ಮೈಸೂರು: ನಾನು ರಂಗಾಯಣದ ನಿರ್ದೇಶಕನಾಗಿದ್ದ ಸಂದರ್ಭದಲ್ಲಿ ಗಿರೀಶ್ ಕಾರ್ನಾಡ್ ಅವರ ಟಿಪ್ಪು ಕಂಡ ಕನಸುಗಳು ನಾಟಕ ಪ್ರದರ್ಶನಕ್ಕೆ ಆರು ಲಕ್ಷ ಅನುದಾನ ಬಿಡುಗಡೆಯಾಗಿತ್ತು. ಆದರೆ, ಈಗೀನ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ೧೫ ಲಕ್ಷ ರೂ.ಅನುದಾನ ಬಿಡುಗಡೆಯಾಗಿತ್ತು ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ರಂಗಾಯಣದ ಮಾಜಿ ನಿರ್ದೇಶಕ ಸಿ.ಬಸವಲಿಂಗಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಮಾಧ್ಯಮಗಳ ಪ್ರಶ್ನೆಗೆ ಪತ್ರಿಕ್ರಿಯಿಸಿದ ಅವರು, ಟಿಪ್ಪು ಕಂಡ ನಿಜ ಕನಸುಗಳು ನಾಟಕದ ಮೂಲಕ ಚಾರಿತ್ರ್ಯ ಹರಣವಾಗಲಿದೆ. ಟಿಪ್ಪು ಕಂಡ ಕನಸುಗಳೆಂದು ಗಿರೀಶ್ ಕಾರ್ನಾಡ್ ಹತ್ತಾರು ವರ್ಷಗಳಿಂದೆಯೇ ಕೃತಿಯೊಂದನ್ನು ಹೊರ ರಚಿಸಿದ್ದಾರೆ. ಆದರೆ ಇವರು ಟಿಪ್ತ್ಯ್ಪು ಕಂಡ ನಿಜ ಕನಸುಗಳು ಎಂದು ಮಾಡಿಕೊಂಡಿದ್ದಾರೆ. ನಾಟಕದ ಹೆಸರನ್ನು ಕೂಡ ಸರಿಯಾಗಿ ಬದಲಾಯಿಸುವ ತಾಕತ್ತು ಸಹ ಇಲ್ಲ ಎಂದು ಲೇವಡಿ ಮಾಡಿದರು.
ನಾಟಕದಲ್ಲಿ ಸತ್ಯ ಇರಬೇಕು ಹೊರತು ರಾಜಕೀಯ ಅಜೆಂಡಗಳಲ್ಲ. ಜನರಿಗೆ ದ್ವೇಷ ಬಿತ್ತುವುದು ನಾಟಕದ ಉದ್ದೇಶವಲ್ಲ ನಾಟಕ ಮಾಡಿ ಸತ್ಯ ಹೇಳಿಲಿ ಆಗ ಯಾರು ವಿರೋಧಿಸುವುದಿಲ್ಲ. ಎಸ್.ಎಲ್.ಭೈರಪ್ಪ ಅವರ ಪರ್ವ ಮಾಡಿದಾಗ ಯಾರೊಬ್ಬರು ವಿರೋಧಿಸಲಿಲ್ಲ. ನಾನು ಮೊದಲು ಪ್ರದರ್ಶನಕ್ಕೆ ಬಂದು ನಾಟಕ ನೋಡಿದೆ. ಆದರೆ, ಟಿಪ್ಪು ನಿಜ ಕನಸುಗಳು ಎಂಬ ನಾಟಕದ ಸುಳ್ಳನ್ನು ಕೇಳಿ ಗಾಬರಿ ಆಂ. ಸಾವರ್ಕರ್ ಕುರಿತು ನಾಟಕ ಮಾಡುವುದಿದ್ದರೇ ಮಾಡಿ, ಆದ್ರೆ ಸತ್ಯ ಹೇಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಿಪ್ತ್ಯ್ಪು ಮತಾಂತರ ಮಾಡಿದ, ಕೊಂದ ಎಂದು ಹೇಳುತ್ತಾರೆ ಅದೆಲ್ಲ ಸುಳ್ಳು. ಸತ್ಯ ಹೇಳಬೇಕು. ಟಿಪ್ಪು ಕೊಡಗಿನಲ್ಲಿ ಮತಾಂತರ ಮಾಡಿದ ಎಂದು ಬಿಂಬಿಸುತ್ತಿದ್ದಾರೆ. ಒಂದು ಟಿಪ್ಪು ಮತಾಂತರ ಮಾಡಿz ಆದರೇ ಕೊಡಗಿನಲ್ಲಿ ಎಲ್ಲರು ಮುಸ್ಲಿಂರೇ ಆಗಬೇಕಿತ್ತಲ್ಲ? ಎಂದು ಪ್ರಶ್ನಿಸಿದರು.
ಈಗ ರಂಗಾಯಣದ ರಾಜಕೀಯ ಅಡ್ಡವಾಗಿದೆ. ಗಿರೀಶ್ ಕಾರ್ನಾಡ್ ಅವರನ್ನು ಅರ್ಬನ್ ನಕ್ಸಲ್ ಎಂದು ಟೀಕೆ ಮಾಡುತ್ತಾರೆ. ಅವರು ಅರ್ಬನ್ ನಕ್ಸಲ್ ಆಗಿದ್ದರೆ ಪದ್ಮಭೂಷಣ ಪ್ರಶಸ್ತಿ ಯಾಕೇ ನೀಡುತ್ತಿದ್ದರು?. ಗಾಂಧೀ ಕೊಂದವರೀಗ ದೇಶ ಪ್ರೇಮಿಗಳಾಗಿದ್ದಾರೆ. ದೇಶಕ್ಕಾಗಿ ಹುತಾತ್ಮರಾದವರನ್ನು ದೇಶದ್ರೋಹಿಗಳೆಂದು ಬಿಂಬಿಸಲಾಗುತ್ತಿದೆ. ಇವರು ದೇಶ ಪ್ರೇಮವನ್ನು ಗುತ್ತಿಗೆ ಪಡೆದುಕೊಂಡಿದ್ದಾರ? ಪ್ರಸ್ತುತ ರಾಜಕಾರಣವನ್ನು ಧರ್ಮಕ್ಕೆ ಬೆರಸಲಾಗಿ ಈ ಸಮಸ್ಯೆಗಳಿಗೆ ಕಾರಣವಾಗಿದೆ ಎಂದು ಹೇಳಿದರು.
ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…
ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್ಗಳು ?…
ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…
ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…
ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…