ಹೆಚ್. ಡಿ ಕೋಟೆ : ತಾಲ್ಲೂಕಿನ ತಾರಕ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಕಾಣಿಸಿಕೊಂಡು ಎರಡು ಮೂರು ಹಸುಗಳನ್ನು ತಿಂದು ಹಾಕಿದ್ದು ಗ್ರಾಮಸ್ಥರಲ್ಲಿಯೂ ಭಯಭೀತಿಯನ್ನು ಉಂಟುಮಾಡಿದೆ. ಹುಲಿಯನ್ನು ಸೆರೆ ಹಿಡಿಯಲು ಎಸ್ ಟಿ ಪಿ ಎಫ್ ಸಿಬ್ಬಂದಿಗಳು ಕಾರ್ಯಾಚರಣೆ ತೊಡಗಿದ್ದಾರೆ
ಹುಲಿಯ ಉಪಟಳದ ಬಗ್ಗೆ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಅಧಿಕಾರಗಳು ಸ್ಥಳವನ್ನು ಪರಿಶೀಲನೆ ಮಾಡಿ ಹುಲಿ ಇರುವುದನ್ನು ಖಚಿತಪಡಿಸಿಕೊಂಡು ನಂತರ ಮತ್ತೆ ಗೂಡು ಆನೆ ಶಿಬಿರದಿಂದ ಅಶ್ವತ್ಥಾಮ ಮತ್ತು ಬಲರಾಮ ಆನೆಗಳನ್ನು ಕಾರ್ಯಚರಣೆಗೆ ತೊಡಗಿಸಿಕೊಂಡಿದ್ದು ಅಂತರ ಸಂತೆ ವಲಯದ ಸಿಬ್ಬಂದಿಗಳು ಮೇಟಿಕುಪ್ಪೆ ವಲಯದ ಸಿಬ್ಬಂದಿಗಳು ಸೇರಿದಂತೆ ಎಸ್ ಟಿ ಪಿ ಎಫ್ ಸಿಬ್ಬಂದಿಗಳೊಂದಿಗೆ ಕಾರ್ಯಾಚರಣೆಯನ್ನು ಕೈಗೊಂಡು ಹುಲಿಯನ್ನು ಸೆರೆ ಹಿಡಿಯಲು ನಿರತರಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಅಂತರಸಂತೆ ವಲಯದ ಅರಣ್ಯ ಅಧಿಕಾರಿ ಸಿದ್ದರಾಜು, ಡಿ ಆರ್ ಎಫ್ ಓ ಆಂತೋನಿ, ಮಂಜುನಾಥ್ ಆರಾಧ್ಯ, ಚಂದನ್ ಮತ್ತು ಅರಣ್ಯ ಸಿಬ್ಬಂದಿಗಳು ಹಾಜರಿದ್ದರು.
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…
ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…
ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…
ಭೇರ್ಯ ಮಹೇಶ್ ಭೇರ್ಯ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…