ಜಿಲ್ಲೆಗಳು

ಕೊಡಸೋಗೆಯಲ್ಲಿ ಹುಲಿ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ

ಕಾಡಿಗೆ ಓಡಿಸಿರುವುದಾಗಿ ಅರಣ್ಯ ಇಲಾಖೆ ಸ್ಪಷ್ಟನೆ; ಜನರಲ್ಲಿ ಮಾಸದ ಭೀತಿ

ಗುಂಡ್ಲುಪೇಟೆ: ತಾಲ್ಲೂಕಿನ ಕೊಡಸೋಗೆ, ಸೋಮನಪುರ ಸಮೀಪ ಜಮೀನಿನಲ್ಲಿ ಹುಲಿ ಹಾಗೂ ಮರಿ ಬೀಡುಬಿಟ್ಟಿರುವುದನ್ನು ಕಂಡು ಆತಂಕಗೊಂಡಿರುವ ರೈತರು ಕೂಡಲೇ ಹುಲಿ ಸೆರೆಹಿಡಿಯುವಂತೆ ಒತ್ತಾಯಿಸಿದ್ದಾರೆ.

ಸೋಮವಾರ ಬೆಳಿಗ್ಗೆ ಕೊಡಸೋಗೆ ಗ್ರಾಮದ ರವಿ ಎಂಬವರು ತಮ್ಮ ಪತ್ನಿ ಹಾಗೂ ಮಗನ ಜತೆಗೂಡಿ ತಮ್ಮ ಜಮೀನಿಗೆ ತೆರಳಿದ್ದಾಗ ಮುಸುಕಿನ ಜೋಳದ ನಡುವೆ ಕಾಡುಹಂದಿಯ ಕಳೇಬರ ಕಣ್ಣಿಗೆ ಬಿದ್ದಿದೆ. ಹತ್ತಿರ ಹೋಗಿ ಪರಿಶೀಲಿಸಿದಾಗ ಯಾವುದೋ ಪ್ರಾಣಿ ಅರ್ಧ ದೇಹ ತಿಂದಿರುವುದು ಖಚಿತವಾಗುತ್ತಿದ್ದಂತೆ ಅಲ್ಲಿಯೇ ಇದ್ದ ಹುಲಿ ಜೋರಾಗಿ ಘರ್ಜಿಸಿದೆ. ಕೂಡಲೇ ದಿಕ್ಕಾಪಾಲಾಗಿ ಓಡಿ ಗ್ರಾಮದವರಿಗೆ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ ರೈತರು ಅಕ್ಕಪಕ್ಕದ ಮರಗಳನ್ನು ಹತ್ತಿ ಜೋಳದ ಹೊಲದಲ್ಲಿ ತಾಯಿ ಹಾಗೂ ಒಂದು ಮರಿ ಹುಲಿ ಇರುವುದನ್ನು ಕಂಡು ಖಚಿತವಾದ ಕೂಡಲೇ ಅರಣ್ಯ ಇಲಾಖೆಗೆ ವಿಷಯ ತಿಳಿಸಿದ್ದಾರೆ. ಮಧ್ಯಾಹ್ನ ಸುಮಾರು ೧ ಗಂಟೆ ವೇಳೆಗೆ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾದರು. ಕಳೆದ ಮೂರು ವರ್ಷಗಳಿಂದ ಹುಲಿ ಈ ಪ್ರದೇಶದಲ್ಲಿಯೇ ಸುತ್ತಾಡುತ್ತಾ ಜಾನುವಾರುಗಳನ್ನು ಕೊಲ್ಲುತ್ತಿದ್ದರೂ ಅದರ ಸೆರೆಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬೆಳಿಗ್ಗೆಯೇ ಮಾಹಿತಿ ನೀಡಿದರೂ ಇನ್ನೂ ಸ್ಥಳಕ್ಕೆ ಹುಲಿ ಯೋಜನೆಯ ನಿರ್ದೇಶಕರು ಆಗಮಿಸಿಲ್ಲ. ಕೂಡಲೇ ಹುಲಿ ಸೆರೆಹಿಡಿಯಲು ಕ್ರಮಕೈಗೊಳ್ಳಿ. ಇಲ್ಲದಿದ್ದರೆ ನಾವೇ ಓಡಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಸ್ಥಳಕ್ಕೆ ಆಗಮಿಸಿದ ಸರ್ಕಲ್ ಇನ್‌ಸ್ಪೆಕ್ಟರ್ ಕಿರಣ್ ಕುಮಾರ್, ಎಸ್‌ಐ ಮಂಜುನಾಥ ನಾಯಕ್ ಉದ್ರಿಕ್ತ ಜನರನ್ನು ನಿಯಂತ್ರಿಸಿ ಜಮೀನಿನಿಂದ ದೂರಕ್ಕೆ ಕಳುಹಿಸಿದರು.

