ಬೆಂಗಳೂರು: ಟಿಪ್ಪು ಎಕ್ಸ್ ಪ್ರೆಸ್ ಮತ್ತು ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿನ ಹೆಸರುಗಳನ್ನು ರೈಲ್ವೆ ಇಲಾಖೆ ಬದಲಾವಣೆ ಮಾಡಿದೆ.
ಮೈಸೂರು -ತಾಳಗುಪ್ಪ ನಡುವೆ ಸಂಚರಿಸುವ ತಾಳಗುಪ್ಪ ಎಕ್ಸ್ ಪ್ರೆಸ್ ರೈಲಿಗೆ ಇನ್ನು ಮುಂದೆ ಕುವೆಂಪು ಎಕ್ಸ್ ಪ್ರೆಸ್ ರೈಲು ಎಂದು ಬದಲಾವಣೆ ಮಾಡಲಾಗಿದೆ.
ಈ ಸಂಬಂಧ ಕೇಂದ್ರ ರೈಲ್ವೆ ಮಂಡಳಿ ಅದೇಶವನ್ನು ಹೊರಡಿಸಿದೆ. ಮೈಸೂರು ತಾಳಗುಂದ ಎಕ್ಸ್ಪ್ರೆಸ್ ರೈಲಿಗೆ ಕುವೆಂಪು ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡಿರುವುದಾಗಿ ರೈಲ್ವೆ ಮಂಡಳಿಯ ಉಪನಿರ್ದೇಶಕ ರಾಜೇಶ್ ಕುಮಾರ್ ಅವರು ನೈರುತ್ಯ ರೈಲ್ವೆ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.
ರೈಲ್ವೆ ಸಚಿವಾಲಯ ಆದೇಶ ಪತ್ರವನ್ನು ತಮ್ಮ ಟ್ವೀಟರ್ ನಲ್ಲಿ ಸಂಸದ ಪ್ರತಾಪ್ ಸಿಂಹ ರವರು ಹಂಚಿಕೊಂಡು ಇನ್ನು ಮುಂದೆ ಟಿಪ್ಪು ಎಕ್ಸ್ಪ್ರೆಸ್ ಬದಲು ಒಡೆಯರ್ ಎಕ್ಸ್ಪ್ರೆಸ್ ನಿಮಗೆ ಸೇವೆ ಒದಗಿಸಲಿದೆ. ಜೊತೆಗೆ ಮೈಸೂರು ತಾಳಗುಪ್ಪ ಬದಲು ಕುವೆಂಪು ಎಕ್ಸ್ಪ್ರೆಸ್ ಆಗಿ ಬದಲಾಗಿದೆ ಇದಕ್ಕೆ ಕಾರಣರಾದ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಸಚಿವ ಪ್ರಹ್ಲಾದ್ ಜೋಶಿ ಹಾಗೂ ಕುವೆಂಪು ಹೆಸರು ಸೂಚಿಸಿದ ಡಿ.ಪಿ ಸತೀಶ್ ಅವರಿಗೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…