ಜಿಲ್ಲೆಗಳು

ಟಿಪ್ಪು ನಿಜ ಕನಸುಗಳುʼ ಪುಸ್ತಕ ಮಾರಾಟ, ಹಂಚಿಕೆ ಸರಾಗ: ತಾತ್ಕಾಲಿಕ ಪ್ರತಿಬಂಧಕಾದೇಶ ತೆರವು ಮಾಡಿದ ನ್ಯಾಯಾಲಯ

ಬೆಂಗಳೂರು: ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ಅವರು ರಚಿಸಿರುವ “ಟಿಪ್ಪು ನಿಜ ಕನಸುಗಳು” ಪುಸ್ತಕವನ್ನು ಆನ್‌ಲೈನ್‌ನಲ್ಲಿ ಸೇರಿದಂತೆ ಎಲ್ಲಿಯೂ ಮಾರಾಟ ಮತ್ತು ಹಂಚಿಕೆ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯವು ನವೆಂಬರ್‌ 21ರಂದು ಮಾಡಿದ್ದ ತಾತ್ಕಾಲಿಕ ಪ್ರತಿಬಂಧಕಾದೇಶವನ್ನು ಗುರುವಾರ ತೆರವು ಮಾಡಿದೆ.

ಬೆಂಗಳೂರು ನಿವಾಸಿಯಾದ ಜಿಲ್ಲಾ ವಕ್ಫ್‌ ಮಂಡಳಿಯ ಮಾಜಿ ಅಧ್ಯಕ್ಷ ರಫಿವುಲ್ಲಾ ಬಿ ಎಸ್‌ ಎಂಬವರು ಸಲ್ಲಿಸಿದ್ದ ಅಸಲು ದಾವೆಗೆ ಆಕ್ಷೇಪಿಸಿದ್ದ ಪ್ರತಿವಾದಿಗಳ ವಾದವನ್ನು 15ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರಾದ ಜೆ ಆರ್‌ ಮೆಂಡೋನ್ಸಾ ಅವರ ನೇತೃತ್ವದ ಪೀಠವು ಮಾನ್ಯ ಮಾಡಿದೆ. ಇದರೊಂದಿಗೆ ಕೃತಿಕಾರ ಅಡ್ಡಂಡ ಕಾರ್ಯಪ್ಪ, ಪುಸ್ತಕ ಪ್ರಕಟಿಸಿರುವ ಅಯೋಧ್ಯಾ ಪ್ರಕಾಶನ, ಪುಸ್ತಕ ಮುದ್ರಿಸಿರುವ ರಾಷ್ಟ್ರೋತ್ಥಾನ ಮುದ್ರಣಾಲಯವನ್ನು ಪುಸ್ತಕ ಹಂಚಿಕೆ ಮತ್ತು ಮಾರಾಟ ಮಾಡದಂತೆ ನ್ಯಾಯಾಲಯವು ನಿರ್ಬಂಧಿಸಿದ್ದ ಆದೇಶವು ತೆರವುಗೊಂಡಿದ್ದು, ವಿಸ್ತೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ.

“ಮಧ್ಯಂತರ ಆದೇಶ ವಿಸ್ತರಿಸುವಂತೆ ಕೋರಿ ಫಿರ್ಯಾದಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಲಾಗಿದೆ. 2022ರ ನವೆಂಬರ್‌ 21ರಂದು ಈ ನ್ಯಾಯಾಲಯ ಮಾಡಿದ್ದ ಮಧ್ಯಂತರ ಆದೇಶವನ್ನು ತೆರವು ಮಾಡಲಾಗಿದೆ” ಎಂದು ಪೀಠವು ಆದೇಶದಲ್ಲಿ ಹೇಳಿದೆ.

ನ್ಯಾಯಾಲಯವು ನವೆಂಬರ್‌ 21ರಂದು “ನಾಟಕದಲ್ಲಿ ವ್ಯಕ್ತಪಡಿಸಿರುವ ವಿಚಾರಗಳು ತಪ್ಪಾಗಿದ್ದು, ಟಿಪ್ಪು ಸುಲ್ತಾನ್ ಬಗ್ಗೆ ತಪ್ಪು ಮಾಹಿತಿಯನ್ನು ಪುಸ್ತಕ ಒಳಗೊಂಡಿದೆ‌. ಇದನ್ನು ಹಂಚಿಕೆ ಮಾಡಿದರೆ, ಫಿರ್ಯಾದಿಗೆ ಸರಿಪಡಿಸಲಾರದ ನಷ್ಟ ಉಂಟಾಗಲಿದೆ. ಅಲ್ಲದೇ, ಪುಸ್ತಕವು ಕೋಮು ಶಾಂತಿ ಮತ್ತು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡುವ ಸಾಧ್ಯತೆ ಇದ್ದು, ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುವ ಅಪಾಯವಿದೆ. ಪ್ರತಿವಾದಿಗಳು ನ್ಯಾಯಾಲಯದ ಮುಂದೆ ಹಾಜರಾಗಲು ಬಾಕಿ ಇರುವಾಗ ಒಂದೊಮ್ಮೆ ಪುಸ್ತಕ ಹಂಚಿಕೆ ಮಾಡಿದರೆ ಅರ್ಜಿಯ ಉದ್ದೇಶ ಸೋಲಲಿದೆ. ಸಾಮಾನ್ಯವಾಗಿ ವಿವಾದ ಸೃಷ್ಟಿಸಿದ ಪುಸ್ತಕಗಳು ಬಹುಬೇಗ ಮಾರಾಟವಾಗುತ್ತವೆ. ಹೀಗಾಗಿ, ಈ ಹಂತದಲ್ಲಿ ಪ್ರಯೋಜನದ ಸಂತುಲಿತತೆಯು ಫಿರ್ಯಾದಿಗಳ ಪರವಾಗಿದೆ” ಎಂದು ಪ್ರತಿಬಂಧಕಾದೇಶ ಮಾಡಿತ್ತು.

andolana

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

2 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

2 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

2 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

2 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

2 hours ago