ಬೆಂಗಳೂರು: ಟಿಪ್ಪು ಎಕ್ಸ್ ಪ್ರೆಸ್ ಮತ್ತು ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರುಗಳನ್ನು ರೈಲ್ವೆ ಇಲಾಖೆ ಬದಲಾವಣೆ ಮಾಡಿದೆ.
ಮೈಸೂರು -ತಾಳಗುಪ್ಪ ನಡುವೆ ಸಂಚರಿಸುವ ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿಗೆ ಇನ್ನು ಮುಂದೆ ಕುವೆಂಪು ಎಕ್ಸ್ ಪ್ರೆಸ್ ರೈಲು ಎಂದು ಬದಲಾವಣೆ ಮಾಡಲಾಗಿದೆ.
ಈ ಸಂಬಂಧ ಕೇಂದ್ರ ರೈಲ್ವೆ ಮಂಡಳಿ ಅದೇಶವನ್ನು ಹೊರಡಿಸಿದೆ. ಮೈಸೂರು ತಾಳಗುಂದ ಎಕ್ಸ್ಪ್ರೆಸ್ ರೈಲಿಗೆ ಕುವೆಂಪು ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡಿರುವುದಾಗಿ ರೈಲ್ವೆ ಮಂಡಳಿಯ ಉಪನಿರ್ದೇಶಕ ರಾಜೇಶ್ ಕುಮಾರ್ ಅವರು ನೈರುತ್ಯ ರೈಲ್ವೆ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.
ರೈಲ್ವೆ ಸಚಿವಾಲಯ ಆದೇಶ ಪತ್ರವನ್ನು ತಮ್ಮ ಟ್ವೀಟರ್ ನಲ್ಲಿ ಸಂಸದ ಪ್ರತಾಪ್ ಸಿಂಹ ರವರು ಹಂಚಿಕೊಂಡು ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು ಒಡೆಯರ್ ಎಕ್ಸ್ಪ್ರೆಸ್ ನಿಮಗೆ ಸೇವೆ ಒದಗಿಸಲಿದೆ. ಜೊತೆಗೆ ಮೈಸೂರು ತಾಳಗುಪ್ಪ ಬದಲು ಕುವೆಂಪು ಎಕ್ಸ್ಪ್ರೆಸ್ ಆಗಿ ಬದಲಾಗಿದೆ ಇದಕ್ಕೆ ಕಾರಣರಾದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಸಚಿವ ಪ್ರಹ್ಲಾದ್ ಜೋಶಿ ಹಾಗೂ ಕುವೆಂಪು ಹೆಸರು ಸೂಚಿಸಿದ ಡಿ.ಪಿ ಸತೀಶ್ ಅವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿರುವ ಖಾಸಗಿ ಹೋಟೆಲ್ಗಳಲ್ಲಿ ಕಾಫಿ,ತಿಂಡಿ, ಹಣ್ಣಿನ ಪಾನೀಯ ದರ ದುಬಾರಿಯಾಗಿದ್ದು, ಉನ್ನತ ಶಿಕ್ಷಣ ವ್ಯಾಸಂಗಕ್ಕಾಗಿ ಬರುವ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದು, ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಉಂಟಾಗಿದೆ. ಗದಗ…
ತಿ. ನರಸೀಪುರ ಪಟ್ಟಣದ ರೇಷ್ಮೆ ನೂಲು ತಯಾರಿಕಾ ಘಟಕಕ್ಕೆ ಹೊಸದಾಗಿ ಎರಡು ಯಂತ್ರಗಳನ್ನು ಅಳವಡಿಸಲು ಕ್ರಮ ಕೈಗೊಂಡಿರುವುದು ಘಟಕದ ಅಭಿವೃದ್ಧಿಯ…
ನಂಜನಗೂಡಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಸ್ಥಾನದ ಪಟ್ಟದ ಆನೆ ಗೌರಿಯನ್ನು ಕಾಲಿನ ಗಾಯ ಹಾಗೂ ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ೨೦೧೭ರಲ್ಲಿ ಬೆಂಗಳೂರಿನ…
ಎಚ್.ಎಂ.ನಟರಾಜು ಹಾನವಾಡಿ ಕಾವ್ಯ-ಕಲೆಯ ಅನುಸಂಧಾನದ ದಾಖಲೆಯನ್ನು ಸಂಪಾದಿಸಿ ಗ್ರಂಥರೂಪಕ್ಕಿಳಿದ ಡಾ.ಕೆ.ಸಿ.ಶಿವಾರೆಡ್ಡಿ ಸಾಹಿತ್ಯ ಮತ್ತು ಚಿತ್ರಕಲೆಯ ನಡುವಿನ ಸಂಬಂಧ ಬುದ್ಧಿ ಭಾವಗಳ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಭಾನುವಾರ ವಿಚಾರಸಂಕಿರಣವೊಂದನ್ನು ಹಮ್ಮಿಕೊಂಡಿದೆ. ಕನ್ನಡ ಚಿತ್ರರಂಗದ ಸಮಸ್ಯೆಗಳತ್ತ ಪಕ್ಷಿನೋಟ ಬೀರಬಹುದಾದ…