Mysore
31
overcast clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

ಡಿ.28, 29ರಂದು ‘ಟಿಪ್ಪು ನಿಜಕನಸುಗಳು’ ನಾಟಕ ಪ್ರದರ್ಶನ

ಚಿತ್ರದುರ್ಗ: ಟಿಪ್ಪು ಸುಲ್ತಾನ್‌ ಇತಿಹಾಸಕ್ಕೆ ಸಂಬಂಧಿಸಿದಂತೆ ರಂಗಾಯಣದ ಕಲಾವಿದರು ರೂಪಿಸಿದ ವಿಶೇಷ ರಂಗಪ್ರಯೋಗ ‘ಟಿಪ್ಪು ನಿಜಕನಸುಗಳು’ ನಾಟಕ ಡಿ.28 ಮತ್ತು 29ರಂದು ನಗರದ ತರಾಸು ರಂಗಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ. 

ಮೂರುವರೆ ಗಂಟೆಯ ಈ ಪ್ರದರ್ಶನ ಸಂಜೆ 6ಕ್ಕೆ ಆರಂಭವಾಗಲಿದೆ. ಮಧ್ಯೆ ಹತ್ತು ನಿಮಿಷ ವಿರಾಮ ಇರಲಿದೆ. ₹ 100 ಟಿಕೆಟ್‌ ನಿಗದಿಪಡಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ಹಾಗೂ www.rangayana.org ಜಾಲತಾಣದಲ್ಲಿ ಟಿಕೆಟ್‌ ಲಭ್ಯ ಇವೆ ಎಂದು ನಾಟಕವನ್ನು ರಚಿಸಿ ನಿರ್ದೇಶಿಸಿದ ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಸುದ್ದಿಗಾರರಿಗೆ ಸೋಮವಾರ ಮಾಹಿತಿ ನೀಡಿದರು.

‘ಈ ವಿಶೇಷ ರಂಗಪ್ರಯೋಗ ರಾಜ್ಯದ ಎಲ್ಲೆಡೆ ಪ್ರದರ್ಶನಗೊಳ್ಳಬೇಕು ಎಂಬ ಯೋಜನೆಯನ್ನು ರಂಗಾಯಣ ರೂಪಿಸಿದೆ. ರಂಗಪಯಣದ ಮೊದಲ ಹೆಜ್ಜೆ ಬೆಂಗಳೂರಿನಿಂದ ಆರಂಭಗೊಂಡಿದೆ. ಡಿ.27ರಂದು ದಾವಣಗೆರೆ, ಡಿ.31, ಜ.1ರಂದು ಶಿವಮೊಗ್ಗ, ದಕ್ಷಿಣ ಕನ್ನಡ, ಮಂಡ್ಯ ಸೇರಿ ಹಲವೆಡೆ ಮೊದಲ ಹಂತದಲ್ಲಿ ನಾಟಕ ಪ್ರದರ್ಶನಗೊಳ್ಳಲಿದೆ. ಟಿಕೆಟ್‌ ಖರೀದಿಸಿ ನಾಟಕ ವೀಕ್ಷಿಸಿ’ ಎಂದು ಮನವಿ ಮಾಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!