ಜಿಲ್ಲೆಗಳು

ಗ್ರಾಮಸ್ಥರನ್ನು ನಿದ್ದೆಗೆಡಿಸುತ್ತಿರುವ ಹುಲಿ ಸೆರೆಗೆ ಕಾರ್ಯಾಚರಣೆ

ಹೆಚ್. ಡಿ ಕೋಟೆ : ತಾಲ್ಲೂಕಿನ ತಾರಕ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಕಾಣಿಸಿಕೊಂಡು ಎರಡು ಮೂರು ಹಸುಗಳನ್ನು ತಿಂದು ಹಾಕಿದ್ದು ಗ್ರಾಮಸ್ಥರಲ್ಲಿಯೂ ಭಯಭೀತಿಯನ್ನು ಉಂಟುಮಾಡಿದೆ. ಹುಲಿಯನ್ನು ಸೆರೆ ಹಿಡಿಯಲು ಎಸ್ ಟಿ ಪಿ ಎಫ್  ಸಿಬ್ಬಂದಿಗಳು ಕಾರ್ಯಾಚರಣೆ ತೊಡಗಿದ್ದಾರೆ

ಹುಲಿಯ ಉಪಟಳದ ಬಗ್ಗೆ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಅಧಿಕಾರಗಳು  ಸ್ಥಳವನ್ನು ಪರಿಶೀಲನೆ ಮಾಡಿ ಹುಲಿ ಇರುವುದನ್ನು ಖಚಿತಪಡಿಸಿಕೊಂಡು ನಂತರ ಮತ್ತೆ ಗೂಡು ಆನೆ ಶಿಬಿರದಿಂದ ಅಶ್ವತ್ಥಾಮ ಮತ್ತು ಬಲರಾಮ ಆನೆಗಳನ್ನು ಕಾರ್ಯಚರಣೆಗೆ ತೊಡಗಿಸಿಕೊಂಡಿದ್ದು ಅಂತರ ಸಂತೆ ವಲಯದ ಸಿಬ್ಬಂದಿಗಳು ಮೇಟಿಕುಪ್ಪೆ ವಲಯದ ಸಿಬ್ಬಂದಿಗಳು ಸೇರಿದಂತೆ ಎಸ್ ಟಿ ಪಿ ಎಫ್ ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆಯನ್ನು ಕೈಗೊಂಡು ಹುಲಿಯನ್ನು ಸೆರೆ ಹಿಡಿಯಲು ನಿರತರಾಗಿದ್ದಾರೆ.

ಕಾರ್ಯಾಚರಣೆಯಲ್ಲಿ ಅಂತರಸಂತೆ ವಲಯದ ಅರಣ್ಯ ಅಧಿಕಾರಿ ಸಿದ್ದರಾಜು, ಡಿ ಆರ್ ಎಫ್ ಓ ಆಂತೋನಿ, ಮಂಜುನಾಥ್ ಆರಾಧ್ಯ, ಚಂದನ್ ಮತ್ತು ಅರಣ್ಯ ಸಿಬ್ಬಂದಿಗಳು ಹಾಜರಿದ್ದರು.

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

5 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

7 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

9 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

9 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

10 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

11 hours ago