ಹೆಚ್. ಡಿ ಕೋಟೆ : ತಾಲ್ಲೂಕಿನ ತಾರಕ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಕಾಣಿಸಿಕೊಂಡು ಎರಡು ಮೂರು ಹಸುಗಳನ್ನು ತಿಂದು ಹಾಕಿದ್ದು ಗ್ರಾಮಸ್ಥರಲ್ಲಿಯೂ ಭಯಭೀತಿಯನ್ನು ಉಂಟುಮಾಡಿದೆ. ಹುಲಿಯನ್ನು ಸೆರೆ ಹಿಡಿಯಲು ಎಸ್ ಟಿ ಪಿ ಎಫ್ ಸಿಬ್ಬಂದಿಗಳು ಕಾರ್ಯಾಚರಣೆ ತೊಡಗಿದ್ದಾರೆ
ಹುಲಿಯ ಉಪಟಳದ ಬಗ್ಗೆ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಅಧಿಕಾರಗಳು ಸ್ಥಳವನ್ನು ಪರಿಶೀಲನೆ ಮಾಡಿ ಹುಲಿ ಇರುವುದನ್ನು ಖಚಿತಪಡಿಸಿಕೊಂಡು ನಂತರ ಮತ್ತೆ ಗೂಡು ಆನೆ ಶಿಬಿರದಿಂದ ಅಶ್ವತ್ಥಾಮ ಮತ್ತು ಬಲರಾಮ ಆನೆಗಳನ್ನು ಕಾರ್ಯಚರಣೆಗೆ ತೊಡಗಿಸಿಕೊಂಡಿದ್ದು ಅಂತರ ಸಂತೆ ವಲಯದ ಸಿಬ್ಬಂದಿಗಳು ಮೇಟಿಕುಪ್ಪೆ ವಲಯದ ಸಿಬ್ಬಂದಿಗಳು ಸೇರಿದಂತೆ ಎಸ್ ಟಿ ಪಿ ಎಫ್ ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆಯನ್ನು ಕೈಗೊಂಡು ಹುಲಿಯನ್ನು ಸೆರೆ ಹಿಡಿಯಲು ನಿರತರಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಅಂತರಸಂತೆ ವಲಯದ ಅರಣ್ಯ ಅಧಿಕಾರಿ ಸಿದ್ದರಾಜು, ಡಿ ಆರ್ ಎಫ್ ಓ ಆಂತೋನಿ, ಮಂಜುನಾಥ್ ಆರಾಧ್ಯ, ಚಂದನ್ ಮತ್ತು ಅರಣ್ಯ ಸಿಬ್ಬಂದಿಗಳು ಹಾಜರಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…