ಜಿಲ್ಲೆಗಳು

ಮೈಸೂರು ಗ್ರಾಮಾಂತರ ವಲಯದಲ್ಲಿ ಮತ್ತೆ ಹುಲಿರಾಯ ಪ್ರತ್ಯಕ್ಷ

ಮೈಸೂರು : ಮೈಸೂರಿನ ಹೊರವಲಯದಲ್ಲಿ ಮತ್ತೆ ಹುಲಿ ಪ್ರತ್ಯಕ್ಷವಾಗಿದ್ದು ಅರಣ್ಯಾಧಿಕಾರಿಗಳು ಕೂಡಲೇ ಅಲರ್ಟ್‌ ಆಗಿದ್ದಾರೆ. ಮೈಸೂರು-ನಂಜನಗೂಡು ನಡುವೆ ದಡದಹಳ್ಳಿ ಗ್ರಾಮದಲ್ಲಿ ಮತ್ತೆ ಹುಲಿ ಕಾಣಿಸಿಕೊಂಡಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಮೈಸೂರಿನ ದಡದಹಳ್ಳಿಯ ತೋಟದ ಮನೆಯೊಂದರ ಸಮೀಪ ಹುಲಿ ಕಾಣಿಸಿಕೊಂಡಿದ್ದು, ಅರಣ್ಯಾಧಿಕಾರಿಗಳು, ಚಿರತೆ ಕಾರ್ಯಪಡೆ ಹುಲಿ ಕಾಣಿಸಿಕೊಂಡ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ. 

ಗ್ರಾಮದ ಸುತ್ತಾ ಮುತ್ತಾ ಕಾರ್ಯಾಚರಣೆ ನಡೆಸುತ್ತಿರುವ ಅಧಿಕಾರಿಗಳು ಗ್ರಾಮಸ್ಥರಿಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ.

ಗ್ರಾಮದ ಸುತ್ತ ಹುಲಿ ಚಲನಚಿತ್ರದ ನೆಟ್ವರ್ಕ್‌ ಅಳವಡಿಸಿದ್ದು, ಐಆರ್‌ ಕ್ಯಾಮೆರಾ ಹಾಗೂ ಹುಲಿಯ ಸೆರೆಗೆ ಬೋನು ಇಡಲಾಗಿದೆ. ಹಾಗೆಯೇ ಹುಲಿ ಕಾಣಿಸಿಕೊಂಡಲ್ಲಿ ಸಹಾಯವಾಣಿ 1926ಗೆ ಕರೆ ಮಾಡಿ ಎಂದು ಗ್ರಾಮಸ್ಥರಿಗೆ ಸೂಚನೆ ನೀಡಿದ್ದಾರೆ.

ಹುಲಿ ಬಗ್ಗೆ ಯಾರು ಸುಳ್ಳು ಮಾಹಿತಿಗಹಳನ್ನು ನೀಡದೇ ಹುಲಿ ಸೆರೆಗೆ ಸಹಾಯ ಮಾಡಬೇಕು ಎಂದು ಮೈಸೂರು ಅರಣ್ಯಾಧಿಕಾರಿಗಳು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದಾರೆ.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

18 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

18 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

18 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

18 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

18 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

18 hours ago