ಜಿಲ್ಲೆಗಳು

ಟಿಪ್ಪು ಎಕ್ಸ್‌ಪ್ರೆಸ್‌ ಇನ್ನು ಒಡೆಯರ್ ಎಕ್ಸ್‌ಪ್ರೆಸ್‌

ಬೆಂಗಳೂರು: ಟಿಪ್ಪು ಎಕ್ಸ್ ಪ್ರೆಸ್ ಮತ್ತು ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರುಗಳನ್ನು ರೈಲ್ವೆ ಇಲಾಖೆ ಬದಲಾವಣೆ ಮಾಡಿದೆ.

ಮೈಸೂರು -ತಾಳಗುಪ್ಪ ನಡುವೆ ಸಂಚರಿಸುವ ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿಗೆ ಇನ್ನು ಮುಂದೆ ಕುವೆಂಪು ಎಕ್ಸ್ ಪ್ರೆಸ್ ರೈಲು ಎಂದು ಬದಲಾವಣೆ ಮಾಡಲಾಗಿದೆ.

ಈ ಸಂಬಂಧ ಕೇಂದ್ರ ರೈಲ್ವೆ ಮಂಡಳಿ ಅದೇಶವನ್ನು ಹೊರಡಿಸಿದೆ.  ಮೈಸೂರು ತಾಳಗುಂದ ಎಕ್ಸ್ಪ್ರೆಸ್ ರೈಲಿಗೆ ಕುವೆಂಪು ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡಿರುವುದಾಗಿ  ರೈಲ್ವೆ ಮಂಡಳಿಯ ಉಪನಿರ್ದೇಶಕ ರಾಜೇಶ್ ಕುಮಾರ್ ಅವರು ನೈರುತ್ಯ ರೈಲ್ವೆ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.

 

ರೈಲ್ವೆ ಸಚಿವಾಲಯ ಆದೇಶ ಪತ್ರವನ್ನು ತಮ್ಮ ಟ್ವೀಟರ್ ನಲ್ಲಿ ಸಂಸದ ಪ್ರತಾಪ್ ಸಿಂಹ ರವರು ಹಂಚಿಕೊಂಡು ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು ಒಡೆಯರ್ ಎಕ್ಸ್ಪ್ರೆಸ್ ನಿಮಗೆ ಸೇವೆ ಒದಗಿಸಲಿದೆ. ಜೊತೆಗೆ ಮೈಸೂರು ತಾಳಗುಪ್ಪ ಬದಲು ಕುವೆಂಪು ಎಕ್ಸ್ಪ್ರೆಸ್ ಆಗಿ ಬದಲಾಗಿದೆ ಇದಕ್ಕೆ ಕಾರಣರಾದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಸಚಿವ ಪ್ರಹ್ಲಾದ್ ಜೋಶಿ ಹಾಗೂ ಕುವೆಂಪು ಹೆಸರು ಸೂಚಿಸಿದ ಡಿ.ಪಿ ಸತೀಶ್ ಅವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

andolanait

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

4 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

7 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

7 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

7 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

7 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

7 hours ago