ಚಾಮರಾಜನಗರ: ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದ ಟಿಪ್ಪು ಸುಲ್ತಾನ್ ಅವರು ಹಿಂದೂ ವಿರೋಧಿ ಹಾಗೂ ಧರ್ವಾಂಧ ಆಗಿರಲಿಲ್ಲ ಎಂದು ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು.
ನಗರದ ಗಾಳಿಪುರ ಬಡಾವಣೆಯಲ್ಲಿ ಟಿಪ್ಪು ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿದ್ದ ಹಜರತ್ ಟಿಪ್ಪು ಸುಲ್ತಾನ್ ಅವರ ಸ್ಮರಣೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಟಿಪ್ಪು ಹಿಂದೂ ವಿರೋಧಿಯಾಗಿದ್ದರೆ ದೇವಸ್ಥಾನಗಳಿಗೆ ಕೊಡುಗೆ ನೀಡುತ್ತಿರಲಿಲ್ಲ ಎಂದರು.
ಟಿಪ್ಪು ಸುಲ್ತಾನ್ ಉತ್ತಮ ಆಡಳಿತಗಾರನಾಗಿ ಅನೇಕ ಸುಧಾರಣೆ ಮಾಡಿದ್ದರು. ಹಿಂದೂ, ಮುಸ್ಲಿಂ ಎನ್ನದೆ ಸಮಾನತೆ ಕೊಟ್ಟಿದ್ದಾರೆ. ಕೆಲವರು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಟಿಪ್ಪು ಇತಿಹಾಸವನ್ನು ತಿರುಚುತ್ತಿದ್ದಾರೆ ಎಂದರು.
ಮಾಜಿ ಶಾಸಕ ವಾಟಾಳ್ ನಾಗರಾಜ್ ಮಾತನಾಡಿ, ನಾಡಿಗಾಗಿ ತನ್ನ ಇಬ್ಬರು ಮಕ್ಕಳನ್ನು ಬ್ರಿಟಿಷರಿಗೆ ಒತ್ತೆ ಇಟ್ಟಿದ್ದ ಟಿಪ್ಪು ದೇಶ ಕಂಡ ಎತ್ತರದ ವ್ಯಕ್ತಿತ್ವ. ಅವರ ಬಗ್ಗೆ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದು ಹೇಳಿದರು.
ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮಾತನಾಡಿದರು. ಮೈದಾನದಲ್ಲಿ ಟಿಪ್ಪು ಲಾಂಛನವಿರುವ ಬಾವುಟ ಹಾರಿಸಲಾಯಿತು. ಮುಖಂಡರಾದ ಸೈುಂದ್ ರಫಿ, ನಾಯಾಜ್, ಅಸ್ಲಾಂ ಷರೀಫ್, ಜಾಕೀರ್ ಪಾಷ, ಅಕ್ರಂ, ತೇಜವುಲ್ಲಾ ಖಾನ್, ನೂರ್ ವುಲ್ಲಾಖಾನ್, ನವೀದ್ ಖಾನ್ ಇತರರು ಹಾಜರಿದ್ದರು.
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…