಲಕ ಪ್ರಭಾಕರ್ ಪಾಲ್ಗೊಂಡಿದ್ದರು.

andolanait

Recent Posts

24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…

56 mins ago

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

2 hours ago

ಬಲಮುರಿ ಕಾವೇರಿ ನದಿಯಲ್ಲಿ ಇಬ್ಬರು ಯುವಕರು ಸಾವು

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ನಡೆದಿದೆ. ಚಾಮರಾಜನಗರ…

2 hours ago

ಓದುಗರ ಪತ್ರ: ಮಾನಸ ಗಂಗೋತ್ರಿ ಕ್ಯಾಂಟೀನ್‌ಗಳಲ್ಲಿ ದರ ಏರಿಕೆಗೆ ಕಡಿವಾಣ ಹಾಕಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಖಾಸಗಿ ಹೋಟೆಲ್‌ಗಳಲ್ಲಿ ಕಾಫಿ,ತಿಂಡಿ, ಹಣ್ಣಿನ ಪಾನೀಯ ದರ ದುಬಾರಿಯಾಗಿದ್ದು, ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುವ…

4 hours ago

ಓದುಗರ ಪತ್ರ: ಶಾಲಾ ಶಿಕ್ಷಕರ ಮಾದರಿ ನಡೆ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದು, ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಉಂಟಾಗಿದೆ. ಗದಗ…

4 hours ago

ಓದುಗರ ಪತ್ರ: ರೇಷ್ಮೆ ನೂಲು ಘಟಕಕ್ಕೆ ಹೊಸ ಯಂತ್ರ ಅಳವಡಿಕೆ ಶ್ಲಾಘನೀಯ

ತಿ. ನರಸೀಪುರ ಪಟ್ಟಣದ ರೇಷ್ಮೆ ನೂಲು ತಯಾರಿಕಾ ಘಟಕಕ್ಕೆ ಹೊಸದಾಗಿ ಎರಡು ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಂಡಿರುವುದು ಘಟಕದ ಅಭಿವೃದ್ಧಿಯ…

4 hours ago