ಗುಂಡ್ಲುಪೇಟೆ ಬಫರ್ ವಲಯದ ಆರ್‌ಎಫ್‌ಒ ಎನ್.ಪಿ.ನವೀನ್ ಕುಮಾರ್ ಮಾತನಾಡಿ, ಈ ಹುಲಿ ಸೆರೆಹಿಡಿಯಲು ಅನುಮತಿ ಕೊಡುವಂತೆ ಬಂಡೀಪುರ ಹುಲಿ ಯೋಜನೆಯ ನಿರ್ದೇಶಕರಿಗೆ ಹತ್ತು ದಿನಗಳ ಹಿಂದೆಯೇ ಪತ್ರ ಬರೆಯಲಾಗಿದೆ. ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ ಹಾಗೂ ಸರ್ಕಾರಗಳ ಅನುಮತಿ ದೊರೆತ ಕೂಡಲೇ ಸೆರೆ ಕಾಂರ್ಾಚರಣೆ ಕೈಗೊಳ್ಳಲಾಗುವುದು ಎಂದರು.

 ಜಮೀನಿನಲ್ಲಿರುವ ಹುಲಿ ಸೆರೆ ಹಿಡಿಯಲು ಆಗಲ್ಲ ಎನ್ನುವ ಅರಣ್ಯ ಅಧಿಕಾರಿಗಳು ರೈತರ ಮೇಲೆ ದಾಳಿ ಮಾಡಿ ಕೊಂದು ಹಾಕಿದರೆ ಮತ್ತೆ ಅವರ ಪ್ರಾಣ ತಂದು ಕೊಡಲು ಸಾಧ್ಯವೇ? ಕೂಡಲೆ ಹುಲಿ ಸೆರೆ ಹಿಡಿದು ಕಾಡಿಗೆ ಬಿಡಬೇಕು. -ರಮೇಶ್ ಕೊಡಸೋಗೆ, ಯುವ ಮುಖಂಡ

 ಪಟಾಕಿ ಹೊಡೆದುಕೊಂಡು ಜೀಪ್‌ಗಳ ಮುಲಕ ಸೈರನ್ ಹಾಕಿ ಕಾಡಿಗೆ ಹುಲಿಯನ್ನು ಅಟ್ಟಲಾಗಿದೆ. ಈ ಬಗ್ಗೆ ಖಚಿತತೆಗಾಗಿ ಕೂಂಬಿಂಗ್ ಮಾಡಲಾಗುತ್ತಿದೆ. ಎಲ್ಲಿಯೂ ಹುಲಿ ಕಾಣಿಸಿಕೊಂಡಿಲ್ಲ. -ನವೀನ್ ಕುಮಾರ್, ಆರ್‌ಎಫ್‌ಒ, ಬಫರ್ ಜೋನ್ ವಲಯ, ಗುಂಡ್ಲುಪೇಟೆ

 

 

andolana

Recent Posts

ನಾಳೆ ರಾಜ್ಯ ಬಜೆಟ್:‌ ಬಸ್‌ ನಿಲ್ದಾಣಗಳಲ್ಲಿ ನೇರ ಪ್ರಸಾರ

ಬೆಂಗಳೂರು: ನಾಳೆ ರಾಜ್ಯ ಬಜೆಟ್‌ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್‌ ಮಂಡನೆಯ…

11 hours ago

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ: ಬೈಕ್ ಸವಾರ ಸಾವು

ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…

12 hours ago

ಹನೂರು: ವಿಶ್ವ ವನ್ಯಜೀವಿ ದಿನ ಕಾರ್ಯಕ್ರಮ ಆಯೋಜನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…

12 hours ago

ಸಚಿವ ದಿನೇಶ್‌ ಗುಂಡೂರಾವ್‌ಗೆ ಮಹತ್ವದ ಜವಾಬ್ದಾರಿ ಕೊಟ್ಟ ಎಐಸಿಸಿ: ಏನದು ಗೊತ್ತಾ?

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…

12 hours ago

ಮಂಡ್ಯ: ಕೃಷಿ ಯಂತ್ರೋಪಕರಣದಿಂದ ಆಧುನಿಕ ಕೃಷಿಯತ್ತ ರೈತರು: ಡಾ. ಕೆ.ಸಿ.ನಾರಾಯಣಸ್ವಾಮಿ

ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…

12 hours ago

ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಲ್‌ಇಡಿ ದೀಪ ಅಳವಡಿಸಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್‌ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…

12 hours ago