ಜಿಲ್ಲೆಗಳು

ಟಿಪ್ಪು ನಿಜ ಕನಸುಗಳು ನಾಟಕದ ಮೂಲಕ ಚಾರಿತ್ರ್ಯ ಹರಣವಾಗಲಿದೆ : ಸಿ.ಬಸವಲಿಂಗಯ್ಯ ಆಕ್ರೋಶ

ಮೈಸೂರು: ನಾನು ರಂಗಾಯಣದ ನಿರ್ದೇಶಕನಾಗಿದ್ದ ಸಂದರ್ಭದಲ್ಲಿ ಗಿರೀಶ್ ಕಾರ್ನಾಡ್ ಅವರ ಟಿಪ್ಪು ಕಂಡ ಕನಸುಗಳು ನಾಟಕ ಪ್ರದರ್ಶನಕ್ಕೆ ಆರು ಲಕ್ಷ ಅನುದಾನ ಬಿಡುಗಡೆಯಾಗಿತ್ತು. ಆದರೆ, ಈಗೀನ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ೧೫ ಲಕ್ಷ ರೂ.ಅನುದಾನ ಬಿಡುಗಡೆಯಾಗಿತ್ತು ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ರಂಗಾಯಣದ ಮಾಜಿ ನಿರ್ದೇಶಕ ಸಿ.ಬಸವಲಿಂಗಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಮಾಧ್ಯಮಗಳ ಪ್ರಶ್ನೆಗೆ ಪತ್ರಿಕ್ರಿಯಿಸಿದ ಅವರು, ಟಿಪ್ಪು ಕಂಡ ನಿಜ ಕನಸುಗಳು ನಾಟಕದ ಮೂಲಕ ಚಾರಿತ್ರ್ಯ ಹರಣವಾಗಲಿದೆ. ಟಿಪ್ಪು ಕಂಡ ಕನಸುಗಳೆಂದು ಗಿರೀಶ್ ಕಾರ್ನಾಡ್ ಹತ್ತಾರು ವರ್ಷಗಳಿಂದೆಯೇ ಕೃತಿಯೊಂದನ್ನು ಹೊರ ರಚಿಸಿದ್ದಾರೆ. ಆದರೆ ಇವರು ಟಿಪ್ತ್ಯ್ಪು ಕಂಡ ನಿಜ ಕನಸುಗಳು ಎಂದು ಮಾಡಿಕೊಂಡಿದ್ದಾರೆ. ನಾಟಕದ ಹೆಸರನ್ನು ಕೂಡ ಸರಿಯಾಗಿ ಬದಲಾಯಿಸುವ ತಾಕತ್ತು ಸಹ ಇಲ್ಲ ಎಂದು ಲೇವಡಿ ಮಾಡಿದರು.

ನಾಟಕದಲ್ಲಿ ಸತ್ಯ ಇರಬೇಕು ಹೊರತು ರಾಜಕೀಯ ಅಜೆಂಡಗಳಲ್ಲ. ಜನರಿಗೆ ದ್ವೇಷ ಬಿತ್ತುವುದು ನಾಟಕದ ಉದ್ದೇಶವಲ್ಲ ನಾಟಕ ಮಾಡಿ ಸತ್ಯ ಹೇಳಿಲಿ ಆಗ ಯಾರು ವಿರೋಧಿಸುವುದಿಲ್ಲ. ಎಸ್.ಎಲ್.ಭೈರಪ್ಪ ಅವರ ಪರ್ವ ಮಾಡಿದಾಗ ಯಾರೊಬ್ಬರು ವಿರೋಧಿಸಲಿಲ್ಲ. ನಾನು ಮೊದಲು ಪ್ರದರ್ಶನಕ್ಕೆ ಬಂದು ನಾಟಕ ನೋಡಿದೆ. ಆದರೆ, ಟಿಪ್ಪು ನಿಜ ಕನಸುಗಳು ಎಂಬ ನಾಟಕದ ಸುಳ್ಳನ್ನು ಕೇಳಿ ಗಾಬರಿ ಆಂ. ಸಾವರ್ಕರ್ ಕುರಿತು ನಾಟಕ ಮಾಡುವುದಿದ್ದರೇ ಮಾಡಿ, ಆದ್ರೆ ಸತ್ಯ ಹೇಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಿಪ್ತ್ಯ್ಪು ಮತಾಂತರ ಮಾಡಿದ, ಕೊಂದ ಎಂದು ಹೇಳುತ್ತಾರೆ ಅದೆಲ್ಲ ಸುಳ್ಳು. ಸತ್ಯ ಹೇಳಬೇಕು. ಟಿಪ್ಪು ಕೊಡಗಿನಲ್ಲಿ ಮತಾಂತರ ಮಾಡಿದ ಎಂದು ಬಿಂಬಿಸುತ್ತಿದ್ದಾರೆ. ಒಂದು ಟಿಪ್ಪು ಮತಾಂತರ ಮಾಡಿz ಆದರೇ ಕೊಡಗಿನಲ್ಲಿ ಎಲ್ಲರು ಮುಸ್ಲಿಂರೇ ಆಗಬೇಕಿತ್ತಲ್ಲ? ಎಂದು ಪ್ರಶ್ನಿಸಿದರು.

ಈಗ ರಂಗಾಯಣದ ರಾಜಕೀಯ ಅಡ್ಡವಾಗಿದೆ. ಗಿರೀಶ್ ಕಾರ್ನಾಡ್ ಅವರನ್ನು ಅರ್ಬನ್ ನಕ್ಸಲ್ ಎಂದು ಟೀಕೆ ಮಾಡುತ್ತಾರೆ. ಅವರು ಅರ್ಬನ್ ನಕ್ಸಲ್ ಆಗಿದ್ದರೆ ಪದ್ಮಭೂಷಣ ಪ್ರಶಸ್ತಿ ಯಾಕೇ ನೀಡುತ್ತಿದ್ದರು?. ಗಾಂಧೀ ಕೊಂದವರೀಗ ದೇಶ ಪ್ರೇಮಿಗಳಾಗಿದ್ದಾರೆ. ದೇಶಕ್ಕಾಗಿ ಹುತಾತ್ಮರಾದವರನ್ನು ದೇಶದ್ರೋಹಿಗಳೆಂದು ಬಿಂಬಿಸಲಾಗುತ್ತಿದೆ. ಇವರು ದೇಶ ಪ್ರೇಮವನ್ನು ಗುತ್ತಿಗೆ ಪಡೆದುಕೊಂಡಿದ್ದಾರ? ಪ್ರಸ್ತುತ ರಾಜಕಾರಣವನ್ನು ಧರ್ಮಕ್ಕೆ ಬೆರಸಲಾಗಿ ಈ ಸಮಸ್ಯೆಗಳಿಗೆ ಕಾರಣವಾಗಿದೆ ಎಂದು ಹೇಳಿದರು.

andolanait

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

4 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

6 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

6 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

7 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

8 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

9 hours ago