ಜಿಲ್ಲೆಗಳು

ಮಲೆಮಹದೇಶ್ವರ ಹುಲಿ ಯೋಜನೆ ಶೀಘ್ರ ಅನುಮತಿ: ಸಿಎಂ

ಅರಣ್ಯ ಇಲಾಖೆ ಅಧಿಕಾರಿಗಳು ಕ್ಷೇತ್ರಕ್ಕೆ ಹೋಗಲು ಮುಖ್ಯಮಂತ್ರಿ ತಾಕೀತು

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಮಲೈ ಮಹದೇಶ್ವರ ಹುಲಿ ಯೋಜನೆಗೆ ಸದ್ಯವೇ ಅನುಮತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ವನ್ಯಜೀವಿ ಮಂಡಳಿ ಸಭೆಗೆ ತಿಳಿಸಿದರು.

ಬೆಂಗಳೂರಿನಲ್ಲಿ ಗುರುವಾರ ನೆಡದ ವನ್ಯಜೀವಿ ಮಂಡಳಿಯ ೧೬ನೇ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಮಂಡಳಿ ಸದಸ್ಯ ಬಿ.ಆರ್.ಮಲ್ಲೇಶಪ್ಪ ಅವರಿಗೆ ಸಿಎಂ ಅವರು ಈ ಉತ್ತರ ನೀಡಿದರು.

ಮಲೈಮಹದೇಶ್ವರ ಹುಲಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಈಗಾಗಲೇ ಮಂಡಳಿಯೂ ಒಪ್ಪಿಗೆ ನೀಡಿ ರಾಜ್ಯ ಸಚಿವ ಸಂಪುಟವೂ ಅನುಮೋದನೆ ನೀಡಿದೆ. ಆದೇಶ ಮಾತ್ರ ಜಾರಿಯಾಗಬೇಕಾಗಿದೆ ಎಂದು ಮಲ್ಲೇಶಪ್ಪ ಅವರು ಸಿಎಂ ಗಮನಕ್ಕೆ ತಂದರು.

ಈ ಬಗ್ಗೆ ನನಗೆ ಎಲ್ಲವೂ ತಿಳಿದಿದೆ. ನಮ್ಮ ಸಚಿವ ಸೋಮಣ್ಣ ಅವರಿಗೆ ವನ್ಯಜೀವಿಗಳ ಬಗ್ಗೆ ಕಾಳಜಿ ಇರುವುದರಿಂದ ವಿಳಂಬವಾಗುತ್ತಿದೆ. ಅವರಿಗೆ ಕೆಲ ವಿಚಾರ ಅರ್ಥವಾಗಿಲ್ಲ. ಆದಷ್ಟು ಬೇಗನೇ ಈ ಕುರಿತು ಅಧಿಸೂಚನೆ ಹೊರಡಿಸಲಾಗುವುದು. ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆ ದೃಷ್ಟಿಯಿಂದ ಯೋಜನೆ ಜಾರಿ ಮುಖ್ಯ ಎಂದು ಸಿಎಂ ತಿಳಿಸಿದರು.

ಅರಣ್ಯ ಇಲಾಖೆಯ ೪೦ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳು ಬೆಂಗಳೂರಿನಲ್ಲಿದ್ದೀರಿ. ಬರೀ ಕಚೇರಿಯಲ್ಲೇ ಕೂಡದೇ ಕ್ಷೇತ್ರಗಳಿಗೆ ಹೋಗಿ. ಸಮಸ್ಯೆಗಳನ್ನು ಆಲಿಸಿ ಪರಿಹಾರ ಸೂಚಿಸಿ ಎಂದು ಸಲಹೆ ನೀಡಿದರು.

ಗದಗ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ನಡೆಯುತ್ತಿರುವ ಗಣಿಗಾರಿಕೆ ಸ್ಥಗಿತಗೊಳಿಸಿ. ಎಲ್ಲಾ ೩೦ ಕ್ರಷರ್‌ಗಳಿಗೆ ನೊಟೀಸ್ ನೀಡಿ. ಕಪ್ಪತ್ತಗುಡ್ಡದಲ್ಲಿ ಸೂಕ್ಷ್ಮ ಪರಿಸರ ವಲಯ ಆದೇಶವಾಗಿರುವುರಿಂದ ೧೦ ಕಿ.ಮಿ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆಗೆ ಅವಕಾಶವಿಲ್ಲ ಎಂದು ಸೂಚಿಸಿದರು.

ಸಭೆಯಲ್ಲಿ ಅರಣ್ಯ ನಿಗಮದ ಅಧ್ಯಕ್ಷೆ ತಾರಾ ಅನುರಾಧ, ಮಂಡಳಿ ಸದಸ್ಯ ವಿನೋದ್‌ಕುಮಾರ್ ಬಿ. ನಾಯ್ಕ, ಹಿರಿಯ ಅಧಿಕಾರಿಗಳಾದ ಜಾವೇದ್ ಅಖ್ತರ್, ಆರ್.ಕೆ.ಸಿಂಗ್, ವಿಜಯಕುಮಾರ್ ಗೋಗಿ, ಸಂಜಯ್ ಬಿಜ್ಜೂರ್, ಶಾಶ್ವತಿ ಮಿಶ್ರ ಮತ್ತಿತರರು ಹಾಜರಿದ್ದರು.

andolanait

Recent Posts

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

6 hours ago

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

8 hours ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

8 hours ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

8 hours ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

9 hours ago

ಟ್ರಂಪ್‌ ಹೇಳಿದ್ದನ್ನು ಪಾಲಿಸಲು ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು: ರಾಹುಲ್‌ ಗಾಂಧಿ

ಚೆನ್ನೈ: ಇರಾನ್-ಇಸ್ರೇಲ್‌ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…

9 hours ago